Panaji: ದಕ್ಷಿಣ ಗೋವಾದಲ್ಲಿ ಕಡಿಮೆಯಾದ ಪ್ರವಾಸಿಗರ ಸಂಖ್ಯೆ… ಇದೇ ಕಾರಣ ಎಂದ ವ್ಯಾಪಾರಸ್ಥರು


Team Udayavani, Mar 2, 2024, 4:42 PM IST

Panaji: ದಕ್ಷಿಣ ಗೋವಾದಲ್ಲಿ ಕಡಿಮೆಯಾದ ಪ್ರವಾಸಿಗರ ಸಂಖ್ಯೆ… ಇದೇ ಕಾರಣ ಎಂದ ವ್ಯಾಪಾರಸ್ಥರು

ಪಣಜಿ: ರಾಜ್ಯದಲ್ಲಿ ಪ್ರವಾಸಿ ಋತು ಪ್ರಾರಂಭವಾಗಿದೆ. ಆದರೆ ದಕ್ಷಿಣ ಗೋವಾಕ್ಕಿಂತ ಹೆಚ್ಚಿನ ಪ್ರವಾಸಿಗರು ಉತ್ತರ ಗೋವಾ ಪ್ರವೇಶಿಸುತ್ತಿದ್ದಾರೆ. ದಾಬೋಲಿಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ವಿಮಾನಗಳನ್ನು ಮೋಪಾ ವಿಮಾನ ನಿಲ್ದಾಣಕ್ಕೆ ತಿರುಗಿಸಿದ ಪರಿಣಾಮ ದಕ್ಷಿಣ ಗೋವಾದ ಪ್ರವಾಸೋದ್ಯಮದ ಮೇಲೆ ಪರಿಣಾಮ ಬೀರಲಾರಂಭಿಸಿದೆ.

ದಕ್ಷಿಣ ಗೋವಾದ ಕರಾವಳಿ ಪ್ರದೇಶಗಳ ವ್ಯಾಪಾರ ಮತ್ತು ಪ್ರವಾಸಿಗರು ಇಳಿಮುಖವಾಗಿರುವುದರಿಂದ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಿಗಳು ಆತಂಕಕ್ಕೊಳಗಾಗಿದ್ದಾರೆ.

ದಕ್ಷಿಣ ಗೋವಾದ ಬೆಳ್ಳಿ-ಮರಳಿನ ಕೊಲ್ವಾ ಕಡಲತೀರವು ವಿಶ್ವಪ್ರಸಿದ್ಧವಾಗಿದೆ, ಆದರೆ ಪ್ರವಾಸಿಗರು ಇಳಿಮುಖವಾಗಿರುವುದರಿಂದ ಕರಾವಳಿಯಾದ್ಯಂತ ವ್ಯಾಪಾರಕ್ಕೂ ಹೊಡೆತ ಬಿದ್ದಿದೆ. ವಿದೇಶಿ ಪ್ರವಾಸಿಗರು ಈ ಬೀಚ್‍ಗೆ ಬರುವುದಿಲ್ಲ, ಸ್ಥಳೀಯ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ ಎಂದು ಬೀಚ್‍ನಲ್ಲಿರುವ ವ್ಯಾಪಾರಸ್ಥರು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಕೋಲ್ವಾದ ಉದ್ಯಮಿ ಡಿಯಾಗೋ ಡಿಸಿಲ್ವಾ ಪ್ರತಿಕ್ರಿಯೆ ನೀಡಿ-ದಾಬೋಲಿಂ ವಿಮಾನ ನಿಲ್ದಾಣದಿಂದ ಮೋಪಾ ವಿಮಾನ ನಿಲ್ದಾಣದ ಕಡೆಗೆ ವಿಮಾನಗಳನ್ನು ತಿರುಗಿಸಿರುವುದು ನಮಗೆ ಮಾಡಿದ ಅನ್ಯಾಯವಾಗಿದೆ ಎಂದು ಹೇಳಿದರು. ಕೆಲವು ಸಂಖ್ಯೆಯಲ್ಲಿ ದೇಶೀಯ ಪ್ರವಾಸಿಗರು ಬರುತ್ತಿದ್ದರೂ ತೃಪ್ತಿಕರವಾಗಿಲ್ಲ ಎಂದರು.

ಪ್ರತಿ ವರ್ಷ ಇಂಗ್ಲೆಂಡ್‍ನಿಂದ ಬರುವ ಪ್ರವಾಸಿಗರ ಗುಂಪು ನನ್ನನ್ನು ಸಂಪರ್ಕಿಸುತ್ತಿದ್ದು, ಇನ್ನು ಮುಂದೆ ತಾನು ಮತ್ತು ತನ್ನ ಸಹೋದ್ಯೋಗಿಗಳು ಉತ್ತರ ಗೋವಾದಲ್ಲಿ ಉಳಿದುಕೊಳ್ಳುವುದಾಗಿ ಎಂದು ನಿವಾಸಿ ಹೋಟೆಲ್ ಉದ್ಯಮಿಯೊಬ್ಬರು ಹೇಳಿದರು. ಇದಕ್ಕೂ ಮುನ್ನ ವಿದೇಶಿ ಪ್ರವಾಸಿಗರ ಗುಂಪು ದಾಬೋಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯುತ್ತಿತ್ತು. ಇದೀಗ ಅವರ ವಿಮಾನವನ್ನು ಮೊಪಾ ಏರ್ ಬೇಸ್ ನಲ್ಲಿ ಇಳಿಸಲಾಗುತ್ತಿದೆ. ಇದರಿಂದ ನಮಗೆ ತೀವ್ರ ಹೊಡೆತ ಬಿದ್ದಿದೆ ಎಂದರು.

ಪ್ರವಾಸಿಗರ ಸಂಖ್ಯೆಯಲ್ಲಿ ಇಷ್ಟೊಂದು ಇಳಿಮುಖವಾಗಿರುವುದು ಇದೇ ಮೊದಲು ಎಂದು ಬಾಣಾವಳಿಯಲ್ಲಿ ವಾಟರ್ ಸ್ಪೋಟ್ರ್ಸ್ ಬೋಟ್ ಮತ್ತು ನಿವಾಸಿ ಹೋಟೆಲ್ ಉದ್ಯಮಿ ಪೀಲೆ ಫೆನಾರ್ಂಡಿಸ್ ಹೇಳಿದರು. ದಾಬೋಲಿ ವಿಮಾನ ನಿಲ್ದಾಣವು ಕಾರ್ಯನಿರ್ವಹಿಸುತ್ತಿದೆಯಾದರೂ, ಅನೇಕ ದೇಶೀಯ ಮತ್ತು ವಿದೇಶಿ ಪ್ರವಾಸಿಗರು ಮೋಪಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ ದಕ್ಷಿಣ ಗೋವಾಕ್ಕೆ ಬರುವ ಪ್ರವಾಸಿಗರು ತಿರುಗಿ ಬಿದ್ದಿದ್ದಾರೆ ಎಂದರು. ಆರ್ಥಿಕವಾಗಿ ದುಷ್ಪರಿಣಾಮ ಬೀರಿ ಕೆಲಸದಿಂದ ಕೈಬಿಡುವ ಸರದಿ ಬಂದಿದೆ ಎಂದರು. ಪ್ರತಿ ವರ್ಷ ವಿದೇಶದಿಂದ ದಕ್ಷಿಣ ಗೋವಾಕ್ಕೆ ಬರುವ ಪ್ರವಾಸಿ ತನ್ನನ್ನು ಕರೆತರುವ ವಿಮಾನವು ಮೋಪಾದಲ್ಲಿ ಇಳಿಯುತ್ತಿದೆ ಎಂದು ಹೇಳಿದರು.

ನಮ್ಮ ವ್ಯಾಪಾರ ಕುಸಿದಿದೆ
ದಾಬೋಲಿ ಏರ್ ಬೇಸ್ ನಲ್ಲಿ ಇಳಿಯುವ ಹಲವು ವಿಮಾನಗಳು ಮೊಪಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುತ್ತಿರುವುದರಿಂದ ಉತ್ತರ ಗೋವಾದ ಉದ್ಯಮಿಗಳಿಗೆ ಇದರಿಂದ ಅನುಕೂಲವಾಗಲಿದೆ. ಅಲ್ಲದೆ ನೆರೆಯ ಮಹಾರಾಷ್ಟ್ರದ ಸಿಂಧುದುರ್ಗದ ಉದ್ಯಮಿಗಳಿಗೂ ಲಾಭವಾಗಲಿದೆ. ಎಲ್ಲಾ ಪ್ರವಾಸಿ ವಿಮಾನಗಳು ಮೋಪಾ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಾರಂಭಿಸಿದರೆ, ದಕ್ಷಿಣ ಗೋವಾದಲ್ಲಿ ಪ್ರವಾಸಿಗರು ಇರುವುದಿಲ್ಲ, ಹೀಗಾಗಿ ದಕ್ಷಿಣದ ಪ್ರವಾಸೋದ್ಯಮ ವ್ಯಾಪಾರ ಕುಸಿಯುತ್ತದೆ ಎಂದು ಆಲ್ ಗೋವಾದ ಶಾಕ್ ಉದ್ಯಮಿ ಕ್ರೂಸ್ ಕಾರ್ಡೋಜ್ ಹೇಳಿದರು.

ಇದನ್ನೂ ಓದಿ: Ambani; ಪ್ರಿ ವೆಡ್ಡಿಂಗ್ ಸಂಭ್ರಮೋತ್ಸವದಲ್ಲಿ ಪಾಪ್ ಸ್ಟಾರ್ ರಿಹಾನ್ನಾ ರಾಕ್!

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.