ಹವಾಮಾನ ಬದಲಾವಣೆಯಲ್ಲಿ ಸೂಚ್ಯಂಕದಲ್ಲಿ ಸುಧಾರಣೆ
Team Udayavani, Dec 11, 2019, 3:52 PM IST
ಸ್ಪ್ಯಾನೀಶ್ : ಹವಮಾನ ವೈಪರೀತ್ಯದಿಂದ ದೇಶ ನಲುಗುತ್ತಿದೆ. ತಾಪಮಾನ ಏರಿಳಿತದಿಂದ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಪೆಟ್ಟು ಬೀಲುತ್ತಿದೆ ಎಂಬಿತ್ಯಾದಿ ಅಭಿಪ್ರಾಯಗಳು ಕೆಲ ತಿಂಗಳಿನಿಂದ ಕೇಳಿ ಬರುತ್ತಿರುವುದು ಸುಳ್ಳಲ್ಲ. ಆದರೆ ಇಂತಹ ಹೇಳಿಕೆಗಳನ್ನು ತಳ್ಳಿಹಾಕುವಂತಹ ಬೆಳವಣಿಗೆಯೊಂದು ನಡೆದಿದ್ದು, ಹವಾಮಾನ ಬದಲಾವಣೆ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ (ಸಿಸಿಪಿಐ) ಭಾರತ ಬೆಳವಣಿಗೆ ಕಂಡಿದೆ.
ಹವಾಮಾನ ಶೃಂಗಸಭೆಯಲ್ಲಿ ವರದಿ
ಮಂಗಳವಾರ ನಡೆದ ಸಿಒಪಿ25 ಹವಾಮಾನ ಶೃಂಗಸಭೆಯಲ್ಲಿ ಸಿಸಿಪಿಐ ಕುರಿತು ವರದಿಯನ್ನು ಬಿಡುಗಡೆ ಮಾಡಿದ್ದು, ಮೊದಲ ಬಾರಿಗೆ ಅಗ್ರ ಹತ್ತು ಸ್ಥಾನಗಳ ಪಟ್ಟಿಯಲ್ಲಿ ಮೊದಲ ಬಾರಿಗೆ ದೇಶ ಗುರುತಿಸಿಕೊಂಡಿದೆ.
9ನೇ ಸ್ಥಾನ
ಉನ್ನತ ವರ್ಗದ ಪಟ್ಟಿಯಲ್ಲಿ 9 ನೇ ಸ್ಥಾನದಲ್ಲಿರುವ ದೇಶ, ಪ್ರಸ್ತುತ ಬಳಕೆ ಮಾಡುತ್ತಿರುವ ಇಂಧನದ ಪ್ರಮಾಣ ಮತ್ತು ಹೊರಸೂಸುತ್ತಿರುವ ಮಾಲಿನ್ಯದ ಮಟ್ಟದಲ್ಲಿ ಸುಧಾರಣೆ ಕಂಡಿದ್ದು, 2030ರ ಹಸಿರು ಮನೆ ಅನಿಲ ಮಹತ್ವಾಕಾಂಕ್ಷೆ ಯೋಜನೆಯ ಉದ್ದೇಶ ಸಾಧನೆಗಾಗಿ ಪೂರಕವಾದ ವಾತಾವರಣ ಕಲ್ಪಿಸಿಕೊಡುತ್ತಿದೆ ಎಂದು ವರದಿ ಹೇಳಿದೆ.
ಉತ್ತಮ ಅಂಕ
ನವೀಕರಿಸಬಹುದಾದ ಇಂಧನಗಳ ಮರುಬಳಕೆಯಲ್ಲಿ ದೇಶಕ್ಕೆ ಉತ್ತಮ ಅಂಕ ಲಭಿಸಿದ್ದು, ನವೀಕರಿಸಬಹುದಾದ ಇಂಧನ ಬಳಕೆ ಹೆಚ್ಚಿಸುವ (2030)ಗುರಿಯ ಅವಧಿಗಿಂತ 2 ಡಿಗ್ರಿ ಸೆಲ್ಸಿಯಸ್ ಹೊಂದಾಣಿಕೆಯಷ್ಟು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಸಂಶೋಧಕರಿಂದ ಶ್ಲಾಘನೆ
ಅಧ್ಯಯನ ನಡೆಸಿದ ಸಂಧೋಧಕರು ಭಾರತೀಯ ನೀತಿಗಳನ್ನು ಶ್ಲಾ ಸಿದ್ದು, ನವೀಕರಿಸಬಹುದಾದ ಇಂಧನಗಳ ಮರುಬಳಕೆಯನ್ನು ಹೆಚ್ಚಿಸಲು ಮತ್ತು ಈ ಯೋಜನೆಯನ್ನು ಉತ್ತೇಜಿಸಲು ದೇಶ ತೆಗೆದುಕೊಂಡಿರುವ ವಿಸ್ತರಣಾ ನೀತಿಗಳು ಮಹತ್ವಾಕಾಂಕ್ಷೆಯ ಗುರಿಯನ್ನು ಪೂರೈಸಲು ಪೂರಕವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಸ್ ಮಾಲಿನ್ಯ ಹೊರಸೂಸುವಿಕೆ,ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮತ್ತು ಹವಾಮಾನ ನೀತಿಯಲ್ಲಿ ಕಳೆಪೆ ಪ್ರದರ್ಶನ ನೀಡಿದ್ದು, ಉತ್ತಮ ಪ್ರದರ್ಶನಗಳ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ, ಸ್ವೀಡನ್, ಡೆನ್ಮಾರ್ಕ್ ಮತ್ತು ಯುಕೆ ರಾಷ್ಟ್ರಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ