ಫೈಜರ್,ಜೆ&ಜೆ,ಮಾಡೆರ್ನಾ ಸಂಸ್ಥೆಗಳೊಂದಿಗೆ ಭಾರತ ಸರ್ಕಾರ ಮಾತುಕತೆ ನಡೆಸುತ್ತಿದೆ: ಶ್ರಿಂಗ್ಲಾ
ಫೈಜರ್, ಜೆ&ಜೆ, ಮಾಡೆರ್ನಾ ಸಂಸ್ಥೆಗಳೊಂದಿಗೆ ಲಸಿಕೆಗಳ ಸಂಭಾವ್ಯ ಸ್ಥಳಿಯ ಉತ್ಪಾದನೆಯ ಬಗ್ಗೆ ಭಾರತ ಸರ್ಕಾರ ಮಾತುಕತೆ
Team Udayavani, Jun 3, 2021, 7:35 PM IST
ನವ ದೆಹಲಿ : ಕೋವಿಡ್ ಲಸಿಕೆಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಉದ್ದೇಶದಿಂದ ಭಾರತ ಜಾಗತಿಕ ಲಸಿಕೆ ಉತ್ಪಾದಕರಾದ ಫೈಜರ್, ಜಾನ್ಸನ್ ಆ್ಯಂಡ್ ಜಾನ್ಸನ್ ಮತ್ತು ಮಾಡೆರ್ನಾ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ ವಿ ಶ್ರಿಂಗ್ಲಾ ಹೇಳಿದ್ದಾರೆ.
ಭಾರತದಲ್ಲಿ ಇತರೆ ದೇಶಗಳಿಗಿಂತ ಜನ ಸಂಖ್ಯೆ ಜಾಸ್ತಿಇದ್ದು, ಲಸಿಕೆಯ ಕೊರತೆಯೂ ಇದೆ. ಹಾಗಾಗಿ ಭಾರತೀಯರೆಲ್ಲರಿಗೂ ಲಸಿಕೆಗಳನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಾತುಕತೆಗೆ ಮುಂದಾಗಿದೆ.
ಇದನ್ನೂ ಓದಿ : ರೈತರಿಗೆ ವಿತರಿಸಲು ಸಂಗ್ರಹಿಸಿದ್ದ ಬಿತ್ತನೆ ಬೀಜದಲ್ಲಿ ಕಲಬೆರಕೆ: ಶಾಸಕ ಪರಣ್ಣ ಗರಂ
ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೇಶಿಕ ಆರೋಗ್ಯ ಪಾಲುದಾರರ ವೇದಿಕೆಯಲ್ಲಿ ಕೋವಿಡ್ 19 ಕುರಿತು ಮಾತನಾಡುತ್ತಾ ಶ್ರಿಂಗ್ಲಾ, ಸ್ಥಳೀಯವಾಗಿ ಲಸಿಕೆಗಳನ್ನು ತಯಾರಿಸುವ ಮತ್ತು ಅದನ್ನು ಜನರಿಗೆ ಪೂರೈಸುವ ಉದ್ದೇಶದಿಂದ ಭಾರತದ ಜಾಗತಿಕ ಲಸಿಕೆಗಳ ಉತ್ಪಾದಕರುಗಳಾದ ಫೈಜರ್, ಜಾನ್ಸನ್ ಆ್ಯಂಡ್ ಜಾನ್ಸನ್ ಮತ್ತು ಮಾಡೆರ್ನಾ ಸಂಸ್ಥೆಗಳೊಂದಿಗೆ ಉನ್ನತ ಮಟ್ಟದ ಮಾತುಕತೆಗಳನ್ನು ಮಾಡುತ್ತಿದೆ ಎಂದಿದ್ದಾರೆ.
ಸದ್ಯ, ಭಾರತದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೋವಿಶೀಲ್ಡ್, ಭಾರತ್ ಬಯೋಟೆಕ್ ಉತ್ಪಾದಿಸುತ್ತಿರುವ ಕೊವಾಕ್ಸಿನ್ ಮತ್ತು ರಷ್ಯಾದ ಸ್ಪುಟ್ನಿಕ್ ವಿ ಲಸಿಕೆಗಳನ್ನು ನೀಡಲಾಗುತ್ತಿದೆ. ಕಳೆದ ತಿಂಗಳು ರಷ್ಯಾದಿಂದ ಮೊದಲ ಹಂತದ ಸ್ಪುಟ್ನಿಕ್ ವಿ ಲಸಿಕೆಗಳನ್ನು ಸ್ವೀಕರಿಸಿಕೊಂಡಿದ್ದು, ಈ ಲಸಿಕೆಯನ್ನು ಭಾರತೀಯ ಕಂಪನಿಗಳು ಸಹ ಉತ್ಪಾದಿಸಲಿವೆ. ಫೈಜರ್, ಜಾನ್ಸನ್ ಆ್ಯಂಡ್ ಜಾನ್ಸನ್ ಮತ್ತು ಮಾಡರ್ನಾ ಲಸಿಕೆಗಳ ಸಂಭಾವ್ಯ ಸ್ಥಳಿಯ ಉತ್ಪಾದನೆಯ ಬಗ್ಗೆ ಭಾರತ ಸರ್ಕಾರ ವಿಚಾರ ಮಾಡುತ್ತಿದೆ ಎಂದಿದ್ದಾರೆ.
ಇನ್ನು, ಭಾರತ್ ಬಯೋಟೆಕ್ ತಯಾರಿಸಿದ ಕೊವಾಕ್ಸಿನ್ ಲಸಿಕೆಯನ್ನು ಜಾಗತಿಕವಾಗಿ ಬಳಸಲು ಅನುಮೋದನೆಗಾಗಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)ನಿರ್ಧಾರವನ್ನು ಭಾರತ ಸರ್ಕಾರ ಎದುರುಗಾಣುತ್ತಿದೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಏಪ್ರಿಲ್ 19 ರಂದು ಡಬ್ಲ್ಯುಎಚ್ಒ ಫಾರ್ ಎಮರ್ಜೆನ್ಸಿ ಯೂಸ್ ಲಿಸ್ಟಿಂಗ್ (ಇಯುಎಲ್) ಗೆ ಅರ್ಜಿಯನ್ನು ಸಲ್ಲಿಸಿದ್ದು, ಜೂನ್ ನಲ್ಲಿ ಪೂರ್ವ ಸಲ್ಲಿಕೆ ಸಭೆ ನಡೆಯಲಿದೆ.
ಇದನ್ನೂ ಓದಿ : ಕೋವಿಡ್ ನಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರಿಗೆ 2 ಲಕ್ಷ ರೂ. ಸಹಾಯಧನ ಘೋಷಿಸಿದ ಸರ್ಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ