ಏಳು ಎನ್ಕೌಂಟರ್: 3 ಪಾತಕಿಗಳ ಹತ್ಯೆ
Team Udayavani, Mar 26, 2018, 9:45 AM IST
ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳ ವಿರುದ್ಧ ಕಠಿನ ಕ್ರಮ ಮುಂದುವರಿಸಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ 24 ಗಂಟೆಗಳ ಅವಧಿಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ 7 ಎನ್ಕೌಂಟರ್ ನಡೆಸಿ ಮೂವರು ಮೋಸ್ಟ್ ವಾಂಟೆಡ್ ಅಪರಾಧಿಗಳನ್ನು ಕೊಲ್ಲಲಾಗಿದೆ. 7 ಮಂದಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಆರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.