ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್
Team Udayavani, Oct 16, 2021, 7:00 AM IST
ನಾಗಪುರ: ಜನಸಂಖ್ಯೆ ಬೆಳವಣಿಗೆ ದರ ವ್ಯತ್ಯಾಸಗಳಿಂದಾಗಿ “ಜನಸಂಖ್ಯಾ ಅಸಮತೋಲನ’ ಹೆಚ್ಚುತ್ತಿದೆ. ಇದನ್ನು ಸರಿಪಡಿಸಬೇಕಾದರೆ ದೇಶದಲ್ಲಿ ಹೊಸ “ಜನಸಂಖ್ಯಾ ನಿಯಂತ್ರಣ ನೀತಿ’ ಜಾರಿಯಾಗಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಶುಕ್ರವಾರ ನಾಗಪುರದಲ್ಲಿ ವಾರ್ಷಿಕ ವಿಜಯದಶಮಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಮುಂದಿನ 50 ವರ್ಷಗಳ ಕಾಲ ಚಾಲ್ತಿಯಲ್ಲಿ ಇರುವಂತೆ ಜನಸಂಖ್ಯಾ ನೀತಿ ಅನುಷ್ಠಾನ ಮಾಡಬೇಕು. ಜತೆಗೆ ಅದನ್ನು ಸಮಾನವಾಗಿ ಜಾರಿ ಮಾಡಬೇಕು’ ಎಂದಿದ್ದಾರೆ. ಇದೇ ವೇಳೆ ಅವರು 2015ರ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಕೈಗೊಂಡಿದ್ದ ನಿರ್ಣಯವನ್ನು ಪ್ರಸ್ತಾವಿಸಿದ್ದು, “ಪ್ರಸ್ತುತ ಸನ್ನಿವೇಶದಲ್ಲಿ ಸ್ಥಳೀಯ ಹಿಂದೂಗಳ ಹತ್ಯೆ, ಅವರನ್ನು ಓಡಿಸಲು ಒತ್ತಡ ಹೇರುವಂಥ ಕೃತ್ಯಗಳು ನಡೆಯುತ್ತಿವೆ ಪಶ್ಚಿಮ ಬಂಗಾಲದ ಹಿಂಸಾಚಾರ ಇದಕ್ಕೊಂದು ನಿದರ್ಶನ’ ಎಂದಿದ್ದಾರೆ.
ಇದನ್ನೂ ಓದಿ:“ಸರ್ದಾರ್ ಪಟೇಲ್ರ ಹಾದಿಯಲ್ಲೇ ನಡೆಯಿರಿ’
ಭಕ್ತರಿಂದ ದೇಗುಲ ನಿರ್ವಹಣೆ
ದೇಗುಲಗಳನ್ನು ನಿರ್ವಹಿಸುವ ಹಕ್ಕು ಭಕ್ತರಿಗೇ ಸಿಗಬೇಕು. ದೇಗುಲಗಳ ಸಂಪತ್ತನ್ನು ಹಿಂದೂ ಸಮುದಾಯದ ಅಭಿವೃದ್ಧಿಗೆ ಮಾತ್ರವೇ ಬಳಸಬೇಕು ಎಂದೂ ಭಾಗವತ್ ಒತ್ತಾಯಿಸಿದ್ದಾರೆ. ಈ ಸಂಪತ್ತನ್ನು ಇತರರ ಏಳಿಗೆಗಾಗಿ ಬಳಸುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು