ಸೆಮಿಕಂಡಕ್ಟರ್‌ ಘಟಕ ಸ್ಥಾಪಿಸಿದ್ರೆ ಸರ್ಕಾರವೇ ಭರಿಸಲಿದೆ ಅರ್ಧದಷ್ಟು ವೆಚ್ಚ

"ಚಿಪ್‌' ಹಬ್‌ನತ್ತ ಹೆಜ್ಜೆ

Team Udayavani, Sep 22, 2022, 7:25 AM IST

thumb news semiconductor

ನವದೆಹಲಿ: ಸೆಮಿಕಂಡಕ್ಟರ್‌ ಮಾರುಕಟ್ಟೆಯು ವೇಗವಾಗಿ ಬೆಳೆಯುತ್ತಿರುವಂತೆಯೇ ಭಾರತವನ್ನು “ಚಿಪ್‌ ಉತ್ಪಾದನಾ ಹಬ್‌’ ಅನ್ನಾಗಿ ಪರಿವರ್ತಿಸುವ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ.

ದೇಶದಲ್ಲಿ ಹೊಸದಾಗಿ ಸೆಮಿಕಂಡಕ್ಟರ್‌ ಘಟಕವನ್ನು ಸ್ಥಾಪಿಸಿದರೆ, ಒಟ್ಟಾರೆ ಯೋಜನಾ ವೆಚ್ಚದ ಶೇ.50ರಷ್ಟನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿದೆ. ಈ ಪ್ರಸ್ತಾಪಕ್ಕೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯ ಅನುಮೋದನೆಯೂ ಸಿಕ್ಕಿದೆ.

ಅದರಂತೆ, ಇನ್ನು ಮುಂದೆ ಸೆಮಿಕಂಡಕ್ಟರ್‌ ಘಟಕವನ್ನು ಸ್ಥಾಪಿಸುವವರಿಗೆ ಕೇಂದ್ರ ಸರ್ಕಾರದಿಂದ ಯೋಜನಾ ವೆಚ್ಚದ ಅರ್ಧದಷ್ಟು ಹಣಕಾಸು ನೆರವು ಸಿಗಲಿದೆ. ಅಷ್ಟೇ ಅಲ್ಲ, ಡಿಸ್‌ಪ್ಲೇ ಉತ್ಪಾದನೆ ಮಾಡುವಂಥ ಕಂಪನಿಗಳಿಗೆ ವಿಧಿಸಲಾಗಿರುವ ಗರಿಷ್ಠ ಹೂಡಿಕೆಯ ಮಿತಿಯನ್ನೂ ತೆಗೆದುಹಾಕಲು ಸಂಪುಟ ಒಪ್ಪಿಗೆ ನೀಡಿದೆ. ಈ ಮೂಲಕ ದೇಶದಲ್ಲಿ ಸ್ಥಳೀಯ ಉತ್ಪಾದನೆಗೆ ಉತ್ತೇಜನ ನೀಡುವ ಕೆಲಸವನ್ನು ಸರ್ಕಾರ ಮಾಡಿದೆ.

ಜಾಗತಿಕ ಚಿಪ್‌ ಪೂರೈಕೆ ಸರಪಳಿಯಲ್ಲಿ ಭಾರತವೂ ಪ್ರಮುಖ ಪಾಲುದಾರನಾಗಬೇಕು ಎನ್ನುವುದು ಪ್ರಧಾನಿ ಮೋದಿ ಅವರ ಮಹದುದ್ದೇಶವಾಗಿದೆ. ಅದಕ್ಕಾಗಿ 10 ಶತಕೋಟಿ ಡಾಲರ್‌ ಪ್ರೋತ್ಸಾಹ ಧನವನ್ನು ಸರ್ಕಾರ ಮೀಸಲಿರಿಸಿದ್ದು, ದೊಡ್ಡ ಮಟ್ಟದ ಹೂಡಿಕೆ ಮಾಡುವವರಿಗಾಗಿ ಕಾಯುತ್ತಿದೆ. ಈ ಹಿಂದೆ, ಹೊಸ ಡಿಸ್‌ಪ್ಲೇ ಮತ್ತು ಚಿಪ್‌ ಸ್ಥಾವರವನ್ನು ಸ್ಥಾಪಿಸುವವರಿಗೆ ಶೇ.30-50ರಷ್ಟು ವೆಚ್ಚ ಭರಿಸುವುದಾಗಿ ಸರ್ಕಾರ ಹೇಳಿತ್ತು. ಈಗ ಶೇ.50ರಷ್ಟು ಬಂಡವಾಳ ವೆಚ್ಚವನ್ನೂ ಭರಿಸುವುದಾಗಿ ಹೇಳಿದೆ.

ಕಳೆದ ವಾರವಷ್ಟೇ ವೇದಾಂತ ಕಂಪನಿಯು ತೈವಾನ್‌ನ ಫಾಕ್ಸ್‌ಕಾಮ್‌ನೊಂದಿಗೆ ಒಪ್ಪಂದ ಮಾಡಿಕೊಂಡು ಗುಜರಾತ್‌ನಲ್ಲಿ 19.5 ಶತಕೋಟಿ ಡಾಲರ್‌ ಬಂಡವಾಳದೊಂದಿಗೆ ಸೆಮಿಕಂಡಕ್ಟರ್‌ ಮತ್ತು ಡಿಸ್‌ಪ್ಲೇ ಉತ್ಪಾದನಾ ಘಟಕ ಸ್ಥಾಪಿಸುವುದಾಗಿ ಘೋಷಿಸಿತ್ತು. ಅದಕ್ಕೂ ಮುನ್ನ ಅಂತಾರಾಷ್ಟ್ರೀಯ ಒಕ್ಕೂಟ ಐಎಸ್‌ಎಂಸಿ ಮತ್ತು ಸಿಂಗಾಪುರ ಮೂಲದ ಐಜಿಎಸ್‌ಎಸ್‌ ವೆಂಚರ್ಸ್‌, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕ್ರಮವಾಗಿ ಘಟಕ ಸ್ಥಾಪಿಸುವುದಾಗಿ ಘೋಷಿಸಿದ್ದವು.

ಸರಕು ಸಾಗಣೆ ನೀತಿಗೆ ಅಸ್ತು:
ಇದೇ ವೇಳೆ, ಸರಕು ಸಾಗಣೆ ಕ್ಷೇತ್ರದ ಜಾಗತಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ, ಸಾಗಣೆ ವೆಚ್ಚ ತಗ್ಗಿಸುವ ಮತ್ತು ಸರಕುಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ರಾಷ್ಟ್ರೀಯ ಸರಕು ಸಾಗಣೆ ನೀತಿಗೂ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಮಾಹಿತಿ ನೀಡಿದ್ದಾರೆ. ಕಳೆದ ವಾರವಷ್ಟೇ ಪ್ರಧಾನಿ ಮೋದಿ ಅವರು ಈ ನೀತಿಯನ್ನು ಅನಾವರಣಗೊಳಿಸಿದ್ದರು. ಇನ್ನು, ಸೋಲಾರ್‌ ಪಿವಿ ಮಾಡ್ನೂಲ್‌ಗ‌ಳ ಉತ್ಪಾದನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ 19,500 ಕೋಟಿ ರೂ.ಗಳ ಉತ್ಪಾದನೆ ಆಧರಿತ ಪ್ರೋತ್ಸಾಹ ಧನ ಯೋಜನೆಗೂ ಸಂಪುಟದ ಅನುಮತಿ ದೊರೆತಿದೆ.

ಯಾವುದಕ್ಕೆ ಚಿಪ್‌ ಬಳಕೆ?
ಸ್ಮಾರ್ಟ್‌ಫೋನುಗಳು ಹಾಗೂ ವಿದ್ಯುತ್‌ಚಾಲಿತ ಕಾರುಗಳಲ್ಲಿ ಹೆಚ್ಚಾಗಿ ಚಿಪ್‌ ಗಳನ್ನು ಬಳಸಲಾಗುತ್ತಿದೆ. ಈ ಎರಡೂ ಉತ್ಪನ್ನಗಳಿಗೆ ಇತ್ತೀಚಿನ ವರ್ಷಗಳಲ್ಲಿ ವಿಶ್ವಾದ್ಯಂತ ಭಾರೀ ಬೇಡಿಕೆಯಿದೆ. 2022ರ 2ನೇ ತ್ತೈಮಾಸಿಕದಲ್ಲಿ 152.5 ಶತಕೋಟಿ ಡಾಲರ್‌ ಮೊತ್ತದ ಸೆಮಿಕಂಡಕ್ಟರ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಶೇ.13.3ರಷ್ಟು ಏರಿಕೆ ಕಂಡಂತಾಗಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಭಾರತವನ್ನು ಚಿಪ್‌ ಉತ್ಪಾದನಾ ಹಬ್‌ ಆಗಿ ಪರಿವರ್ತಿಸುವುದು ಕೇಂದ್ರ ಸರ್ಕಾರದ ಉದ್ದೇಶ.

ಅನುಕೂಲಗಳೇನು?
– 5ಜಿ, ಇವಿ, ಕೃತಕ ಬುದ್ಧಿಮತ್ತೆಗೆ ಅಗತ್ಯವಾದ ಚಿಪ್‌ ಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಬಹುದು
– ಅತಿ ವೇಗದಲ್ಲಿ ಬೆಳೆಯುತ್ತಿರುವ ಎಲೆಕ್ಟ್ರಾನಿಕ್ಸ್‌ ಉತ್ಪಾದನೆಗೆ ಉತ್ತೇಜನ
– ಜಾಗತಿಕ ಸೆಮಿಕಂಡಕ್ಟರ್‌ ಉತ್ಪಾದನಾ ಹಬ್‌ ಆಗಿ ಹೊರಹೊಮ್ಮಬಹುದು
– ದೇಶೀಯವಾಗಿ ಸಾವಿರಾರು ಉದ್ಯೋಗಗಳು ಸೃಷ್ಟಿ
– ಚಿಪ್‌ ಗಳಿಗಾಗಿ ತೈವಾನ್‌, ಚೀನಾ, ದ.ಕೊರಿಯಾವನ್ನು ಅವಲಂಬಿಸುವ ಅಗತ್ಯ ಇರುವುದಿಲ್ಲ

 

 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.