ಪ.ಬಂಗಾಲದ ಸಿಂಡಿಕೇಟ್‌ ಪಾಲಿಟಿಕ್ಸ್‌ ಮೇಲೆ ಪ್ರಧಾನಿ ಮೋದಿ ದಾಳಿ


Team Udayavani, Jul 16, 2018, 3:49 PM IST

modi-syndicate-politics-700.jpg

ಕೋಲ್ಕತ : ಪಶ್ಚಿಮ ಬಂಗಾಲದ ಜನರ ದುರಿತಗಳಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಳುವ ತೃಣಮೂಲ ಕಾಂಗ್ರೆಸ್‌ನ ಸ್ವಾರ್ಥಪುರ ರಾಜಕೀಯವೇ  ಕಾರಣ ಎಂದು ಬಹಿರಂಗ ಟೀಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಂದು ರಾಜ್ಯದಲ್ಲಿ ಮಮತಾ ನಡೆಸುತ್ತಿರುವ “ಸಿಂಡಿಕೇಟ್‌ ಪಾಲಿಟಿಕ್ಸ್‌’ ವಿರುದ್ಧ ಹರಿಹಾಯ್ದರು.

ಪಶ್ಚಿಮ ಬಂಗಾಲದ ಜನರು ತಾವು ಎದುರಿಸುತ್ತಿರುವ ಸರ್ವ ಬಗೆಯ ಸಮಸ್ಯೆಗಳನ್ನು ಶಾಶ್ವತವಾಗಿ ನಿವಾರಿಸಲು ತ್ರಿಪುರದ ಚುನಾವಣೆಗಳಿಂದ ಪ್ರೇರಿತರಾಗಿ ರಾಜ್ಯದ ಸ್ವಾರ್ಥಪುರ ರಾಜಕಾರಣದ ವಿರುದ್ಧ ಒಗ್ಗೂಡಿ ಹೋರಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು. 

ಪ್ರಧಾನಿ ಮೋದಿ  ಪಶ್ಚಿಮ ಮಿಡ್ನಾಪುರದಲ್ಲಿಂದು ನಡೆದ ಕಿಸಾನ್‌ ಕಲ್ಯಾಣ್‌ ರಾಲಿಯಲ್ಲಿ ಮಾತನಾಡುತ್ತಿದ್ದರು. ಮಮತಾ ಬ್ಯಾನರ್ಜಿ ಸರಕಾರ ನಡೆಸುತ್ತಿರುವ ಸಿಂಡಿಕೇಟ್‌ ಪಾಲಿಟಿಕ್ಸ್‌ ನಿಂದಾಗಿ ರಾಜ್ಯದ ಅಭಿವೃದ್ಧಿ ಕೆಲಸಗಳೆಲ್ಲವೂ ಗೂಟ ಹೊಡೆದು ನಿಂತು ಬಿಟ್ಟಿವೆ. ಹಾಗಾಗಿ ಒಂದು ಕಾಲದ ಮಹಾನ್‌ ನೆಲ ಎನಿಸಿಕೊಂಡಿದ್ದ ಬಂಗಾಲ ಇಂದು ತನ್ನ ಪರಂಪರೆಯನ್ನು ನಾಚಿಸುವಷ್ಟು ತಳ ಮಟ್ಟಕ್ಕೆ ಒತ್ತಲ್ಪಟ್ಟಿದೆ. ಸಿಂಡಿಕೇಟ್‌ ಪಾಲಿಟಿಕ್ಸ್‌ನ ಅನುಮತಿ ಇಲ್ಲದೆ ರಾಜ್ಯದಲ್ಲಿ ಏನೂ ನಡೆಯುವಂತಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. 

“ನೀವಿಲ್ಲಿ ನಿಮ್ಮ ಉತ್ಪನ್ನಗಳನ್ನು ಮಾರಬೇಕಾ ? ನಿಮಗೆ ಸಿಂಡಿಕೇಟ್‌ ಅನುಮತಿ ಬೇಕು; ನೀವಿಲ್ಲಿ ವ್ಯಾಪಾರ ವಹಿವಾಟು ಮಾಡಬೇಕಾ ? ನಿಮಗೆ ಸಿಂಡಿಕೇಟ್‌ ಅನುಮತಿ ಬೇಕು; ಕಾಲೇಜು ಸೇರ್ಪಡೆ ಕೂಡ ಸಿಂಡಿಕೇಟ್‌ ಅನುಮತಿ ಇಲ್ಲದೆ ಸಾಧ್ಯವಿಲ್ಲ; ರಾಜ್ಯ ಸರಕಾರ ಮಾ, ಮಾಟಿ, ಮಾನುಷ್‌ ಎಂದು ಹೇಳುತ್ತಲೇ ಇರುತ್ತದೆ; ಆದರೆ ಅದರ ಕರಾಳ ಮುಖ ಈಗ ಜಗಜ್ಜಾಹೀರಾಗಿದೆ’ ಎಂದು ಪ್ರಧಾನಿ ಮೋದಿ ಹೇಳಿದರು. 

ಈಚಿನ ಪಶ್ಚಿಮ ಬಂಗಾಲದ ಪಂಚಾಯತ್‌ ಚುನಾವಣೆಯಲ್ಲಿ ನಡೆದ ಅಭೂತಪೂರ್ವ ಹಿಂಸೆಯನ್ನು ಉಲ್ಲೇಖೀಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರಜಾಸತ್ತೆಯಲ್ಲಿ ನಂಬಿಕೆ ಇಲ್ಲದಿರುವುದನ್ನು ಇಂದು ಜಗಜ್ಜಾಹೀರು ಮಾಡಿದೆ ಎಂದು ಹೇಳಿದರು. ನಿಮ್ಮ ವಿರೋಧಿಗಳನ್ನು ಕೊಂದು ಮುಗಿಸಿ ಎಂಬ ಸಿಂಡಿಕೇಟ್‌ ಇಲ್ಲಿ ಕಾರ್ಯಾಚರಿಸುತ್ತಿದೆ. ಕೇಂದ್ರ ಸರಕಾರ ಪಶ್ಚಿಮ ಬಂಗಾಲಕ್ಕೆಂದು ಕಳುಹಿಸುವ ಹಣವನ್ನು ಸಿಂಡಿಕೇಟ್‌ ಅನುಮತಿ ಇಲ್ಲದೆ ಯಾವುದಕ್ಕೂ ಬಳಸುವಂತಿಲ್ಲವಾಗಿದೆ ಎಂದು ಮೋದಿ ಹೇಳಿದರು. 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.