ಸ್ವಲ್ಪ 2003ರ ವಿಡಿಯೋ ವೀಕ್ಷಿಸಿ….ಪೌರತ್ವ ಕಾಯ್ದೆ ವಿರೋಧಿ ಕಾಂಗ್ರೆಸ್ ಗೆ BJP ತಿರುಗೇಟು!
Team Udayavani, Dec 19, 2019, 4:16 PM IST
ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯ ಜನತಾ ಪಕ್ಷ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 2003ರಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿರುವ ವೀಡಿಯೋವನ್ನು ಬಹಿರಂಗಗೊಳಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದೆ.
2003ರಲ್ಲಿ ಪೌರತ್ವ ಕಾಯ್ದೆಯನ್ನು ಬೆಂಬಲಿಸಿ ಮನಮೋಹನ್ ಸಿಂಗ್ ಮಾತನಾಡಿದ್ದರು. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯ್ದೆ ಅಗತ್ಯವಾಗಿದೆ ಎಂದು ಹೇಳಿದ್ದರು.
ಮನಮೋಹನ್ ಸಿಂಗ್ ಪೌರತ್ವ ಕಾಯ್ದೆ ಬಗ್ಗೆ ಮಾತನಾಡಿರುವ ವಿಡಿಯೋ ಫೂಟೇಜ್ ಅನ್ನು ಬಿಜೆಪಿ ಬಿಡುಗಡೆ ಮಾಡಿದೆ. ಅಂದು ರಾಜ್ಯಸಭೆಯಲ್ಲಿ ಮಾತನಾಡಿದ್ದ ವಿಪಕ್ಷ ನಾಯಕ ಸಿಂಗ್, ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಬಗ್ಗೆ ಉದಾರತೆ ಬೇಕಾಗಿದೆ. ನೆರೆಯ ದೇಶಗಳಾದ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳ ಎದುರಿಸುತ್ತಿರುವ ಅಲ್ಪಸಂಖ್ಯಾತರಿಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯವಾಗಿದೆ ಎಂದು ಹೇಳಿದ್ದ ವಿಡಿಯೋವನ್ನು ಬಿಜೆಪಿ ಟ್ವೀಟ್ ಮಾಡಿದೆ.
“ ಈ ವಿಚಾರವಾಗಿ ಮೇಡಂ ನಾನು ನಿರಾಶ್ರಿತರ ಕುರಿತು ಸ್ವಲ್ಪ ಮಾತನಾಡಬೇಕಾಗಿದೆ. ನಮ್ಮ ದೇಶ ಇಬ್ಭಾಗವಾದ ನಂತರ ಬಾಂಗ್ಲಾದೇಶದಂತಹ ದೇಶಗಳಲ್ಲಿ ಅಲ್ಪಸಂಖ್ಯಾತರ (ಹಿಂದೂ, ಸಿಖ್, ಬೌದ್ಧ, ಪಾರ್ಸಿ) ಸಮುದಾಯಗಳು ಕಿರುಕುಳವನ್ನು ಅನುಭವಿಸಿತ್ತು. ಹೀಗಾಗಿ ಬಲವಂತಕ್ಕೊಳಗಾದ, ದುರದೃಷ್ಟ ಜನರಿಗಾಗಿ ಈ ಸಂದರ್ಭದಲ್ಲಿ ನಮ್ಮ ದೇಶದಲ್ಲಿ ಅವರಿಗೆ ಅವಕಾಶ ಕಲ್ಪಿಸುವುದು ನೈತಿಕ ಹೊಣೆಗಾರಿಕೆಯಾಗಿದೆ. ಇಂತಹ ನತದೃಷ್ಟ ಜನರಿಗೆ ಪೌರತ್ವ ನೀಡುವುದು ಹೆಚ್ಚು ಉದಾರಿತನದ್ದಾಗಿದೆ ಎಂದು ಸಿಂಗ್ ಹೇಳಿದ್ದರು.
In 2003, speaking in Rajya Sabha, Dr Manmohan Singh, then Leader of Opposition, asked for a liberal approach to granting citizenship to minorities, who are facing persecution, in neighbouring countries such as Bangladesh and Pakistan. Citizenship Amendment Act does just that… pic.twitter.com/7BOJJMdkKa
— BJP (@BJP4India) December 19, 2019
ಗೌರವಾನ್ವಿತ ಉಪಪ್ರಧಾನಿ (ಎಲ್ ಕೆ ಅಡ್ವಾಣಿ)ಯವರು ಪೌರತ್ವ ಕಾಯ್ದೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಆತ್ಮೀಯ ಭರವಸೆ ನನ್ನದಾಗಿದೆ ಎಂದು ಸಿಂಗ್ ಅಭಿಪ್ರಾಯವ್ಯಕ್ತಪಡಿಸಿದ್ದರು. ಈ ವಿಡಿಯೋವನ್ನು ಉಪಯೋಗಿಸಿಕೊಂಡ ಬಿಜೆಪಿ, ಪೌರತ್ವ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕಟುವಾಗಿ ಪ್ರಶ್ನಿಸಿದೆ. ಅಲ್ಲದೇ ಕಾಂಗ್ರೆಸ್ ಮುಖಂಡರೊಬ್ಬರು ಪೌರತ್ವ ಕಾಯ್ದೆ ವಿರುದ್ದ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿರುವುದಾಗಿ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ