ಮಧ್ಯಪ್ರದೇಶಕ್ಕೆ ಕೇಂದ್ರ ಸಚಿವ ಸಿಂಧಿಯಾ ಮುಖ್ಯಮಂತ್ರಿ?
ಗ್ವಾಲಿಯರ್ ಕಾರ್ಯಕ್ರಮದಲ್ಲಿ ಜೈನಮುನಿ ಭವಿಷ್ಯ
Team Udayavani, Feb 24, 2022, 7:30 AM IST
ಗ್ವಾಲಿಯರ್:ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯಪ್ರದೇಶದ ಮುಖ್ಯಮಂತ್ರಿ ಆಗುವರೇ? ಹೀಗೊಂದು ವಿಚಾರ ದಿಢೀರನೆ ಚರ್ಚೆಗೆ ಕಾರಣವಾಗಿದೆ.
ಮಂಗಳವಾರ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಜೈನಮುನಿ ವಿಜಯೇಶ್ ಸಾಗರ್ ಮಹಾರಾಜ್ ಅವರು ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ.
“ಸಿಂಧಿಯಾ ಜೀ ಅವರೇ ಮುಂದಿನ ಕೆಲವೇ ದಿನಗಳಲ್ಲಿ ನೀವು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಲಿದ್ದೀರಿ. ಅವರಿಗೆ ರಾಜ್ಯದ ಮೇಲೆ ಅಪಾರ ಪ್ರೀತಿ ಇದೆ. ಜನರ ಸೇವೆ ಮಾಡಿ ಮಧ್ಯಪ್ರದೇಶ ಎಲ್ಲಾ ರಂಗಗಳಲ್ಲಿ ಮಿಂಚುವಂತೆ ಮಾಡಿ. ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಧ್ಯಪ್ರದೇಶ ಹಿಂದುಳಿದಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಾಜಿನಾಮೆಗೆ ಬಿಜೆಪಿ ಪಟ್ಟು: ಬಂಧಿತ ನವಾಬ್ ಮಲಿಕ್ ಗೆ ಮಮತಾ ಬ್ಯಾನರ್ಜಿ ಬೆಂಬಲ
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಬಲಿಗರು ಹರ್ಷೋದ್ಗಾರ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಹಾಜರಿದ್ದ ಕೇಂದ್ರ ಸಚಿವ ಸಿಂಧಿಯಾ ಈ ಬಗ್ಗೆ ಪ್ರತಿಕ್ರಿಯೆ ನೀಡಲಿಲ್ಲ. ಮಧ್ಯಪ್ರದೇಶದ ಬಿಜೆಪಿ ಮುಖಂಡರೂ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು