80 ವರ್ಷಗಳ ದೇಗುಲ ನಿರ್ಬಂಧಕ್ಕೆ ತೆರೆ! 200ಕ್ಕೂ ಅಧಿಕ ದಲಿತರ ಪ್ರವೇಶ
Team Udayavani, Jan 31, 2023, 7:30 AM IST
ಚೆನ್ನೈ: ಕಳೆದ 8 ದಶಕಗಳಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ನಿರ್ಬಂಧವಿದ್ದ ದೇಗುಲವನ್ನು ಎಸ್ಸಿ/ಎಸ್ಟಿ ವರ್ಗದ 200ಕ್ಕೂ ಅಧಿಕ ಮಂದಿ ಪ್ರವೇಶಿಸಿದ್ದಾರೆ. ಈ ಮೂಲಕ ತಮಿಳುನಾಡಿನ ತಿರುವಣ್ಣಾ ಮಲೈ ಜಿಲ್ಲೆ ಐತಿಹಾಸಿಕ ಬದಲಾವಣೆಗೆ ಸಾಕ್ಷಿಯಾಗಿದೆ.
80 ವರ್ಷಗಳ ಇತಿಹಾಸ ಹೊಂದಿರುವ ದೇವಿ ದೇಗುಲವೊಂದಕ್ಕೆ ದಲಿತರು ಪ್ರವೇಶಿಸದಂತೆ ಮೊದಲಿನಿಂದಲೂ ನಿರ್ಬಂಧವಿತ್ತು. ಈ ವಿಚಾರ ಜಿಲ್ಲಾಡಳಿತದ ಗಮನಕ್ಕೆ ಬಂದ ಬಳಿಕ, ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯ ಕಾಯ್ದುಕೊಳ್ಳುವ ನಿಟ್ಟಿನಲ್ಲಿ,ದೇಗುಲ ಆಡಳಿತ ಮಂಡಳಿ ಜತೆಗೆ ಸಭೆ ನಡೆಸಲಾಯಿತು. ಜಿಲ್ಲಾ ಎಸ್ಪಿ ಡಾ.ಕೆ. ಕಾರ್ತಿಕೇಯನ್ ಸ್ಥಳೀಯರ ಜತೆಗೂ ಮಾತುಕತೆ ನಡೆಸಿ, ಜ.30ರ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತೊಲಗಿಸುವ ಸಂಕಲ್ಪದೊಂದಿಗೆ 400 ಪೊಲೀಸರ ಭದ್ರತೆಯೊಂದಿಗೆ ದಲಿತರ ದೇಗುಲ ಪ್ರವೇಶವನ್ನು ಖಾತರಿ ಪಡಿಸಿಕೊಂಡಿದ್ದಾರೆ.
ದಲಿತರ ಸಂತಸ:
ದೇಗುಲ ಪ್ರವೇಶಿಸಿದ ದಲಿತ ಮಹಿಳೆಯೊಬ್ಬರು,ತಾನು ಇಲ್ಲಿಯೇ ಹುಟ್ಟಿ ಬೆಳೆದಿದ್ದರೂ, ದೇಗುಲದ ಒಳಗಿರುವ ದೇವಿಯ ದರ್ಶನ ಪಡೆಯಲು ಸಾಧ್ಯವಾಗಿರಲಿಲ್ಲ.ಇಂದು ಆ ಅವಕಾಶ ಸಿಕ್ಕಿದೆ. ದೇಗುಲ ಪ್ರವೇಶಿಸಿದ್ದು, ನಾನೊಂದು ಮಗುವಿಗೆ ಜನ್ಮ ನೀಡಿದೆ ಎನ್ನುವಷ್ಟು ಸಂತಸವನ್ನು ತಂದಿದೆ ಎಂದಿದ್ದಾರೆ.
ಮೇಲ್ವರ್ಗದವರ ಪ್ರತಿಭಟನೆ
ದಲಿತರು ದೇಗುಲ ಪ್ರವೇಶಿಸುವುದನ್ನು ವಿರೋಧಿಸಿ ಮೇಲ್ವರ್ಗದ 750ಕ್ಕೂ ಅಧಿಕ ಮಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ಪ್ರತ್ಯೇಕ ದೇಗುಲ ಕಟ್ಟಿಸಿಕೊಳ್ಳಲು ದಲಿತರಿಗೆ ಹಣ, ಭೂಮಿಯನ್ನು ನೀಡಿದ್ದೇವೆ. ಈಗ ಅವರು ದೇಗುಲ ಪ್ರವೇಶಿಸುವ ಅಗತ್ಯವೇನಿದೆ?ಅವರ ಪ್ರವೇಶದಿಂದ ದೇಗುಲ ಅಪವಿತ್ರವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ