
29 ವರ್ಷಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹ ಬಿಡುಗಡೆ: ಅದ್ಧೂರಿ ಮೆರವಣಿಗೆ
Team Udayavani, Mar 29, 2023, 2:00 PM IST

ಪಾಟ್ನಾ: ಕಳವಾಗಿ, ಪತ್ತೆಯಾದ ಬಳಿಕ ಪೊಲೀಸ್ ಕಸ್ಟಡಿಯಲ್ಲಿದ್ದ ಆಂಜನೇಯ ವಿಗ್ರಹವನ್ನು 29 ವರ್ಷಗಳ ಬಳಿಕ ಕೋರ್ಟಿನ ಆದೇಶದ ಮೇರೆಗೆ ದೇವಸ್ಥಾನಕ್ಕೆ ತಂದು ಪುನಃ ಸ್ಥಾಪಿಸಲಾಗಿರುವ ಘಟನೆ ಬಿಹಾರದ ಭೋಜ್ಪುರ ಜಿಲ್ಲೆಯಲ್ಲಿ ನಡೆದಿದೆ.
ಮೇ.29,1994 ರಂದು ಅಷ್ಟಧಾತುವಿನಿಂದ ಮಾಡಿದ ಆಂಜನೇಯ ವಿಗ್ರಹವನ್ನು ಬರ್ಹರಾ ಬ್ಲಾಕ್ನ ಗುಂಡಿ ಗ್ರಾಮದಲ್ಲಿನ ಶ್ರೀರಂಗನಾಥ ದೇವಾಲಯದಿಂದ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಅಂದಿನ ದೇವಾಲಯದ ಅರ್ಚಕ ಜನೇಶ್ವರ್ ದ್ವಿವೇದಿ ಅವರು ವಿಗ್ರಹ ಕಳ್ಳತನದ ಆರೋಪದ ಮೇಲೆ ಅಪರಿಚಿತ ಕಳ್ಳರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಕಳ್ಳತನವಾದ ವಿಗ್ರಹಗಳನ್ನು ಬಾವಿಯಲ್ಲಿ ಪತ್ತೆ ಹಚ್ಚಿ ಠಾಣೆಯ ಸ್ಟ್ರಾಂಗ್ ರೂಮ್ ನಲ್ಲಿಟ್ಟಿದ್ದರು.
ಬಿಹಾರ ರಾಜ್ಯ ಧಾರ್ಮಿಕ ಟ್ರಸ್ಟ್ ಬೋರ್ಡ್ (BSRTB) ಕೂಡ ಈ ಬಗ್ಗೆ ಪಾಟ್ನಾ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸಲ್ಲಿಸಿ, ಎಲ್ಲಾ ವಶಪಡಿಸಿಕೊಂಡ ವಿಗ್ರಹಗಳನ್ನು ಟ್ರಸ್ಟ್ಗೆ ಹಿಂದಿರುಗಿಸಲು ಹೇಳಿತ್ತು.
ಇದನ್ನೂ ಓದಿ: ಹೈಕೋರ್ಟ್ ತಡೆ; NCP ಸಂಸದ ಫೈಜಲ್ ಅನರ್ಹತೆ ರದ್ದುಪಡಿಸಿದ ಲೋಕಸಭೆ ಸೆಕ್ರೆಟರಿಯೇಟ್
29 ವರ್ಷಗಳ ಸುದೀರ್ಘ ಕಾನೂನು ಹೋರಾಟದ ಬಳಿಕ ಬಿಹಾರ ಕೋರ್ಟ್ ವಿಗ್ರಹಗಳನ್ನು ದೇವಸ್ಥಾನಕ್ಕೆ ಹಸ್ತಾಂತರ ಮಾಡಿ ಎಂದು ಆದೇಶ ನೀಡಿದ ಬಳಿಕ ಬಳಿಕ ಪೊಲೀಸರು ವಿಗ್ರಹಗಳನ್ನು ಹಸ್ತಾಂತರ ಮಾಡಿದ್ದಾರೆ.
ಅರ್ರಾ ಸಿವಿಲ್ ನ್ಯಾಯಾಲಯದ ಎಡಿಜೆ-3 ಸತೇಂದ್ರ ಸಿಂಗ್ ಅವರು ಬಿಡುಗಡೆ ಆದೇಶ ಹೊರಡಿಸಿದ ನಂತರ, ಭಕ್ತರು ಪೊಲೀಸ್ ಠಾಣೆಯಿಂದ ವಿಗ್ರಹಗಳನ್ನು ತೆಗೆದುಕೊಂಡು ಹೋಗಲು ಭವ್ಯವಾದ ಮೆರವಣಿಗೆಯನ್ನು ನಡೆಸಿದ್ದಾರೆ. ಶ್ರೀರಂಗನಾಥ ದೇವಾಲಯದಲ್ಲಿ ಅಷ್ಟಧಾತುವಿನಿಂದ ಮಾಡಿದ ಎರಡೂ ವಿಗ್ರಹಗಳನ್ನು ಪುನಃ ಸ್ಥಾಪಿಸಲಾಗುತ್ತದೆ ಎಂದು ಭಕ್ತರು ಹೇಳಿದ್ದಾರೆ.
ಬಿಎಸ್ಆರ್ಟಿಬಿಯ ಮಾಜಿ ಅಧ್ಯಕ್ಷ ಆಚಾರ್ಯ ಕಿಶೋರ್ ಕುನಾಲ್ ಮತ್ತು ಅರ್ರಾ ಸಿವಿಲ್ ಕೋರ್ಟ್ನ ವಕೀಲ ಅಜಿತ್ ಕುಮಾರ್ ದುಬೆ ವಿಗ್ರಹಗಳ ಬಿಡುಗಡೆಗಾಗಿ ಹೋರಾಟ ನಡೆಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್ ಗಳು; ಆರೋಪಿಗಳಿಗೆ ಶೋಧ

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ
ಹೊಸ ಸೇರ್ಪಡೆ

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್ಗೌಡ

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು