ತಂತ್ರಜ್ಞಾನ ಅಳವಡಿಕೆಯಲ್ಲಿ ನಾವು ದ್ವಿತೀಯ: ಪ್ರಧಾನಿ ಮೋದಿ
ನಗದು ರಹಿತ ಪಾವತಿಯ ವ್ಯವಸ್ಥೆ ಕ್ಷೇತ್ರದ ಬೆಳವಣಿಗೆಯ ಬಗ್ಗೆ ಮೆಚ್ಚುಗೆ
Team Udayavani, Dec 3, 2021, 9:00 PM IST
ನವದೆಹಲಿ: “ಇದೇ ಮೊದಲ ಬಾರಿಗೆ, ಮೊಬೈಲ್ ಆಧಾರಿತ ಹಣ ಪಾವತಿಯ ಪ್ರಮಾಣ, ಎಟಿಎಂನಲ್ಲಿ ಹಣ ವಿತ್ಡ್ರಾ ಮಾಡುವ ಪ್ರಮಾಣವನ್ನು ಮೀರಿಸಿದೆ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ಭಾರತ, ವಿಶ್ವದಲ್ಲೇ ಎರಡನೇ ರಾಷ್ಟ್ರವಾಗಿ ಹೊರಹೊಮ್ಮಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಆರ್ಥಿಕ ವಲಯದಲ್ಲಿ ತಂತ್ರಜ್ಞಾನದ ಅಳವಡಿಕೆ ಹಾಗೂ ಬೆಳವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ “ಫಿನ್ಟೆಕ್’ ಕ್ಷೇತ್ರದ ಸಲಹಾ ಮಂಡಳಿಯ ರೂಪದಲ್ಲಿ ಹೊಸದಾಗಿ ರಚನೆಯಾಗಿರುವ “ಇನ್ಫಿನಿಟಿ ಫೋರಂ’ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಶುಕ್ರವಾರ ಲೋಕಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.
“ನಮ್ಮ ಸರ್ಕಾರ ಜಾರಿಗೊಳಿಸಿದ ನಗದು ರಹಿತ ಪಾವತಿಯ ವ್ಯವಸ್ಥೆಯು ಇಂದು ಗಮನಾರ್ಹವಾಗಿ ಬೆಳೆದು ನಿಂತಿದೆ. ಯಾವುದೇ ಭೌತಿಕ ಶಾಖೆಯಿಲ್ಲದ ಪೂರ್ಣಪ್ರಮಾಣದ ಡಿಜಿಟಲ್ ಬ್ಯಾಂಕುಗಳು ಇಂದು ಭಾರತದಲ್ಲಿ ಅಸ್ತಿತ್ವಕ್ಕೆ ಬಂದಿವೆ. ಮುಂದಿನ 10 ವರ್ಷಗಳಲ್ಲಿ ಇದೊಂದು ಸಾಮಾನ್ಯ ಸಂಗತಿಯಾಗಬಹುದು” ಎಂದು ಅವರು ಆಶಿಸಿದರು.
ಇದನ್ನೂ ಓದಿ:ಸಂಸದ ತೇಜಸ್ವಿ ಸೂರ್ಯ ಜನತೆಯ ದಾರಿ ತಪ್ಪಿಸುತ್ತಿದ್ದಾರೆ : ಡಾ.ಶಂಕರ್ ಗುಹಾ
ಅಲ್ಲದೆ, “ಈ ಕ್ಷೇತ್ರದಲ್ಲಿ ಉದಯಿಸುವ ಪ್ರತಿಯೊಂದು ಸ್ಟಾರ್ಟಪ್ಗ್ಳನ್ನು ದೇಶದ ಪ್ರತಿಯೊಬ್ಬ ನಾಗರಿಕರ ಆರ್ಥಿಕ ಸಬಲೀಕರಣಕ್ಕಾಗಿ ಬಳಕೆಯಾಗುವಂತೆ ರೂಪಿಸಬೇಕಾದ ಅವಶ್ಯಕತೆಯಿದೆ” ಎಂದು ಅಭಿಪ್ರಾಯಪಟ್ಟರು.
ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಇನ್ಫಿನಿಟಿ ಫೋರಂ, ಸರ್ಕಾರದ ನೀತಿ ನಿರೂಪಣೆ-ಫಿನ್ಟೆಕ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳು- ಈ ಕ್ಷೇತ್ರದ ಸಹಭಾಗಿ ಸಂಸ್ಥೆಗಳ ನಡುವೆ ಉತ್ತಮ ಅನುಸಂಧಾನ ಸಾಧಿಸುವ ಕೆಲಸ ಮಾಡಲಿದೆ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…