ಕೊರಾನಾ ಭೀತಿ; ಮಧ್ಯಪ್ರದೇಶ ಕಲಾಪ ಮುಂದಕ್ಕೆ, ಕಮಲ್ ನಾಥ್ ಗೆ 10 ದಿನ ರಿಲೀಫ್!
ಕಮಲ್ ನಾಥ್ ಸರ್ಕಾರ ತಾತ್ಕಾಲಿಕ ಅಗ್ನಿಪರೀಕ್ಷೆಯ ಪ್ರಕ್ರಿಯೆಯಿಂದ ನಿರಾಳತೆ ಕಂಡಂತಾಗಿದೆ.
Team Udayavani, Mar 16, 2020, 12:12 PM IST
Madhya Pradesh Chief Minister Kamal Nath
ಭೋಪಾಲ್: 22 ಶಾಸಕರ ರಾಜೀನಾಮೆಯಿಂದ ಅಲ್ಪಮತಕ್ಕೆ ಕುಸಿದಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಕಾಂಗ್ರೆಸ್ ಪಕ್ಷದ ಕಮಲ್ ನಾಥ್ ಸೋಮವಾರ ಬಹುಮತ ಸಾಬೀತು ಅಗ್ನಿಪರೀಕ್ಷೆಯಿಂದ ಬಚಾವ್ ಆಗಿದ್ದು, ವಿಧಾನಸಭೆ ಕಲಾಪವನ್ನು ಸ್ಪೀಕರ್ ಮಾರ್ಚ್ 26ಕ್ಕೆ ಮುಂದೂಡಿದ್ದಾರೆ.
ಸೋಮವಾರ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಶಾಸಕರು, ಸದನಕ್ಕೆ ಗೌರವ ಕೊಡಿ ಎಂದು ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಜಂಟಿ ಅಧಿವೇಶನದಲ್ಲಿ ಮಾತನಾಡಿದ ರಾಜ್ಯಪಾಲರು ಸಂವಿಧಾನದಂತೆ ನಡೆದುಕೊಳ್ಳಿ ಎಂದು ಹೇಳಿ ಹೊರನಡೆದಿದ್ದರು. ಬಳಿಕ ಸ್ಪೀಕರ್, ಕೊರೊನಾ ಸೋಂಕು ಭೀತಿಯ ಹಿನ್ನೆಲೆಯ ಕಾರಣ ನೀಡಿ ಕಲಾಪವನ್ನು ಮಾರ್ಚ್ 26ಕ್ಕೆ ಮುಂದೂಡಿದ ಪ್ರಸಂಗ ನಡೆಯಿತು.
ಸ್ಪೀಕರ್ ಈ ನಿರ್ಧಾರದಿಂದಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಗೆ ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ಬರೋಬ್ಬರಿ ಹತ್ತು ದಿನಗಳ ಕಾಲಾವಕಾಶ ಸಿಕ್ಕಂತಾಗಿದೆ. ಇದರಿಂದ ಕಮಲ್ ನಾಥ್ ಸರ್ಕಾರ ತಾತ್ಕಾಲಿಕ ಅಗ್ನಿಪರೀಕ್ಷೆಯ ಪ್ರಕ್ರಿಯೆಯಿಂದ ನಿರಾಳತೆ ಕಂಡಂತಾಗಿದೆ.
230 ಸದಸ್ಯ ಬಲ ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ನಿಧನ ಹೊಂದಿರುವ ಕಾರಣ ಎರಡು ಸ್ಥಾನ ಖಾಲಿ ಇದೆ. 22 ಮಂದಿ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು, ಇದರಲ್ಲಿ 6 ಶಾಸಕರ ರಾಜೀನಾಮೆ ಅಂಗೀಕಾರವಾಗಿದೆ. ಹೀಗಾಗಿ ಸದನದ ಬಲ 222. ಸರ್ಕಾರ ಬಹುಮತ ಸಾಬೀತುಪಡಿಸಲು ಬೇಕಾದ ಮ್ಯಾಜಿಕ್ ಸಂಖ್ಯೆ 112. ಅಲ್ಲದೇ ಕಾಂಗ್ರೆಸ್ ಪಕ್ಷದ ಇನ್ನುಳಿದ ಶಾಸಕರ ರಾಜೀನಾಮೆ ಅಂಗೀಕಾರ ಬಾಕಿ ಉಳಿದಿದೆ. ಒಂದು ವೇಳೆ ರಾಜೀನಾಮೆ ಅಂಗೀಕಾರವಾದರೆ ಅಥವಾ ಗೈರುಹಾಜರಾದರೆ ಸದನದ ಬಲ 206ಕ್ಕೆ ಇಳಿಯಲಿದೆ.
ಇದರಿಂದಾಗಿ ಬಹುಮತಕ್ಕೆ ಬೇಕಾಗುವ ಸಂಖ್ಯೆ 104. ಕಾಂಗ್ರೆಸ್ ಪಕ್ಷದ ಬಲ 92ಕ್ಕೆ ಇಳಿಕೆಯಾಗಲಿದ್ದು, ಬಿಜೆಪಿ 107 ಶಾಸಕರನ್ನು ಹೊಂದಿದೆ. ಪಕ್ಷೇತರರು, ಬಿಎಸ್ಪಿ, ಎಸ್ಪಿ ಶಾಸಕರು ಕಾಂಗ್ರೆಸ್ ಜತೆ ಕೈಜೋಡಿಸಿದರೂ ಕೂಡಾ 99ಕ್ಕೆ ಏರಲಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 26ರ ನಂತರ ಕಮಲ್ ನಾಥ್ ಸರ್ಕಾರ ಬಹುಮತ ಸಾಬೀತುಪಡಿಸಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು