ನಿಲ್ಲದ ಪಾಕ್‌ ಕಳ್ಳಾಟ


Team Udayavani, Mar 6, 2019, 12:30 AM IST

z-28.jpg

ಇಸ್ಲಾಮಾಬಾದ್‌/ಹೊಸದಿಲ್ಲಿ: ಪುಲ್ವಾಮಾ ದಾಳಿಯ ಬಗ್ಗೆ ಭಾರತ ಕೊಟ್ಟ ಸಾಕ್ಷ್ಯವನ್ನು ತಿರಸ್ಕರಿಸಿರುವ ಪಾಕಿಸ್ಥಾನವು ಮಂಗಳವಾರ ಮತ್ತೂಂದು ಕಳ್ಳಾಟ ಶುರು ಮಾಡಿದೆ. ಉಗ್ರ ಸಂಘಟನೆಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳುವಂತೆ ಭಾರತ, ಅಮೆರಿಕ ಸಹಿತ ವಿಶ್ವದ ಪ್ರಮುಖ ರಾಷ್ಟ್ರಗಳಿಂದ ಒತ್ತಡ ತೀವ್ರಗೊಳ್ಳುತ್ತಿರುವಂತೆಯೇ ಜೈಶ್‌- ಎ- ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌ನ ಪುತ್ರ, ಸಹೋದರ ಸಹಿತ 44 ಮಂದಿ ಉಗ್ರರನ್ನು “ಬಂಧಿಸಿದೆ’ ಎಂದು ಹೇಳಿಕೊಂಡಿದೆ. ಮತ್ತೂಂದೆಡೆ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್‌ ಸುನೀಲ್‌ ಲಾಂಬಾ ಮಾತನಾಡಿ, ಸಾಗರದ ಮೂಲಕ ಪಾಕ್‌ ಉಗ್ರರು ಭಾರತದ ಮೇಲೆ ದಾಳಿ ಮಾಡುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಮತ್ತೂಂದು ಕಳ್ಳಾಟ
ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಸಹೋದರ ರವೂಫ್ ಅಸ್ಗರ್‌, ಅಜರ್‌ನ ಪುತ್ರ ಹಮ್ಮದ್‌ ಅಜರ್‌ ಸೇರಿ 44 ಮಂದಿಯನ್ನು ಮುಂಜಾಗ್ರತಾ ಕ್ರಮವಾಗಿ “ಬಂಧಿಸಲಾಗಿದೆ’ ಎಂದು ಹೇಳಿಕೊಂಡಿದೆ. ಆದರೆ ಇದು ಕಳ್ಳಾಟದಂತೆ ಕಾಣಿಸುತ್ತಿದೆ. ಜೈಶ್‌ ಉಗ್ರ ಸಂಘಟನೆಯ ಕೃತ್ಯದ ಕುರಿತ ಪುರಾವೆಗಳನ್ನು ಭಾರತವು 2 ದಿನಗಳ ಹಿಂದೆ ಪಾಕಿಸ್ಥಾನಕ್ಕೆ ಸಲ್ಲಿಸಿದ್ದು, ಪಾಕ್‌ನಲ್ಲಿ ಜೆಇಎಂ ಉಗ್ರರ ಶಿಬಿರಗಳು ಅಸ್ತಿತ್ವ ದಲ್ಲಿರುವ ಬಗ್ಗೆ, ಮಸೂದ್‌ ಅಜರ್‌ ಮತ್ತು ಆತನ ಕುಟುಂಬವು ಪಾಕ್‌ನಲ್ಲಿ ಪಡೆಯುತ್ತಿರುವ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗಿತ್ತು. ಈ ದಾಖಲೆಯಲ್ಲಿ ಉಗ್ರರಾದ ಮುಫ್ತಿ ರವೂಫ್ ಮತ್ತು ಹಮ್ಮದ್‌ ಅಜರ್‌ನ ಹೆಸರನ್ನೂ ಸೇರಿಸಲಾಗಿತ್ತು.

ಸಾಗರ ಮಾರ್ಗದಿಂದಲೂ ದಾಳಿ?
ಪಾಕಿಸ್ಥಾನವು ಮತ್ತೂಂದೆಡೆ ಸದ್ದಿಲ್ಲದೆ ಭಾರತದ ಮೇಲೆ ದಾಳಿ ಮಾಡಲು ಉಗ್ರರಿಗೆ ಅವಕಾಶ ಕಲ್ಪಿಸುತ್ತಿರುವ ಮಾಹಿತಿಯೂ ಹೊರಬಿದ್ದಿದೆ. ಪುಲ್ವಾಮಾ ದಾಳಿಯ ಅನಂತರ ಸಮುದ್ರ ಮಾರ್ಗದಿಂದಲೂ ಭಾರತದ ಮೇಲೆ ದಾಳಿ ನಡೆಸಲು ಉಗ್ರರು ಸಜ್ಜಾಗಿದ್ದಾರೆ ಎಂದು ಭಾರತೀಯ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಸುನೀಲ್‌ ಲಾಂಬಾ ಮಾಹಿತಿ ನೀಡಿದ್ದಾರೆ. ಇಂಡೋ-ಪೆಸಿಫಿಕ್‌ ಪ್ರಾಂತೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ನೆರೆ ರಾಷ್ಟ್ರದ ಕೃಪಾಪೋಷಣೆಯಲ್ಲಿ ಬೆಳೆದು ನಿಂತಿರುವ ಉಗ್ರವಾದಿಗಳು ಭಾರತವನ್ನು ಅಸ್ಥಿರಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಇಂತಹ ಸವಾಲುಗಳನ್ನು ಎದುರಿಸಲು ಸೇನೆ ಸರ್ವ ಸನ್ನದ್ಧವಾಗಿದೆ ಎಂದು ಹೇಳಿದರು. ಇದೇ ವೇಳೆ, ಭಯೋತ್ಪಾದನೆ ಎಂಬ ಅನಿಷ್ಟವು ಕ್ಷಿಪ್ರವಾಗಿ ಜಗತ್ತನ್ನು ಹರಡಿಕೊಳ್ಳುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದ ಲಾಂಬಾ, ಒಂದು ನಿರ್ದಿಷ್ಟ ಭಯೋತ್ಪಾದಕ ಸಂಘಟನೆಯು ಮುಂಬರುವ ದಿನಗಳಲ್ಲಿ ಜಗತ್ತಿಗೇ ಕಂಟಕಪ್ರಾಯವಾಗಲಿದೆ ಎಂಬ ಎಚ್ಚರಿಕೆಯನ್ನೂ ನೀಡಿದರು.

ಮತ್ತೆ ಸುಳ್ಳಿನ ಮೊರೆ ಹೋದ ಪಾಕ್‌
ಪದೇ ಪದೆ ತಿರುಚಿದ ವೀಡಿಯೋ, ಹಳೆಯ ಘಟನೆಗಳ ಫೋಟೋಗಳನ್ನು ಹಾಕಿ “ಸಾಹಸ’ ಪ್ರದರ್ಶನ ಮಾಡುತ್ತಿರುವ ಪಾಕಿಸ್ಥಾನ ಮತ್ತೆ ಸುಳ್ಳಿನ ಮೊರೆ ಹೋಗಿದೆ. ಆದರೆ ಈ ಸುಳ್ಳಿನ ಮುಖವಾಡವನ್ನೂ ಭಾರತ ಯಶಸ್ವಿಯಾಗಿ ಕಳಚಿದೆ. ನಮ್ಮ ಜಲಗಡಿಯನ್ನು ಉಲ್ಲಂ ಸಿ ಒಳಬರಲು ಯತ್ನಿಸಿದ ಭಾರತದ ಜಲಾಂತರ್ಗಾಮಿಯನ್ನು ನೌಕಾಪಡೆ ಹಿಮ್ಮೆಟ್ಟಿಸಿದೆ ಎಂದು ಪಾಕ್‌ ಘೋಷಿಸಿತ್ತು. ಅಲ್ಲದೆ, ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನೂ ಮಾಧ್ಯಮಗಳಿಗೆ ಬಿಡುಗಡೆ ಮಾಡಿತ್ತು. ಭಾರತದ ಜಲಾಂತರ್ಗಾಮಿ ಪಾಕ್‌ ಪ್ರವೇಶಿಸದಂತೆ ನಾವು ತಡೆದಿದ್ದೇವೆ. ಅದನ್ನು ನಾವು ಟಾರ್ಗೆಟ್‌ ಮಾಡಿ ನಾಶ ಮಾಡಬಹುದಿತ್ತು. ಆದರೆ ಪಾಕಿಸ್ಥಾನದ ಶಾಂತಿಯ ನೀತಿಗೆ ತಲೆಬಾಗಿ ನಾವು ಹಾಗೆ ಮಾಡಲಿಲ್ಲ  ಎಂದೂ ನೌಕಾಪಡೆ ತಿಳಿಸಿತ್ತು. ಇದಾದ ಸ್ವಲ್ಪ ಸಮಯದಲ್ಲೇ ಆ ವೀಡಿಯೋದ ಸತ್ಯಾಸತ್ಯತೆಯನ್ನು ಭಾರತ ಹೊರಗೆಳೆದಿದೆ. ಇದು 2016ರ ನ.18ರಂದು ಚಿತ್ರೀಕರಿಸಲಾದ ದೃಶ್ಯವಾಗಿದ್ದು, ಅದನ್ನು ತಿರುಚಿ, ದಿನಾಂಕವನ್ನು ಬದಲಿಸಿ ಪಾಕಿಸ್ಥಾನವು ಈಗಿನ ದೃಶ್ಯವೆಂದು ಬಿಡುಗಡೆ ಮಾಡಿದೆ ಎಂಬುದನ್ನು ಭಾರತ ಬಹಿರಂಗಪಡಿಸಿದೆ.

ಸೇನಾ ದಾಳಿ ಆಗಿರಲಿಲ್ಲ: ರಕ್ಷಣಾ ಸಚಿವೆ ನಿರ್ಮಲಾ
ಬಾಲಾಕೋಟ್‌ ದಾಳಿ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, “ಜೈಶ್‌ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತದ ವಾಯುಪಡೆ ನಡೆಸಿದ ದಾಳಿಯು ಸೇನಾ ದಾಳಿಯಾಗಿರಲಿಲ್ಲ. ಹೀಗಾಗಿ ನಾಗರಿಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ಸಾವು-ನೋವಿನ ಸಂಖ್ಯೆ ಬಹಿರಂಗ ಪಡಿಸಲು ಅದು ನಮ್ಮಲ್ಲಿಲ್ಲ. ವಿದೇಶಾಂಗ ಕಾರ್ಯದರ್ಶಿ ಗೋಖಲೆ ಅವರೂ ಸಾವಿನ ಅಂಕಿ ಸಂಖ್ಯೆಯನ್ನು ನೀಡಿಲ್ಲ’ ಎಂದು ಹೇಳಿದ್ದಾರೆ.

ವಾಯುಪಡೆಯ ದಾಳಿಗೆ ಸಾ  ಕೇಳುತ್ತಿರುವ ವಿಪಕ್ಷಗಳು ಪಾಕಿಸ್ಥಾನದ ಪೋಸ್ಟರ್‌ ಬಾಯ್‌ಗಳಾಗಿದ್ದಾರೆ. ಅವರ ಹೇಳಿಕೆಗಳು ಪಾಕ್‌ ಪತ್ರಿಕೆಗಳಲ್ಲಿ ಹೆಡ್‌ಲೈನ್‌ಗಳಾಗಿ ಮಿಂಚುತ್ತಿವೆ. ಅವರೆಲ್ಲರೂ ಪಾಕಿಸ್ಥಾನವನ್ನು ಶಾಂತಿಯ ದೇವತೆಯಂತೆ ನೋಡುತ್ತಿದ್ದಾರೆ. ದೇಶವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೆ.
– ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.