ಭಾರತ-ಚೀನ ಮುಖಾಮುಖಿ; ಇದಿರೇಟು ನೀಡಲು ಭಾರತ ಸರ್ವಸನ್ನದ್ಧ


Team Udayavani, Sep 13, 2020, 6:20 AM IST

ಭಾರತ-ಚೀನ ಮುಖಾಮುಖಿ; ಇದಿರೇಟು ನೀಡಲು ಭಾರತ ಸರ್ವಸನ್ನದ್ಧ

ಹೊಸದಿಲ್ಲಿ: ಶಾಂತಿ ಮಂತ್ರ ಪಠಿಸುತ್ತಲೇ ಬೆನ್ನಿಗೆ ಚೂರಿ ಇರಿಯುವ ಕೆಲಸ ಮಾಡುತ್ತಿರುವ ಚೀನವು ಮತ್ತೆ ತನ್ನ ಕೆಟ್ಟ ಚಾಳಿ ಮುಂದುವರಿಸಿದೆ. ಲಡಾಖ್‌ ಸನಿಹದ ಪ್ಯಾಂಗಾಂಗ್‌ ತ್ಸೋನ ದಕ್ಷಿಣ ಭಾಗದಲ್ಲಿರುವ ಸ್ಪ್ಯಾಂಗ್ಗರ್‌ ಗ್ಯಾಪ್‌ ಬಳಿ ಚೀನದ ಸಾವಿರಾರು ಸೈನಿಕರು ಟ್ಯಾಂಕರ್‌ಗಳು ಮತ್ತು ಹೋವಿಟ್ಜರ್‌ಗಳೊಂದಿಗೆ ಜಮಾಯಿಸಿದ್ದಾರೆ. ಈ ಮೂಲಕ ಎರಡೂ ಸೇನೆಗಳು ಮುಖಾಮುಖಿಯಾಗಿ ನಿಂತು ಯುದ್ಧ ಮಾಡುವಷ್ಟು ಸನಿಹಕ್ಕೆ ಬಂದಿವೆ.

ಈ ಬೆಳವಣಿಗೆಗಳ ಬೆನ್ನಲ್ಲೇ ಭಾರತೀಯ ಸೇನೆಯೂ ತೀವ್ರ ಕಟ್ಟೆಚ್ಚರ ವಹಿಸಿದೆ. ಚೀನದ ಸೈನಿಕರು ಗಡಿಯ ಸನಿಹಕ್ಕೆ ಬರುತ್ತಿದ್ದಂತೆ ಭಾರತೀಯ ಯೋಧರೂ ಶಸ್ತ್ರಾಸ್ತ್ರ ಗಳೊಂದಿಗೆ ಗಡಿಯತ್ತ ಧಾವಿಸಿದ್ದಾರೆ. ಚೀನದ ಸೇನೆಯ ಅಟಾಟೋಪ ಎದುರಿಸಲು ಸೇನೆಯೂ ಸರ್ವರೀತಿಯಲ್ಲೂ ಸನ್ನದ್ಧವಾಗಿ ನಿಂತಿದೆ ಎಂದು ಸರಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಒಂದು ಆಂಗ್ಲ ವೆಬ್‌ಸೈಟ್‌ ವರದಿ ಮಾಡಿದೆ.

ಮೂಲಗಳ ಪ್ರಕಾರ ಚೀನದ ಮಿಲಿಶಿಯಾ ಸ್ಕ್ವಾಡ್‌ ಈ ಭಾಗಕ್ಕೆ ಬಂದಿದೆ. ಇದರಲ್ಲಿ ಪರ್ವತಾರೋಹಿಗಳು, ಬಾಕ್ಸರ್‌ಗಳು, ಸ್ಥಳೀಯ ಸಮರ ಕ್ಲಬ್‌ನ ಸದಸ್ಯರು ಮತ್ತು ಇತರ ಸಿಬಂದಿ ಇರುತ್ತಾರೆ. ಈ ಸ್ಕ್ವಾಡ್‌ ಅನ್ನು ಚೀನ ಸೇನೆಯ ನೆರವಿಗಾಗಿ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಪಹರಣ: ಗ್ಲೋಬಲ್‌ ಟೈಮ್ಸ್‌ ಧಿಮಾಕು
ಅರುಣಾಚಲ ಪ್ರದೇಶದ ಐವರು ಯುವಕರ ಅಪಹರಣ ಪ್ರಕರಣದ ಬೆನ್ನಲ್ಲೇ ಕಳೆದ ಸೋಮವಾರ ಚೀನ ಸರಕಾರದ ಮುಖವಾಣಿ ಗ್ಲೋಬಲ್‌ ಟೈಮ್ಸ್‌ ಅರುಣಾಚಲ ಪ್ರದೇಶ ಸಂಬಂಧ ಉದ್ಧಟತನ ಮೆರೆದಿತ್ತು. ಇದುವರೆಗೆ ಚೀನವು ಈ ರಾಜ್ಯಭಾರತದ್ದು ಎಂದು ಗುರುತಿಸಿಯೇ ಇಲ್ಲ ಎಂದಿತ್ತು. ಅದು ಟಿಬೆಟ್‌ನ ಮತ್ತೂಂದು ಭಾಗ ಎಂದೇ ನಂಬಿದ್ದೇವೆ ಎಂದು ಬರೆದು ಭಾರತೀಯ ಸಾರ್ವಭೌಮತೆ ವಿಚಾರದಲ್ಲಿ ಮೂಗುತೂರಿಸಿತ್ತು.

ಈ ಉದ್ಧಟತನದ ನಡುವೆಯೇ ಚೀನವು ಸದ್ದಿಲ್ಲದೆ ಭಾರತದ ಯುವಕರನ್ನು ಬಿಡುಗಡೆ ಮಾಡಿದೆ. ಮಾಲ್ಡೀವ್ಸ್‌ ಜತೆ ಅಮೆರಿಕ ಒಪ್ಪಂದ
ಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಚೀನದ ಪ್ರಭಾವವನ್ನು ತಗ್ಗಿಸುವ ಉದ್ದೇಶದಿಂದ ಅಮೆರಿಕ ಸರಕಾರವು ಮಾಲ್ಡೀವ್ಸ್‌ ಜತೆಗೆ ರಕ್ಷಣಾತ್ಮಕ ಒಪ್ಪಂದಗಳಿಗೆ ಸಹಿ ಹಾಕಿದೆ. ಅಮೆರಿಕದ ಈ ನಡೆಯು ಭಾರತಕ್ಕೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.