ಮದುವೆಗೆ ಬರುವಂತೆ ಅಲಂಕರಿಸಿದ ಕಾರುಗಳಲ್ಲಿ ಬಂದು ಐಟಿ ದಾಳಿ; 390 ಕೋಟಿ ರೂ. ಪತ್ತೆ!
ಸ್ಟೀಲ್ ವಸ್ತುಗಳ ಉತ್ಪಾದನೆಗೆ ಮಹಾರಾಷ್ಟ್ರದ ಜಲ್ನಾ ತುಂಬಾ ಜನಪ್ರಿಯ.
Team Udayavani, Aug 11, 2022, 12:36 PM IST
ಮಹಾರಾಷ್ಟ್ರ: ಇತ್ತೀಚೆಗೆ ಮಹಾರಾಷ್ಟ್ರದ ಜಲ್ನಾದಲ್ಲಿ ಬಾಲಿವುಡ್ ಸಿನಿಮಾಗಳಲ್ಲಿ ತೋರಿಸುವ ರೀತಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ವಿಷಯ ಬಹಿರಂಗವಾಗಿದೆ.
ಇದನ್ನೂ ಓದಿ:ಚಿಕ್ಕಮಗಳೂರು ಎಸ್ ಪಿ ಗೆ ಭಾವಪೂರ್ಣ ಬೀಳ್ಕೊಡುಗೆ: ಹೂಮಳೆಗೈದ ಸಿಬ್ಬಂದಿ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಲು ಬಂದಿದ್ದಾರೆ ಎಂಬ ವಿಷಯ ಯಾರಿಗೂ ತಿಳಿಯಬಾರದೆಂದು ಅಧಿಕಾರಿಗಳು ವರನ ಸಂಬಂಧಿಕರು ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಕಾರುಗಳನ್ನು ಅಲಂಕರಿಸಿಕೊಂಡು ಬಂದಿದ್ದರು. ಈ ಮೂಲಕ ಸುಮಾರು ಎಂಟು ದಿನಗಳ ಕಾಲದ ದಾಳಿಯಲ್ಲಿ 390ಕೋಟಿ ರೂಪಾಯಿ ಅಕ್ರಮ ಆಸ್ತಿಯನ್ನು ಜಲ್ನಾದಲ್ಲಿ ಪತ್ತೆ ಹಚ್ಚಿದ್ದರು.
ಸ್ಟೀಲ್ ವಸ್ತುಗಳ ಉತ್ಪಾದನೆಗೆ ಮಹಾರಾಷ್ಟ್ರದ ಜಲ್ನಾ ತುಂಬಾ ಜನಪ್ರಿಯ. ಆದರೆ ಇದೀಗ ಜಲ್ನಾ ಕಾನೂನು ಬಾಹಿರ ಸ್ಟೀಲ್ ಉತ್ಪಾದನಾ ಘಟಕಗಳತ್ತ ಆದಾಯ ತೆರಿಗೆ ಅಧಿಕಾರಿಗಳ ದೃಷ್ಟಿ ನೆಟ್ಟಿದೆ ಎಂದು ವರದಿ ವಿವರಿಸಿದೆ.
ಜಲ್ನಾದ ಸ್ಟೀಲ್ ಕಂಪನಿಯ ಫ್ಯಾಕ್ಟರಿ, ಮನೆಗಳು, ಫಾರ್ಮ್ ಹೌಸ್ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ 58 ಕೋಟಿ ರೂಪಾಯಿ ನಗದು, 32 ಕೆಜಿ ಚಿನ್ನಾಭರಣಗಳು, 16 ಕೋಟಿ ರೂ. ಮೌಲ್ಯದ ವಜ್ರಾಭರಣಗಳನ್ನು ಪತ್ತೆ ಹಚ್ಚಿದ್ದರು. ಅಲ್ಲದೇ ಸುಮಾರು 300 ಕೋಟಿ ರೂಪಾಯಿ ಮೌಲ್ಯದ ಆಸ್ತಿಯ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಆಗಸ್ಟ್ 1ರಂದು ದಾಳಿ ನಡೆಸಿದ್ದು, ಸುಮಾರು ಎಂಟು ದಿನಗಳವರೆಗೆ ಶೋಧ ಕಾರ್ಯ ನಡೆಸಿ, ಅಪಾರ ಪ್ರಮಾಣದ ಆಸ್ತಿ, ಪಾಸ್ತಿಗಳನ್ನು ಪತ್ತೆ ಹಚ್ಚಿರುವುದಾಗಿ ವರದಿ ಹೇಳಿದೆ. ಸುಮಾರು 16 ಗಂಟೆಗಳ ಕಾಲ ನಗದನ್ನು ಎಣಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ