ಊರಲ್ಲೇ ವಲಸಿಗರಿಗೆ ಕೆಲಸ?

ಗ್ರಾಮೀಣ ಕಾಮಗಾರಿಗಳಲ್ಲಿ ಊರು ಸೇರಿದ ವಲಸೆ ಕಾರ್ಮಿಕರ ಬಳಕೆ ಸಾಧ್ಯತೆ

Team Udayavani, Jun 12, 2020, 9:25 AM IST

ಊರಲ್ಲೇ ವಲಸಿಗರಿಗೆ ಕೆಲಸ?

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ : ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಸೇರಿಸುವುದು ಮಾತ್ರವಲ್ಲ, ಅವರಿಗೆ ದುಡಿಯುವ ಮಾರ್ಗವನ್ನು ಕಲ್ಪಿಸಲು ಕೇಂದ್ರ ಸರಕಾರ ಹೆಜ್ಜೆಯಿಟ್ಟಿದೆ. ಇದಕ್ಕಾಗಿ, ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಅಂದಾಜು 70,000 ಕಿ.ಮೀ.ವರೆಗಿನ ರಸ್ತೆ ನಿರ್ಮಾಣ, ಬಡವರಿಗೆ 50 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋವಿಡ್ ಲಾಕ್‌ಡೌನ್‌ನಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಪೂರ್ತಿಗೊಳಿಸುವ ಹಾಗೂ ಅದೇ ಕಾಮಗಾರಿಗಳಿಂದ ವಲಸೆ ಕಾರ್ಮಿಕರ ದುಡಿಮೆಗೆ ದಾರಿ ತೋರುವ ಎರಡು ಅನುಕೂಲಗಳನ್ನು ಸರಕಾರ ಆಲೋಚಿಸಿದೆ ಎಂದಿರುವ ಅವರು, ಈ ಕುರಿತಂತೆ ನೀಲನಕ್ಷೆ ಸಿದ್ಧವಾಗಿದ್ದು, ಎಲ್ಲಾ ರಾಜ್ಯಗಳಿಗೆ ಈ ಕುರಿತಂತೆ ಸೂಚನೆ ರವಾನಿಸಲಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪುನರಾರಂಭಿಸಲು ಹಾಗೂ ಆ ಕಾಮಗಾರಿಗಳಲ್ಲಿ ಕಟ್ಟಡ ನಿರ್ಮಾಣ ಕೌಶಲ್ಯವಿರುವ ವಲಸೆ ಕಾರ್ಮಿಕರನ್ನು ಹೆಚ್ಚಾಗಿ ಬಳಸಿಕೊಳ್ಳುವಂತೆ ರಾಜ್ಯ ಸರಕಾರಗಳಿಗೆ ತಾಕೀತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಬಾಕಿಯಿರುವ ಸಡಕ್‌ ಯೋಜನೆ
ಪ್ರಧಾನ ಮಂತ್ರಿ ಗ್ರಾಮೀಣ ಸಡಕ್‌ ಯೋಜನೆಯಡಿ (ಪಿಎಂಜಿಎಸ್‌ವೈ) ಕಳೆದ ವರ್ಷ ನಿರ್ಮಿಸಲು ಉದ್ದೇಶಿಸಿದ್ದ ರಸ್ತೆ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿಲ್ಲ. ಕಳೆದ ವರ್ಷ 1.74ಲಕ್ಷ ರಸ್ತೆ ಕಾಮಗಾರಿ ನಿರ್ಮಾಣದ ಗುರಿ ಇಟ್ಟುಕೊಳ್ಳಲಾಗಿತ್ತು. ಆದರೆ, ಅದರಲ್ಲಿ 1.57ಲಕ್ಷ ರಸ್ತೆಗಳನ್ನು ಮಾತ್ರ ನಿರ್ಮಿಸಲಾಗಿದೆ. ಅದರ ಜೊತೆಯಲ್ಲೇ, ಹೆಚ್ಚುವರಿಯಾಗಿ 14,000 ಕಿ.ಮೀ.ವರೆಗಿನ ಹೊಸ ರಸ್ತೆ ಕಾಮಗಾರಿಗಳನ್ನೂ ನಡೆಸಲು ಉದ್ದೇಶಿ ಸಲಾಗಿದ್ದು, ಒಟ್ಟಾರೆಯಾಗಿ 70,000 ಕಿ.ಮೀ. ವ್ಯಾಪ್ತಿಯ ಕಾಮಗಾರಿಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಈ ಕಾಮಗಾರಿಗಳಲ್ಲಿ ಹಳೆ ರಸ್ತೆಗಳ ಉನ್ನತೀಕರಣ ಹಾಗೂ ಹೊಸ ರಸ್ತೆಗಳ ಕಾಮಗಾರಿ ಜೊತೆಗೇ ನಡೆಯಲಿವೆ.

50 ಲಕ್ಷ ಮನೆಗಳು
ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ, (ಪಿಎಂಎವೈ) ಪ್ರಸಕ್ತ ಹಣಕಾಸು ವರ್ಷದಲ್ಲಿ 60 ಲಕ್ಷದ 15 ಸಾವಿರ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿತ್ತು. ಮಂಜೂರಾಗಿದ್ದ ಮನೆಗಳಲ್ಲಿ 1,95,000 ಮನೆಗಳು ಮಾತ್ರ ಪೂರ್ತಿಯಾಗಿದ್ದು ಉಳಿದ 58,20,000 ಮನೆಗಳನ್ನು ಇನ್ನು ನಿರ್ಮಿಸಬೇಕಿದೆ.

90-95 ದಿನ ಉದ್ಯೋಗ ಖಾತ್ರಿ
ಸರಕಾರದ ಬಳಿಯಿರುವ ಮಾಹಿತಿಯ ಪ್ರಕಾರ, ಮೂರನೇ 2ರಷ್ಟು ವಲಸೆ ಕಾರ್ಮಿಕರು ಈ ಕಾಮಗಾರಿಗಳಲ್ಲಿ ನೇರವಾಗಿ ಭಾಗಿಯಾಗಬಹುದಾಗಿದ್ದು, ಉಳಿದ ಕಾರ್ಮಿಕರನ್ನು ಈ ಕಾಮಗಾರಿಗಳಿಗೆ ಸಂಬಂಧಿಸಿದ ಇತರೆ ಕೆಲಸಗಳಲ್ಲಿ ಸಹಾಯಕರನ್ನಾಗಿ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ವರ್ಷದಲ್ಲಿ 90ರಿಂದ 95 ದಿನಗಳವರೆಗೆ ಕಾರ್ಮಿಕರಿಗೆ ಕೆಲಸ ಸಿಗುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಅಧಿಕಾರಿ ತಿಳಿಸಿದ್ದಾರೆ.

24 ಗಂಟೆಗಳಲ್ಲಿ 357 ಸಾವು, 9,996 ಹೊಸ ಪ್ರಕರಣಗಳು
ಒಂದೇ ದಿನದಲ್ಲಿ ಗರಿಷ್ಠ ಕೋವಿಡ್ ಪ್ರಕರಣಗಳಿಗೆ ದೇಶ ಮತ್ತೂಮ್ಮೆ ಸಾಕ್ಷಿಯಾಗಿದೆ. ಬುಧವಾರ ಬೆಳಗ್ಗೆ 8ರಿಂದ ಗುರುವಾರ ಬೆಳಗ್ಗೆ 8ರವರೆಗಿನ 24 ಗಂಟೆಗಳ ಅವಧಿಯಲ್ಲಿ 357 ಮಂದಿ ಸೋಂಕಿಗೆ ಬಲಿಯಾಗಿದ್ದು, 9,996 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನದಲ್ಲಿ ಸಾವಿನ ಸಂಖ್ಯೆ 300ರ ಗಡಿ ದಾಟಿರುವುದು ಇದೇ ಮೊದಲು. ಈ ನಡುವೆ, ಸತತ ಎರಡನೇ ದಿನವೂ ಗುಣಮುಖರಾದವರ ಸಂಖ್ಯೆಯು ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು ಮೀರಿದ್ದು, ದೇಶದ ಕೋವಿಡ್ ಗುಣಮುಖ ಪ್ರಮಾಣ ಶೇ.49.21ಕ್ಕೇರಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈವರೆಗೆ ಒಟ್ಟಾರೆ 1,41,028 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ನಾಲ್ಕನೇ 1 ಭಾಗ ಮುಂಬಯಿನಲ್ಲಿ
ದೇಶದ ಒಟ್ಟು ಸೋಂಕಿತರ ಸಂಖ್ಯೆಯ ನಾಲ್ಕನೇ ಒಂದು ಭಾಗ ಮುಂಬಯಿನಲ್ಲಿಯೇ ಇದೆ. ಅದಕ್ಕೆ ಪೂರಕವಾಗಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಟ್ಟು ಪ್ರಕರಣಗಳ ಪೈಕಿ ಶೇ.20ರಿಂದ ಶೇ¬.25 ಸೋಂಕಿತರು ದೇಶದ ಆರ್ಥಿಕ ರಾಜಧಾನಿ ಮತ್ತು ಅದರ ಸುತ್ತ ಇರುವ ಉಪನಗರಗಳಲ್ಲೇ ಇದ್ದಾರೆ ಎಂಬುದು ನಿಜಕ್ಕೂ ಚಿಂತಿಸಬೇಕಾದ ವಿಷಯ. ಮುಂಬಯಿ ನಗರ, ಉಪನಗರ ಜಿಲ್ಲೆಗಳನ್ನು ಹೊಂದಿರುವ ಮಹಾನಗರವು 603 ಚದರ ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ. ಜೊತೆಗೆ ಥಾಣೆ ನಗರ, ಪಾಲ್ಗರ್‌ ಮತ್ತು ರಾಯಗಢ ಜಿಲ್ಲೆಗಳ ಕೆಲ ಭಾಗಗಳೂ ಮುಂಬಯಿ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರುತ್ತವೆ.
ಮಳೆ ಪ್ರವೇಶ: ಇದೇ ವೇಳೆ,ಮಹಾರಾಷ್ಟ್ರಕ್ಕೆ ಗುರುವಾರ ನೈಋತ್ಯ ಮುಂಗಾರು ಪ್ರವೇಶಿಸಿದ್ದು, ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ವಿವಿಧ ಭಾಗಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಈಗಾಗಲೇ ಮಹಾರಾಷ್ಟ್ರ ಕೊರೊನಾದಿಂದ ತತ್ತರಿಸಿದ್ದು, ಇದೀಗ ಮುಂಗಾರು ಶುರುವಾಗಿರುವುದರಿಂದ ಕಟ್ಟೆಚ್ಚರ ವಹಿಸಬೇಕಾಗಿದೆ.

70,000 ಕಿ.ಮೀ.- ಪಿಎಂಜಿಎಸ್‌ವೈ ಅಡಿಯಲ್ಲಿ ನಿರ್ಮಾಣವಾಗಲಿರುವ ರಸ್ತೆ
58,20,000 ಪಿಎಂಎವೈ ಅಡಿಯಲ್ಲಿ ನಿರ್ಮಾಣವಾಗಲಿರುವ ಮನೆ
90 95 ವರ್ಷದಲ್ಲಿ ವಲಸೆ ಕಾರ್ಮಿಕರಿಗೆ ಸಿಗಲಿರುವ ಉದ್ಯೋಗ ಖಾತ್ರಿ ದಿನಗಳು

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.