ಗ್ರಾ.ಪಂ ಚುನಾವಣೆಯಲ್ಲಿ ಮಹಿಳೆಯರ ಗೆಲುವು, ಪ್ರಮಾಣವಚನ ಸ್ವೀಕರಿಸಿದ್ದು ಪತಿ ಮಹಾಶಯರು!
ಗ್ರಾಮ ಪಂಚಾಯ್ತಿಗೆ ನಡೆದ ಚುನಾವಣೆಯಲ್ಲಿ ಸರ್ ಪಂಚ್ ಸೇರಿದಂತೆ 21 ಮಂದಿ ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದರು.
Team Udayavani, Aug 6, 2022, 11:46 AM IST
ಭೋಪಾಲ್: 2020ರಲ್ಲಿ ಪ್ರಸಾರವಾಗಿದ್ದ ಜನಪ್ರಿಯ ವೆಬ್ ಸರಣಿ “ಪಂಚಾಯತ್” ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಚಿತ್ರೀಕರಿಸಲಾಗಿತ್ತು. ಈ ವೆಬ್ ಸರಣಿಯ ಕಥೆ ಕೆಲವು ಗ್ರಾಮಗಳಲ್ಲಿ ನಿಜ ಜೀವನದಲ್ಲಿಯೂ ನಡೆಯುತ್ತಿದ್ದು, ಅದಕ್ಕೆ ಮಧ್ಯಪ್ರದೇಶದಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ!
ಇದನ್ನೂ ಓದಿ:ಉತ್ತರ ಪ್ರದೇಶದ ಮಹಿಳೆಯರಿಗೆ ರಕ್ಷಾ ಬಂಧನ ಗಿಫ್ಟ್ ನೀಡಿದ ಸಿಎಂ ಯೋಗಿ ಆದಿತ್ಯನಾಥ್
ಮಹಿಳಾ ಜನಪ್ರತಿನಿಧಿಗಳು ಚುನಾವಣೆಯಲ್ಲಿ ಆಯ್ಕೆಯಾಗಿದ್ದರು ಕೂಡಾ ಅಧಿಕಾರವನ್ನು ಮಾತ್ರ ಪುರುಷರು ಚಲಾಯಿಸುತ್ತಿರುವ ಕಥೆ ಈ ವೆಬ್ ಸರಣಿಯದ್ದಾಗಿತ್ತು. ಅದೇ ರೀತಿ ಮಧ್ಯಪ್ರದೇಶದಲ್ಲಿ ನಡೆದ ಚುನಾವಣೆಯಲ್ಲಿ ಮಹಿಳೆಯರು ಗೆದ್ದಿದ್ದರು ಕೂಡಾ ಅದರಲ್ಲಿ ಕೆಲವರು ಪತಿ ಪ್ರಮಾಣವಚನ ಸ್ವೀಕರಿಸಿರುವ ಘಟನೆ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಜೈಸಿನಗರ್ ಗ್ರಾಮ ಪಂಚಾಯ್ತಿಗೆ ನಡೆದ ಚುನಾವಣೆಯಲ್ಲಿ ಸರ್ ಪಂಚ್ ಸೇರಿದಂತೆ 21 ಮಂದಿ ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದರು. ಇವರಲ್ಲಿ 10 ಮಹಿಳಾ ಸದಸ್ಯರಾಗಿದ್ದಾರೆ.
ಇದೀಗ ಪ್ರಮಾಣವಚನ ಸ್ವೀಕಾರದ ವಿಡಿಯೋ ವೈರಲ್ ಆಗಿದ್ದು, ಹತ್ತು ಮಂದಿ ಮಹಿಳಾ ಸದಸ್ಯರಲ್ಲಿ ಕೇವಲ ಮೂವರು ಮಹಿಳೆಯರು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದು, ಇನ್ನುಳಿದ ಏಳು ಮಹಿಳಾ ಸದಸ್ಯರ ಬದಲು ಅವರ ಪತಿ ಪ್ರಮಾಣವಚನ ಸ್ವೀಕರಿಸಿರುವುದು ವಿವಾದಕ್ಕೀಡಾಗಿದೆ ಎಂದು ವರದಿ ತಿಳಿಸಿದೆ.
ಈ ಕುರಿತು ಪತ್ರಕರ್ತರು ಜೈಸಿನಗರ್ ಗ್ರಾಮಪಂಚಾಯತ್ ಕಾರ್ಯದರ್ಶಿ ಆಶಾ ರಾಮ್ ಸಾಹು ಅವರನ್ನು ಪ್ರಶ್ನಿಸಿದಾಗ, ಪತ್ನಿಯರ ಬದಲು ಪತಿ ಪ್ರಮಾಣವಚನ ಸ್ವೀಕರಿಸಿರುವುದನ್ನು ಸಮರ್ಥಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.
ಮಹಿಳೆಯರು ಆಯ್ಕೆಯಾಗುವ ಗ್ರಾಮ ಪಂಚಾಯ್ತಿಗಳಿಗೆ ಮಾತ್ರ 15 ಲಕ್ಷ ರೂಪಾಯಿಯವರೆಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದ ಎರಡು ತಿಂಗಳ ಬಳಿಕ ಪತ್ನಿ ಬದಲು ಪತಿ ಪ್ರಮಾಣವಚನ ಸ್ವೀಕರಿಸಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
MUST WATCH
ಹೊಸ ಸೇರ್ಪಡೆ
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ