ಪಾಕ್, ಚೀನ ಕಣ್ತಪ್ಪಿಸಿ ಲಡಾಖ್ ಗೆ ಸೇನೆ ತೆರಳಲು ಭಾರತದಿಂದ ರಹಸ್ಯ ರಸ್ತೆ

ಹೊಸ ರಸ್ತೆಯು ನಿಮು-ಪದಮ್‌ -ದಾರ್ಚಾ ಮಾರ್ಗವಾಗಿ ಸಾಗುತ್ತದೆ.

Team Udayavani, Aug 20, 2020, 8:45 AM IST

ಪಾಕ್, ಚೀನ ಕಣ್ತಪ್ಪಿಸಿ ಲಡಾಖ್ ಗೆ ಸೇನೆ ತೆರಳಲು ಭಾರತದಿಂದ ರಹಸ್ಯ ರಸ್ತೆ

Representative Image

ನವದೆಹಲಿ : ಪಾಕಿಸ್ತಾನ ಹಾಗೂ ಚೀನಾಕ್ಕೆ ಸನಿಹವಾಗಿ ರುವ ಲಡಾಖ್‌ಗೆ ತ್ವರಿತವಾಗಿ ಸೇನೆ ಹಾಗೂ ಸೇನಾ ಸರಂಜಾಮುಗಳನ್ನು ಸಾಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಹಿಮಾಚಲ ಪ್ರದೇಶದ ಮನಾಲಿಯಿಂದ ಲಡಾಖ್‌ವರೆಗೆ ಹೆದ್ದಾರಿಯೊಂದನ್ನು ನಿರ್ಮಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಲ್ಲದೆ, ದುರ್ಗಮ ಪ್ರದೇಶಗಳಿಂದ ಸಾಗುವ ಈ ರಸ್ತೆಯಲ್ಲಿ ಸಂಚರಿಸುವ ಯಾವುದೇ ಸೇನಾ ವಾಹನದ ಪರಿವೀಕ್ಷಣೆ ನಡೆಸಲು ಪಾಕಿಸ್ತಾನಕ್ಕೆ ಅಥವಾ ಚೀನಾಕ್ಕೆ ಸಾಧ್ಯವಾಗುವುದಿಲ್ಲ.

ಸದ್ಯಕ್ಕೆ ಮನಾಲಿಯಿಂದ ಲಡಾಖ್‌ ಅನ್ನು ಸಂಪರ್ಕಿಸಲು ಈಗಾಗಲೇ ಎರಡು ರಸ್ತೆಗಳಿದ್ದು, ಹೊಸ ರಸ್ತೆ ಅವೆರಡೂ ಸ್ಥಳಗಳನ್ನು ಬೆಸೆಯುವ ಮೂರನೇ ಸಂಪರ್ಕವಾಗಲಿದೆ. ಹೊಸ ರಸ್ತೆಯು ನಿಮು-ಪದಮ್‌ -ದಾರ್ಚಾ ಮಾರ್ಗವಾಗಿ ಸಾಗುತ್ತದೆ. ಮೊದಲಿಗೆ ಮನಾಲಿಯಿಂದ ಲೇಹ್‌ವರೆಗೆ ತಲುಪಿ ಅಲ್ಲಿಂದ ಲಡಾಖ್‌ ಅನ್ನು ಬೆಸೆಯುತ್ತದೆ. ಈಗ ಮನಾಲಿಯಿಂದ ಲಡಾಖ್‌ಗೆ ಹೋಗಲು ಹಿಮಾಚಲ ಪ್ರದೇಶದ ಸರ್ಚುವಿನ ಮೂಲಕ ಅಥವಾ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮೂಲಕ ಸಾಗಬೇಕಿದೆ.

ಈ ಎರಡೂ ರಸ್ತೆಗಳು ತುಂಬಾ ದೂರ ಹಾಗೂ ಪಾಕಿಸ್ತಾನ, ಚೀನಾ ಸೇನೆಗಳಿಂದ  ಪರಿವೀಕ್ಷಣೆಗೊಳ ಪಡಬಹುದಾದ ರಸ್ತೆಗಳು. ಆದರೆ, ಹೊಸ ಮಾರ್ಗದಿಂದ 3ರಿಂದ 4 ಗಂಟೆಗಳ ಸಮಯ ಉಳಿತಾಯವಾಗುತ್ತದಲ್ಲದೆ, ಇಲ್ಲಿ ಓಡಾಡುವ ಸೇನಾ ವಾಹನಗಳ ಮೇಲೆ ದೃಷ್ಟಿ ನೆಡಲು ನೆರೆ ಷ್ಟ್ರಗಳಿಗೆ ಅಸಾಧ್ಯವಾಗಲಿದೆ ಎಂದು ಮೂಲಗಳು ವಿವರಿಸಿವೆ.

ಚೀನಾ ಸವಾಲಿಗೆ ನೌಕಾಪಡೆ ಸನ್ನದ್ಧ: ರಾಜನಾಥ್‌ ಸಿಂಗ್‌

ಭಾರತದ ಕರಾವಳಿಯ ಮೇಲೆ ಚೀನಾದಿಂದ ಯಾವುದೇ ಸಂದರ್ಭದಲ್ಲಿ ಒದಗಬಹುದಾದ ದಾಳಿಗಳು ಹಾಗೂ ಇನ್ನಿತರ ಭದ್ರತಾ ಸವಾಲುಗಳನ್ನು ಹಿಮ್ಮೆಟ್ಟಿಸುವಲ್ಲಿ ಭಾರತೀಯ ನೌಕಾಪಡೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಸಮಾಧಾನಕರವಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ನೌಕಾಪಡೆಯ ಕಮಾಂಡರ್‌ಗಳಿಗಾಗಿ ಆಯೋಜಿಸಲಾಗಿರುವ ಮೂರು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು “ದೇಶದ ಸಾಗರ ತೀರಗಳನ್ನು ರಕ್ಷಿಸುವಲ್ಲಿ ನೌಕಾಪಡೆ ಸ್ಮರಣೀಯ ಸೇವೆ ಯನ್ನು ನೀಡಿದೆ.

ಅದಕ್ಕಾಗಿ ದೇಶ ಬಾಂಧವ್ಯರು ನೌಕಾಪಡೆಗೆ ಚಿರಋಣಿಯಾಗಿದ್ದಾರೆ. ಸಾಗರ ತೀರಗಳಲ್ಲಿ ತನ್ನ ನೌಕೆಗಳನ್ನು, ಸಮರ ವಿಮಾನಗಳನ್ನು ನಿಯೋಜಿಸಿ, ಚೀನಾದಿಂದ ಯಾವುದೇ ಕ್ಷಣದಲ್ಲಿ ಎದುರಾಗ ಬ ಹುದಾದ ಸವಾಲನ್ನು ಎದುರಿಸಲು ಸನ್ನದ್ಧವಾಗಿರುವ ಕ್ರಮ ಮೆಚ್ಚು ವಂಥದ್ದು’ ಎಂದರು.

ಲಡಾಖ್‌ ನಲ್ಲಿ ಇತ್ತೀಚೆಗೆ ಭಾರತ-ಚೀನಾ ಸೈನಿಕರು ಮುಖಾಮುಖಿಯಾಗಿದ ನಂತರ, ಎರಡೂ ದೇಶಗಳ ನಡುವೆ ಉಲ್ಪಣಿಸಿರುವ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಭಾರತೀಯ ನೌಕಾಪಡೆ, ಚೀನಾಕ್ಕೆ ಹತ್ತಿರವಿರುವ ಭಾರತೀಯ ಕರಾವಳಿಯಲ್ಲಿ ತನ್ನ ಯುದ್ಧ ನೌಕೆಗಳನ್ನು, ಕಾವಲು ನೌಕೆಗಳನ್ನು ಸನ್ನದ್ಧವಾಗಿಸಿಕೊಂಡು ಕಟ್ಟುನಿಟ್ಟಾಗಿ ಕಾಯುತ್ತಿದೆ.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.