ಜಗತ್ತಿನ ಯಾವ ದೇಶದಲ್ಲೂ ಜನರನ್ನು ಗ್ಯಾಸ್ ಚೇಂಬರ್ಗೆ ತಳ್ಳಿ ಸಾಯಿಸುವುದಿಲ್ಲ
ಒಳಚರಂಡಿ ಸ್ವಚ್ಛತೆ ವೇಳೆ ಕಾರ್ಮಿಕರ ಸಾವು ಬಗ್ಗೆ ಸುಪ್ರೀಂ ಕಳವಳ
Team Udayavani, Sep 19, 2019, 5:06 AM IST
ನವದೆಹಲಿ: “ಜಗತ್ತಿನ ಯಾವ ಮೂಲೆಯಲ್ಲೂ ಜನರನ್ನು ಗ್ಯಾಸ್ ಛೇಂಬರ್ನೊಳಕ್ಕೆ ಕಳುಹಿಸಿ ಸಾಯಲು ಬಿಡುವುದಿಲ್ಲ. ಆದರೆ ಭಾರತದಲ್ಲಿ…’
ಮಲಹೊರುವ ಪದ್ಧತಿ ಹಾಗೂ ಒಳಚರಂಡಿ ಸ್ವಚ್ಛಗೊಳಿಸುವ ಪ್ರಕ್ರಿಯೆ ವೇಳೆ ಜನರು ಸಾವಿಗೀಡಾಗುತ್ತಿರುವ ವಿಚಾರದ ಕುರಿತು ಸುಪ್ರೀಂ ಕೋರ್ಟ್ ತನ್ನ ಕಳವಳವನ್ನು ವ್ಯಕ್ತಪಡಿಸಿದ ಬಗೆ ಇದು. ಎಸ್ಸಿ/ಎಸ್ಟಿ ಕಾಯ್ದೆಗೆ ಸಂಬಂಧಿಸಿ ಕಳೆದ ವರ್ಷ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಮರುಪರಿಶೀಲನೆಗೆ ಕೋರಿ ಕೇಂದ್ರ ಸರಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ವೇಳೆ ನ್ಯಾ. ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಒಳಚರಂಡಿ ಅಥವಾ ಮ್ಯಾನ್ಹೋಲ್ಗಳನ್ನು ಸ್ವಚ್ಛಗೊಳಿಸುವಂಥ ಕಾರ್ಮಿಕರಿಗೆ ಸೂಕ್ತ ರಕ್ಷಣಾ ಕವಚಗಳು ಹಾಗೂ ಆಮ್ಲಜನಕದ ಸಿಲಿಂಡರ್ಗಳ ವ್ಯವಸ್ಥೆ ಯನ್ನು ಏಕೆ ಕಲ್ಪಿಸಿಲ್ಲ ಎಂದು ಕೇಂದ್ರ ಸರಕಾರದ ಪರ ಹಾಜರಾಗಿದ್ದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ರನ್ನು ನ್ಯಾಯಪೀಠ ಪ್ರಶ್ನಿಸಿತು.
ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪೀಠ, “ಜಗತ್ತಿನ ಯಾವ ದೇಶದಲ್ಲೂ ಜನರನ್ನು ಗ್ಯಾಸ್ ಛೇಂಬರ್ಗೆ ನೂಕಿ ಸಾಯಿಸುವುದಿಲ್ಲ. ಆದರೆ, ನಮ್ಮ ದೇಶದಲ್ಲಿ ಪ್ರತಿ ತಿಂಗಳು ಮೂರರಿಂದ ನಾಲ್ವರು ಕಾರ್ಮಿಕರು ಇಂಥ ಹೀನಾಯ ಸಾವನ್ನು ಕಾಣುತ್ತಿ ದ್ದಾರೆ. ಮಾನವರೆಲ್ಲರೂ ಸಮಾನರು ಎಂದು ಸಂವಿಧಾನ ಹೇಳುತ್ತದೆ. ಆದರೆ, ಅಧಿಕಾರಿಗಳು ಎಲ್ಲರಿಗೂ ಸಮಾನ ಸೌಲಭ್ಯಗಳನ್ನು ಒದಗಿಸುತ್ತಿಲ್ಲ. ಯಾವುದೇ ರಕ್ಷಣಾ ವ್ಯವಸ್ಥೆಯಿಲ್ಲದೇ ಜನರನ್ನು ಸಾಯಲು ಬಿಡುವುದು ಅಮಾನವೀಯ’ ಎಂದು ಹೇಳಿತು. ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳೇ ದಾಟಿವೆ. ಆದರೂ, ಜಾತಿ ತಾರತಮ್ಯ ಎನ್ನುವುದು ಈ ದೇಶದಲ್ಲಿ ಇನ್ನೂ ಇದೆ ಎಂದೂ ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ