ಗೋವು ಆಧಾರಿತ ನೈಸರ್ಗಿಕ ಕೃಷಿಗೆ ಒತ್ತು ನೀಡುವುದು ಇಂದಿನ ಅಗತ್ಯ : ಸಿಎಂ ಯೋಗಿ
ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಬೆದರಿಕೆ...
Team Udayavani, Jan 9, 2023, 2:58 PM IST
ಲಕ್ನೋ : ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಗೋವು ಆಧಾರಿತ ನೈಸರ್ಗಿಕ ಕೃಷಿಗೆ ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ (ಬಿಎಚ್ಯು) ಸ್ವತಂತ್ರತಾ ಭವನದಲ್ಲಿ ಆಯೋಜಿಸಲಾದ ಮೂರು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ‘ಸುಫ್ಲಾಮ್’ ಎರಡನೇ ದಿನದಂದು ಅವರು ರೈತರನ್ನು ಉದ್ದೇಶಿಸಿ ಮಾತನಾಡಿ, “ಹವಾಮಾನ ಬದಲಾವಣೆಯಿಂದಾಗಿ ಮಣ್ಣು ಮತ್ತು ನೀರಿಗೆ ದೊಡ್ಡ ನಷ್ಟ ಉಂಟಾಗಿದೆ. ಭೂಮಿ ತಾಯಿಯ ಜೊತೆ ಚೆಲ್ಲಾಟವಾಡುವುದು ತಪ್ಪಾಗಿದ್ದು, ಇದನ್ನು ಯಾವುದೇ ಬೆಲೆ ತೆತ್ತಾದರೂ ನಿಲ್ಲಿಸಬೇಕು ಎಂದರು.
‘ರಾಸಾಯನಿಕ ಕೃಷಿಯ ಬದಲು ಹಸು ಆಧಾರಿತ ನೈಸರ್ಗಿಕ ಕೃಷಿ ಮಾಡುವುದು ಅಗತ್ಯ. ಈ ರೀತಿಯಕೃಷಿಗೆ ಉತ್ತೇಜನ ನೀಡಲಾಗುವುದು. ಇದಕ್ಕಾಗಿ ನ್ಯಾಚುರಲ್ ಕೌನ್ಸಿಲ್ ಅನ್ನು ರಚಿಸಲಾಗಿದೆ. ಜನರು ಪರಿಸರವನ್ನು ವಿಷಪೂರಿತಗೊಳಿಸುತ್ತಿದ್ದಾರೆ ಆದ್ದರಿಂದ ನೈಸರ್ಗಿಕ ಅಂಶಗಳನ್ನು ಉಳಿಸಬೇಕು. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಗಂಭೀರವಾಗಿದೆ ಎಂದರು.
ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಭಾರತದ ಸಂಸ್ಕೃತಿಯು ವಸುದೈವ ಕುಟುಂಬಕಂ ತತ್ವಗಳನ್ನು ಆಧರಿಸಿದ್ದು, ಪೂರ್ವಜರ ಈ ಕಲ್ಪನೆಗೆ ಹೆಚ್ಚಿನ ಶಕ್ತಿ ನೀಡಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್