ಕರಾವಳಿಯಲ್ಲಿ ಹೆಚ್ಚಿದ ಸೋಂಕು
Team Udayavani, Jul 28, 2021, 7:10 AM IST
ಹೊಸದಿಲ್ಲಿ: ಶೀಘ್ರದಲ್ಲಿಯೇ ಸೋಂಕಿನ ಮೂರನೇ ಅಲೆ ಅಪ್ಪಳಿಸಲಿದೆ ಎಂಬ ಆತಂಕದ ನಡುವೆಯೇ ಸಮಾಧಾನದ ವಿಚಾರವೊಂದು ಹೊರಬಿದ್ದಿದೆ. ಪ್ರಸ್ತುತ ದೇಶದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದ ಸೋಂಕು ಪ್ರಕರಣಗಳಿವೆ. ಜು.25ಕ್ಕೆ ಮುಕ್ತಾಯವಾದ ವಾರದಲ್ಲಿ ದೇಶದ 700 ಜಿಲ್ಲೆಗಳ ಲೆಕ್ಕಾಚಾರ ಗಮನಿಸಿದಾಗ 54 ಜಿಲ್ಲೆಗಳಲ್ಲಿ ಮಾತ್ರ ಸರಾಸರಿ 100 ಕೇಸುಗಳು ದೃಢಪಟ್ಟಿವೆ.
ಕೇರಳದ ಜಿಲ್ಲೆಗಳಲ್ಲಿ 100ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದ 12 ಜಿಲ್ಲೆಗಳಲ್ಲಿ 7 ದಿನಗಳ ಅವಧಿಯಲ್ಲಿ 100 ಕೇಸುಗಳು ದೃಢವಾಗಿವೆ. ಕೇರಳದ 14, ಮಹಾರಾಷ್ಟ್ರದ 12, ಆಂಧ್ರಪ್ರದೇಶ 8, ತಮಿಳುನಾಡು 6, ಕರ್ನಾಟಕದ 5 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಸೋಂಕು ದೃಢಪಟ್ಟಿದೆ.
ಪರೀಕ್ಷೆಯಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ: ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವುದರಿಂದಲೇ ಕೇರಳದಲ್ಲಿ ಪ್ರತೀ ದಿನ ಸೋಂಕು ಸಂಖ್ಯೆ ಹೆಚ್ಚಾಗುತ್ತಿದೆ. ಜು.17-24ರ ವರೆಗಿನ ವಾರವನ್ನು ಪರಿಗಣಿಸಿದರೆ ಪ್ರತೀ 10 ಲಕ್ಷಕ್ಕೆ ಕೇರಳದಲ್ಲಿ 3,604, ಅಸ್ಸಾಂನಲ್ಲಿ 3,531, ದೆಹಲಿ 3,211, ತೆಲಂಗಾಣ 2,975, ಕರ್ನಾಟಕದಲ್ಲಿ 2,090 ಪರೀಕ್ಷೆಗಳು ನಡೆದಿವೆ.
14 ಜಿಲ್ಲೆಗಳಲ್ಲಿ: ದೇಶದ 94 ಜಿಲ್ಲೆಗಳಲ್ಲಿ ಸರಾಸರಿ 1 ಸಾವು ದೃಢಪಟ್ಟಿದೆ. ಈ ಪೈಕಿ ಕರ್ನಾಟಕದ 14 ಜಿಲ್ಲೆಗಳು, ಮಹಾರಾಷ್ಟ್ರದ 27, ಕೇರಳದ 14, ಒಡಿ ಶಾದ13, ತಮಿಳುನಾಡಿನ 11 ಜಿಲ್ಲೆಗಳಲ್ಲಿ ಸರಾಸರಿ 1 ಸಾವು ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ