Women Priests: ಇನ್ನು ತಮಿಳುನಾಡಿನ ಕೆಲ ದೇವಾಲಯಗಳಿಗೆ ಮಹಿಳಾ ಅರ್ಚಕರು…
ಅರ್ಚಕ ತರಬೇತಿ ಪೂರ್ಣಗೊಳಿಸಿದ ಮೂವರು ಮಹಿಳೆಯರು
Team Udayavani, Sep 15, 2023, 9:06 AM IST
ತಮಿಳುನಾಡು: ತಮಿಳುನಾಡಿನ ಕೆಲ ದೇವಸ್ಥಾನಗಳಲ್ಲಿ ಮಹಿಳೆಯರೇ ಅರ್ಚಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಅರ್ಚಕರಾಗಲು ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ತಮಿಳುನಾಡಿನ ಮೂವರು ಯುವತಿಯರನ್ನು ಶೀಘ್ರದಲ್ಲೇ ರಾಜ್ಯದ ದೇವಾಲಯಗಳಲ್ಲಿ ಸಹಾಯಕ ಅರ್ಚಕರಾಗಿ ನೇಮಿಸಲಾಗುವುದು ಎಂದು ತಮಿಳುನಾಡು ಸರಕಾರ ಹೇಳಿದೆ.
ಮಹಿಳೆಯರಾದ ಕೃಷ್ಣವೇಣಿ, ಎಸ್ ರಮ್ಯಾ ಮತ್ತು ಎನ್ ರಂಜಿತಾ ಅವರನ್ನು ರಾಜ್ಯ ಸರ್ಕಾರದ ಅಡಿಯಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ನಿರ್ವಹಿಸುವ ದೇವಾಲಯಗಳಲ್ಲಿ ಅರ್ಚಕರನ್ನಾಗಿ ನೇಮಿಸಲಾಗುತ್ತದೆ ಎನ್ನಲಾಗಿದೆ.
ಮಂಗಳವಾರ ಶ್ರೀರಂಗಂನ ಶ್ರೀ ರಂಗನಾಥರ ದೇವಸ್ಥಾನದ ಅರ್ಚಕರ ತರಬೇತಿ ಶಾಲೆಯಲ್ಲಿ ಅರ್ಚಕ ತರಬೇತಿ ಪೂರ್ಣಗೊಳಿಸಿದ ಪುರುಷ ಪ್ರಶಿಕ್ಷಣಾರ್ಥಿಗಳೊಂದಿಗೆ ಈ ಮೂವರು ಮಹಿಳೆಯರಿಗೆ ತಮಿಳುನಾಡು ಸಚಿವ ಸೇಕರ್ ಬಾಬು ಪ್ರಮಾಣಪತ್ರಗಳನ್ನು ನೀಡಿದರು.
ಈ ಕುರಿತು ಟ್ವೀಟ್ ಮಾಡಿದ ಸಿಎಂ ಇನ್ಮುಂದೆ ದ್ರಾವಿಡ ಮಾದರಿಯ ಆಡಳಿತದಲ್ಲಿ ಮಹಿಳಾ ಅರ್ಚಕರು ಪೂಜೆ ಮಾಡಲಿದ್ದು, ಎಲ್ಲಾ ಜಾತಿಯ ಜನರನ್ನು ದೇವಾಲಯಗಳ ಅರ್ಚಕರನ್ನಾಗಿ ನೇಮಿಸಿ ನಮ್ಮ ತಮಿಳುನಾಡಿನ ದ್ರಾವಿಡ ಮಾದರಿಯ ಸರ್ಕಾರ ತಂತಾಯ್ ಪೆರಿಯಾರ್ ಅವರ ಹೃದಯದ ಮುಳ್ಳು ತೆಗೆದಿದ್ದೆವೆ. ಈಗ ಮಹಿಳೆಯರೂ ಗರ್ಭಗುಡಿಗೆ ಕಾಲಿಡುವುದರ ಮೂಲಕ ಸಮಾನತೆಯ ನವ ಯುಗವನ್ನು ತರುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.
ದ್ರಾವಿಡ ಮುನೇತ್ರ ಕಳಗಂ (ಡಿಎಂಕೆ) ಸರ್ಕಾರ 2021 ರಲ್ಲಿ ಅಧಿಕಾರಕ್ಕೆ ಬಂದಾಗ, ಅವರು ಎಲ್ಲಾ ಜಾತಿಗಳ ಜನರಿಗೆ ಅರ್ಚಕ ತರಬೇತಿ ನೀಡುವ ಉಪಕ್ರಮವನ್ನು ಘೋಷಿಸಿದರು. ಆಸಕ್ತಿ ಇದ್ದರೆ ಮಹಿಳೆಯರಿಗೆ ಅದೇ ತರಬೇತಿಯನ್ನು ನೀಡಲಾಗುವುದು ಎಂದು ಅವರು ಹೇಳಿದರು. ಈ ಘೋಷಣೆಯ ನಂತರ ಕೃಷ್ಣವೇಣಿ, ಎಸ್.ರಮ್ಯಾ, ಮತ್ತು ಎನ್.ರಂಜಿತಾ ತರಬೇತಿಗೆ ಸೇರಲು ನಿರ್ಧರಿಸಿದರು.
ಇದನ್ನೂ ಓದಿ: Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ
பெண்கள் விமானத்தை இயக்கினாலும், விண்வெளிக்கே சென்று வந்தாலும் அவர்கள் நுழைய முடியாத இடங்களாகக் கோயில் கருவறைகள் இருந்தன. பெண் கடவுளர்களுக்கான கோயில்களிலும் இதுவே நிலையாக இருந்தது.
ஆனால், அந்நிலை இனி இல்லை! அனைத்துச் சாதியினரும் அர்ச்சகர் ஆகலாம் எனப் பெரியாரின் நெஞ்சில் தைத்த… https://t.co/U1JgDIoSxb
— M.K.Stalin (@mkstalin) September 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
MUST WATCH
ಹೊಸ ಸೇರ್ಪಡೆ
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ