ಶ್ರೀಲಂಕಾಕ್ಕೆ 3,223 ಕೋಟಿ ರೂ. ನೆರವು
ರಾಜಪಕ್ಷೆ ಜತೆಗಿನ ಮಾತುಕತೆ ಬಳಿಕ ನರೇಂದ್ರ ಮೋದಿ ಘೋಷಣೆ
Team Udayavani, Nov 30, 2019, 5:30 AM IST
ಹೊಸದಿಲ್ಲಿ: ಶ್ರೀಲಂಕಾದ ನೂತನ ಅಧ್ಯಕ್ಷ ಗೊಟಬಯ ರಾಜಪಕ್ಷೆ, ಶುಕ್ರವಾರ ಭಾರತದ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ರನ್ನು ಭೇಟಿ ಮಾಡಿದ್ದಾರೆ. ದ್ವಿಪಕ್ಷೀಯ ಮಾತು ಕತೆ ಬಳಿಕ ಪ್ರಧಾನಿ ಮೋದಿ ಅವರು ಶ್ರೀಲಂಕಾಕ್ಕೆ 3223 ಕೋಟಿ ರೂ. ಆರ್ಥಿಕ ನೆರವನ್ನು ಘೋಷಣೆ ಮಾಡಿದ್ದಾರೆ.
ಈ ಪೈಕಿ 358 ಕೋಟಿ ರೂ.ಗಳನ್ನು ಭಯೋತ್ಪಾದನೆ ವಿರುದ್ಧ ಹೋರಾಡಲು ನೀಡಲಾಗಿದೆ. ಲಂಕಾದಲ್ಲಿ ವಾಸಿಸುವ ತಮಿಳಿಗರ ಆಶೋತ್ತರಗಳನ್ನು ಪೂರೈಸು ವುದು, ಶ್ರೀಲಂಕಾದ ಆರ್ಥಿಕ ಉನ್ನತಿಗೆ ನೆರವು ನೀಡುವುದು ಬಾಕಿ ಸಾಲದ ಉದ್ದೇಶವಾಗಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಮೀನು ಗಾರರಿಂದ ವಶಪಡಿಸಿಕೊಂಡ ಎಲ್ಲ ದೋಣಿಗಳನ್ನು ಬಿಡುಗಡೆ ಮಾಡುವು ದಾಗಿ ಗೊಟಬಯ ಭರವಸೆ ನೀಡಿದ್ದಾರೆ. ಅಲ್ಲದೆ, ತನ್ನ ಅಧಿಕಾರಾವಧಿಯಲ್ಲಿ ಭಾರತದೊಂದಿಗೆ ಸಂಬಂಧವನ್ನು ಉನ್ನತ ಮಟ್ಟಕ್ಕೆ ಒಯ್ಯಲು ಯತ್ನಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಪ್ರತಿಕ್ರಿಯಿಸಿದ ಮೋದಿ, ಶ್ರೀಲಂಕಾದ ಅಭಿವೃದ್ಧಿಗೆ ಎಲ್ಲ ನೆರವು ನೀಡುವುದಾಗಿ ತಿಳಿಸಿದ್ದಾರೆ.
ತಮ್ಮ ಮೊದಲ ವಿದೇಶಿ ಭೇಟಿಗೆ ಭಾರತವನ್ನು ಗೊಟಬಯ ಆಯ್ದು ಕೊಂಡಿರುವುದು, ಭಾರತಕ್ಕೆ ಅವರು ನೀಡಿರುವ ಆದ್ಯತೆಯ ಸಂಕೇತ ಎನ್ನುವು ದನ್ನು ಇಲ್ಲಿ ಗಮನಿಸಬಹುದು. ತಮ್ಮ 3 ದಿನಗಳ ಭೇಟಿಯ ಅಂಗವಾಗಿ, ಗೊಟಬಯ ಗುರುವಾರವೇ ಭಾರತಕ್ಕೆ ಆಗಮಿಸಿದ್ದಾರೆ.
ಶ್ರೀಲಂಕಾದ ನೂತನ ಅಧ್ಯಕ್ಷ ಗೊಟಬಯ ರಾಜಪಕ್ಷೆಗೆ ಹಸ್ತಲಾಘವ ಮಾಡುತ್ತಿರುವ ಪ್ರಧಾನಿ ಮೋದಿ. ರಾಷ್ಟ್ರಪತಿ ಕೋವಿಂದ್ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ