ಭಾರೀ ಮಳೆ: ಉತ್ತರಾಖಂಡಕ್ಕೆ ರೆಡ್ ಅಲರ್ಟ್; ಕಣಿವೆಯಲ್ಲಿ ದಿಢೀರ್ ಪ್ರವಾಹ
Team Udayavani, Jul 20, 2022, 8:14 PM IST
ನವದೆಹಲಿ: ಒಂದೆರಡು ದಿನ ಬಿಡುವು ಕೊಟ್ಟಿದ್ದ ವರುಣ ಮತ್ತೆ ಅಬ್ಬರಿಸತೊಡಗಿದ್ದಾನೆ. ಉತ್ತರಾಂಖಡ, ಜಮ್ಮು ಮತ್ತು ಕಾಶ್ಮೀರ, ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಅನೇಕ ಕಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಿದೆ. ಇಲ್ಲಿನ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬುಧವಾರ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿತ್ತು.
ದಿಢೀರ್ ಪ್ರವಾಹ:
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬುಧವಾರ ಮೇಘ ಸ್ಫೋಟ ಸಂಭವಿಸಿ ದಿಢೀರ್ ಪ್ರವಾಹ ಉಂಟಾಗಿದೆ. ಪರಿಣಾಮ ಶಾಲಾ ಕಟ್ಟಡಗಳು ಸೇರಿದಂತೆ 13 ಕಟ್ಟಡಗಳನ್ನು ಕೊಚ್ಚಿಹೋಗಿದ್ದು, 20ರಷ್ಟು ಸೇತುವೆಗಳು ಹಾನಿಗೀಡಾಗಿವೆ.
ವಿಮಾನ ಸಂಚಾರಕ್ಕೆ ಅಡ್ಡಿ:
ದೆಹಲಿಯಲ್ಲೂ ಬುಧವಾರ ಮಧ್ಯಾಹ್ನದಿಂದೀಚೆಗೆ ಧಾರಾಕಾರ ಮಳೆಯಾಗುತ್ತಿರುವ ಕಾರಣ, ವಿಮಾನಗಳ ಸಂಚಾರಕ್ಕೂ ಅಡ್ಡಿಯಾಗಿದೆ. ದೆಹಲಿ ಏರ್ಪೋರ್ಟ್ನಲ್ಲಿ 7 ವಿಮಾನಗಳ ಪಥ ಬದಲಿಸಿದರೆ, 40 ವಿಮಾನಗಳ ಸಂಚಾರ ವಿಳಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು