ಬಾಲಕೋಟ್ ದಾಳಿ ನಂತರ ಕಾಶ್ಮೀರ ಸಮಸ್ಯೆ ಸುಧಾರಣೆ
Team Udayavani, Jul 10, 2019, 5:00 AM IST
ನವದೆಹಲಿ: ಪಾಕಿಸ್ತಾನದ ಬಾಲಕೋಟ್ನಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯು ಪಡೆಯು ದಾಳಿ ನಡೆಸಿದ ನಂತರದಲ್ಲಿ ಜಮ್ಮು ಕಾಶ್ಮೀರದಲ್ಲಿ ಒಳನುಸುಳುವಿಕೆ ಪ್ರಕರಣಗಳು ಕಡಿಮೆಯಾಗಿವೆ ಎಂದು ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
ಬಾಲಕೋಟ್ ದಾಳಿ ನಂತರ ಒಳನುಸುಳುವಿಕೆ ಪ್ರಕರಣವು ಶೇ.43ರಷ್ಟು ಕಡಿಮೆಯಾಗಿದೆ. ಅಷ್ಟೇ ಅಲ್ಲ, ಗಡಿಯಲ್ಲಿ ಒಳನುಸುಳುವಿಕೆಯನ್ನು ತಡೆ ಯಲು ರಾಜ್ಯ ಸರ್ಕಾರದೊಂದಿಗೆ ಹಲವು ಕ್ರಮ ಗಳನ್ನು ಕೈಗೊಂಡಿದೆ. ಗಡಿಯಲ್ಲಿ ಸೇನಾ ಸಿಬ್ಬಂದಿ ನಿಯೋಜನೆ, ಗಡಿ ಬೇಲಿ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಲಿಖೀತ ಉತ್ತರ ನೀಡಿದ್ದಾರೆ.
ಇದೇ ವೇಳೆ ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ರಾಯ್, ಗಡಿಯಲ್ಲಿ ಅಳವಡಿಸಿರುವ ಒಳನುಸುಳುವಿಕೆ ತಡೆ ವ್ಯವಸ್ಥೆ (ಎಐಒಎಸ್) ಅತ್ಯಂತ ಸಮರ್ಥ ವ್ಯವಸ್ಥೆಯಾಗಿದೆ. ಇದರಿಂದ ಒಳನುಸುಳುವಿಕೆ ಗಮನಾರ್ಹವಾಗಿ ಇಳಿಕೆಯಾಗಿದೆ. ಈ ವ್ಯವಸ್ಥೆಗೆ ಅಗತ್ಯವಿರುವ ವಿದ್ಯುತ್ ಸೌಲಭ್ಯವನ್ನು ಲಭ್ಯವಿದ್ದಲ್ಲಿ ಗ್ರಿಡ್ ಮೂಲಕ ಒದಗಿಸಲಾಗುತ್ತಿದೆ ಮತ್ತು ಇತರೆಡೆ ಜನರೇಟರ್ಗಳ ಮೂಲಕ ವಿದ್ಯುತ್ ಒದಗಿಸಲಾಗುತ್ತಿದೆ ಎಂದಿದ್ದಾರೆ.
ರೈತರ ಸಾವಿಗೆ ಯುಪಿಎ ಕಾರಣ
2008ರಲ್ಲಿ ಅಂದಿನ ಯುಪಿಎ ಸರ್ಕಾರ ರೈತರ 70 ಸಾವಿರ ರೂ.ಗಳ ಸಾಲ ಮನ್ನಾ ಘೋಷಿಸಿದ ಬಳಿಕವೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾದವು ಎಂದು ಲೋಕಸಭೆಗೆ ಕೇಂದ್ರ ಕೃಷಿ ಖಾತೆ ಸಹಾಯಕ ಸಚಿವ ಪರುಷೋತ್ತಮ್ ರುಪಾಲಾ ಮಾಹಿತಿ ನೀಡಿದ್ದಾರೆ. ಮೆಗಾ ಸಾಲ ಮನ್ನಾ ಯೋಜನೆ ಘೋಷಣೆ ಬಳಿಕ ನಡೆಸಿದ ಆಡಿಟ್ನಲ್ಲಿ, ಸಾಲ ಮನ್ನಾ ಪಡೆದವರ ಪೈಕಿ ಅನೇಕರು ರೈತರೇ ಅಲ್ಲ ಎಂಬ ವಿಚಾರ ಬಹಿರಂಗವಾಗಿದೆ ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…