ನೀರಿನ ಅವಘಡ ಹೆಚ್ಚಳ


Team Udayavani, Feb 10, 2020, 6:55 AM IST

water-sink

ದೇಶದಲ್ಲಿ ಪ್ರತಿದಿನ ಸಾರ್ವಜನಿಕ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ 83 ಜನ ಸಾವನ್ನಪ್ಪುತ್ತಿದ್ದಾರೆ ಎಂದು ಭಾರತದ ಆಕಸ್ಮಿಕ ಸಾವು ಮತ್ತು ಆತ್ಮಹತ್ಯೆ ವರದಿ-2020 ಹೇಳಿದೆ. ನದಿ, ಸಮುದ್ರ, ಸರೋವರಗಳಲ್ಲಿ ಮುಳುಗಿ ಸಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಪ್ರಕರಣಗಳು ಅಧಿಕವಾಗಿ ದಾಖಲಾಗುತ್ತಿವೆ. ಆದರೆ ಇಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರೂ, ಸರಕಾರ ಮಾತ್ರ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ವರದಿ ಹೇಳಿದೆ.

30,187 ಸಾವುಗಳು
2018ರ ಅಂಕಿ-ಅಂಶದ ಪ್ರಕಾರ ದೇಶದಲ್ಲಿ 30,187 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂತಹ ಹಲವು ಪ್ರಕರಣಗಳು ನಡೆದಿರ ಬಹುದಾಗಿದ್ದು, ಎಲ್ಲ ಪ್ರಕರಣಗಳು ದಾಖಲಾಗಿಲ್ಲ ಎಂದಿದೆ.

3ನೇ ಪ್ರಮುಖ ಕಾರಣ
ಆಕಸ್ಮಿಕ ಸಾವು ಘಟನೆಗಳ ಪೈಕಿ ನೀರಿನಿಂದ ಸಂಭವಿಸುವ ಅವಘಡಗಳ ಪ್ರಮಾಣ ಹೆಚ್ಚಿದ್ದು, ಆಕಸ್ಮಿಕ ಸಾವಿನಲ್ಲಿ ನೀರಿನಲ್ಲಿ ಮುಳುಗಿ ಸಾಯುವುದು ಮೂರನೇ ಪ್ರಕರಣವಾಗಿದೆ. ಅಂದರೆ ಪ್ರತಿವರ್ಷ ನೀರಿನಲ್ಲಿ ಮುಳುಗಿ ಶೇ. 7ರಷ್ಟು, ಅಪಘಾತಗಳಿಂದ ಶೇ. 43ರಷ್ಟು ಮತ್ತು ಹಠಾತ್‌ ಸಾವಿನಿಂದ ಶೇ. 11ರಷ್ಟು ಸಾವನ್ನಪ್ಪುತ್ತಿದ್ದಾರೆ.

3.60 ಲಕ್ಷ
2015ರಲ್ಲಿ ವಿಶ್ವಾದ್ಯಂತ ಸುಮಾರು 3,60,000 ಜನರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಉದ್ದೇಶ ಪೂರ್ವಕವಲ್ಲದ ಸಂಬಂಧಿತ ಸಾವುಗಳಿಗೆ ವಿಶ್ವದಲ್ಲಿಯೇ ಇದು ಮೂರನೇ ಪ್ರಮುಖ ಕಾರಣವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿ ಮಾಡಿತ್ತು.

ಕಾರಣಗಳೇನು ?
– ಸರಕಾರದ ನಿರ್ದಿಷ್ಟ ಯೋಜನೆ ಇಲ್ಲದೆ ಇರುವುದು.
– ಈಜುವಿಕೆ ಬಾರದೇ ಇರುವುದು.
– ಅಸುರಕ್ಷತೆ. ಅಪಾಯ ಸ್ಥಳಗಳಲ್ಲಿ ಕಾವಲುಗಾರರು ಇಲ್ಲದೆ ಇರುವುದು.
– ಜಾಗೃತಿ ಅಭಾವ, ತಡೆಗಟ್ಟುವಿಕೆ ಸುರಕ್ಷತೆಯ ಕುರಿತು ನೀತಿ ರೂಪಿಸದೆ ಇರುವುದು.

ರಾಜ್ಯ 3ನೇ ಸ್ಥಾನದಲ್ಲಿ
ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವು ಸಂಭವಿಸಿರುವ ಪ್ರಕರಣಗಳಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. ಕರ್ನಾಟದಲ್ಲಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 866ರ ಷ್ಟಿದ್ದು, ಕರ್ನಾಟಕ 2ನೇ ಸ್ಥಾನ ಮತ್ತು ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

ಅನಿರ್ದಿಷ್ಟ ಕಾರಣ
ಆಯತಪ್ಪಿ ಅಥವಾ ಆಕಸ್ಮಿಕವಾಗಿ ನೀರಿಗೆ ಬೀಳುತ್ತಿರುವುದು ಸಾವಿಗೆ ಪ್ರಮುಖ ಕಾರಣವಾಗಿದ್ದು, ಶೇ. 66ರಷ್ಟು ಅಂದರೆ 19,939 ಜನರು ಮರಣ ಹೊಂದಿದ್ದಾರೆ. ಜತೆಗೆ ದೋಣಿ ಮಗುಚುವಿಕೆಯಿಂದ ಶೇ. 1ರಷ್ಟು ಅಂದರೆ 258 ಮಂದಿ ಹಾಗೂ ಮೂರನೇ ಒಂದು ಭಾಗದಷ್ಟು ಅಂದರೆ 9,990 ಅನಿರ್ದಿಷ್ಟ ಕಾರಣಗಳಿಂದಾಗಿ ಸಾವು ಸಂಭವಿಸಿದೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.