ಅಯೋಧ್ಯೆಯಲ್ಲಿ ಭದ್ರತೆ ಹೆಚ್ಚಳ
Team Udayavani, Nov 17, 2019, 5:53 AM IST
ಅಯೋಧ್ಯೆ: ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸಗೊಂಡ ವರ್ಷಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಭದ್ರತೆ ಬಿಗಿಗೊಳಿಸಲಾಗಿದೆ.
ರೆಡ್ ಝೋನ್ ಅತಿ ಭದ್ರತೆಯ ಪ್ರದೇಶದ ವ್ಯಾಪ್ತಿಗೆ ಬರುವ ರಾಮ ಜನ್ಮಭೂಮಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಅದರ ಸುತ್ತಮುತ್ತಲಿನ ಇತರೆ ಧಾರ್ಮಿಕ ಕೇಂದ್ರಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಯೋಧ್ಯೆಯ ಜಿಲ್ಲಾಧಿಕಾರಿ ಅನೂಜ್ ಝಾ ತಿಳಿಸಿದ್ದಾರೆ.