Madhumita Shukla ಹತ್ಯೆ: 17 ವರ್ಷದ ಬಳಿಕ ಮಧುಮಣಿ ತ್ರಿಪಾಠಿ ದಂಪತಿಗೆ ಬಿಡುಗಡೆ ಭಾಗ್ಯ
Team Udayavani, Aug 25, 2023, 11:53 AM IST
ಉತ್ತರ ಪ್ರದೇಶ: ಕವಯಿತ್ರಿ ಮಧುಮಿತಾ ಶುಕ್ಲಾ ಹತ್ಯೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಮಧುಮಣಿ ತ್ರಿಪಾಠಿ ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ರಾಜ್ಯ ಕಾರಾಗೃಹಗಳ ಆಡಳಿತ ಇಲಾಖೆಯಿಂದ ಸಚಿವರು ಮತ್ತು ಅವರ ಪತ್ನಿ ಬಿಡುಗಡೆ ಕುರಿತು ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಉತ್ತಮ ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಯುಪಿ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಏನಿದು ಪ್ರಕರಣ: ಮೇ 9, 2003 ರಂದು, ಖ್ಯಾತ ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಲಕ್ನೋದ ನಿಶಾತ್ಗಂಜ್ನ ಪೇಪರ್ ಮಿಲ್ ಕಾಲೋನಿಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಈ ಪ್ರಕರಣಕ್ಕೆ ಸಂಬಂಧಿಸಿ ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಅಲ್ಲದೆ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿತ್ತು.
ಇವರಿಬ್ಬರೂ 17 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದು, ಈ ಅವಧಿಯಲ್ಲಿ ಅವರ ನಡವಳಿಕೆ ಚೆನ್ನಾಗಿತ್ತು ಎಂದು ಸರ್ಕಾರ ತನ್ನ ಆದೇಶದಲ್ಲಿ ಬರೆದುಕೊಂಡಿದೆ. ಆದೇಶದಲ್ಲಿ, ಅಕಾಲಿಕ ಬಿಡುಗಡೆಗೆ ಸಂಬಂಧಿಸಿದಂತೆ ಮೇ 2022 ರ ಸುಪ್ರೀಂ ಕೋರ್ಟ್ನ ಆದೇಶವನ್ನೂ ಉಲ್ಲೇಖಿಸಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಕಾರಾಗೃಹ ಆಡಳಿತ ಇಲಾಖೆ ಬಿಡುಗಡೆ ಆದೇಶ ಹೊರಡಿಸಿದೆ.
ಸದ್ಯ ಇಬ್ಬರೂ ಗೋರಖ್ಪುರ ಜೈಲಿನಲ್ಲಿದ್ದು, ಬಿಡುಗಡೆ ಪ್ರಕ್ರಿಯೆ ಕಾರ್ಯಗಳು ನಡೆಯುತ್ತಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Vikram lander ಫೋಟೊ ಸೆರೆ ಹಿಡಿದ ಚಂದ್ರಯಾನ-2: ಪೋಸ್ಟ್ ಮಾಡಿ ಡಿಲೀಟ್ ಮಾಡಿದ ಇಸ್ರೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು