ಉತ್ತರ ಪ್ರದೇಶ: ಅವಳಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ


Team Udayavani, Aug 24, 2022, 6:45 AM IST

ಉತ್ತರ ಪ್ರದೇಶ: ಅವಳಿ ಕಟ್ಟಡ ನೆಲಸಮಕ್ಕೆ ಕ್ಷಣಗಣನೆ

ರಿಯಲ್‌ ಎಸ್ಟೇಟ್‌ ಕಂಪನಿ ಸೂಪರ್‌ಟೆಕ್‌ ನೋಯ್ಡಾದಲ್ಲಿ ನಿರ್ಮಿಸಿದ ಅವಳಿ ವಸತಿ ಸಮುಚ್ಚಯವನ್ನು ಭಾನುವಾರ (ಆ.28) ಕೆಡವಿ ಹಾಕಲಾಗುತ್ತದೆ. ಸುಪ್ರೀಂಕೋರ್ಟ್‌ನ ಆದೇಶದ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕೆ ಬೇಕಾಗಿರುವ ಸಿದ್ಧತೆಗಳೂ ಭರದಿಂದ ಸಾಗಿವೆ. ಅಪೆಕ್ಸ್‌ ಮತ್ತು ಸಿಯೇನ್‌ ಎಂಬ ಹೆಸರಿನ ವಸತಿ ಸಮುತ್ಛಯಗಳು ನವದೆಹಲಿಯಲ್ಲಿ ಇರುವ ಕುತುಬ್‌ ಮಿನಾರ್‌ಗಿಂತ ಎತ್ತರವಾಗಿವೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಎತ್ತರದ ಕಟ್ಟಡಗಳನ್ನು ಕೆಡವಿ ಹಾಕಲಾಗುತ್ತದೆ.

ಪ್ರಕರಣದ ಹಿನ್ನೋಟ
2014ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ಸೂಪರ್‌ಟೆಕ್‌ ಕಂಪನಿ ನಿರ್ಮಿಸಿದ ಅವಳಿ ವಸತಿ ಸಮುಚ್ಚಯಗಳನ್ನು ಕೆಡವಿ ಹಾಕುವ ಬಗ್ಗೆ ಆದೇಶ ನೀಡಿತ್ತು. ಪರಿಸರ ಉದ್ದೇಶಕ್ಕಾಗಿ ಮೀಸಲಾಗಿ ಇರಿಸಲಾಗಿರುವ ಸ್ಥಳದಲ್ಲಿ ಅದನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರೂ, ಕಳೆದ ವರ್ಷದ ಆ.31ರಂದು ಮೂರು ತಿಂಗಳ ಒಳಗಾಗಿ ಕಟ್ಟಡ ಕೆಡವಿ ಹಾಕುವ ಬಗ್ಗೆ ಆದೇಶ ಪ್ರಕಟಗೊಂಡಿತ್ತು. ವಿಳಂಬವಾದದ್ದಕ್ಕೆ ನೋಯ್ಡಾ ನಗರಾಭಿವೃದ್ಧಿ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು ಮತ್ತು ಆ.28ರ ದಿನ ನಿಗದಿ ಮಾಡಿತ್ತು.

ಅವಳಿ ಕಟ್ಟಡಗಳ ಬಗ್ಗೆ
103 ಮೀಟರ್‌- ಕಟ್ಟಡದ ಎತ್ತರ
957- ನಿರ್ಮಾಣಗೊಂಡಿರುವ ಫ್ಲಾಟ್‌ಗಳು
21- ಮಳಿಗೆಗಳು
32- ಅಪೆಕ್ಸ್‌ನಲ್ಲಿರುವ ಮಹಡಿಗಳು
29- ಸಿಯೇನ್‌ನಲ್ಲಿರುವ ಮಹಡಿಗಳು
7,50,000 ಚದರ ಅಡಿ- 2 ಕಟ್ಟಡಗಳು ಇರುವ ವ್ಯಾಪ್ತಿ
3,700 ಕೆಜಿ- ಸ್ಫೋಟಿಸಲು ಬೇಕಾಗುವ ಸ್ಫೋಟಕಗಳ ಪ್ರಮಾಣ
15 ದಿನ- ಅವುಗಳನ್ನು ಅಳವಡಿಸಲು ಬೇಕಾಗಿದ್ದ ದಿನಗಳು
10 ಸೆಕೆಂಡುಗಳು- ಕೆಡವಿ ಬೀಳಲು ಬೇಕಾಗಿರುವ ಅವಧಿ
ಆ.28, 2022- ಸ್ಫೋಟಿಸುವ ದಿನ
ಮಧ್ಯಾಹ್ನ 2.30 – ಸಮಯ

ಯಾರ ಉಸ್ತುವಾರಿ?
ಮುಂಬೈನ ಈಡಿಫ‌ಸ್‌ ಎಂಜಿನಿಯರಿಂಗ್‌ ಸಂಸ್ಥೆ ಕಟ್ಟಡವನ್ನು ಕೆಡವಿ ಹಾಕುವ ಹೊಣೆ ಹೊತ್ತುಕೊಂಡಿದೆ. ದಕ್ಷಿಣ ಆಫ್ರಿಕಾದ ಜೆಟ್‌ ಡೆಮಾಲಿಷನ್‌ ನೆರವು ಕೊಡಲಿದೆ. 5 ಸಾವಿರಕ್ಕೂ ಅಧಿಕ ಮಂದಿಯನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಬೇಕು.

ಕೆಡವಿ ಹಾಕಿದ ಬಳಿಕ
30,000 ಟನ್‌- ಸಿಗಬಹುದಾದ ಅವಶೇಷಗಳ ಪ್ರಮಾಣ
12 ಮೀಟರ್‌ ಎತ್ತರ- ಅವಶೇಷಗಳಿಂದ ಉಂಟಾಗುವ ರಾಶಿ
ಅವುಗಳನ್ನು ಏನು ಮಾಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ

ಹಿಂದಿನ ಪ್ರಕರಣ
ಕೊಚ್ಚಿಯ ಮರಾಡುವಿನಲ್ಲಿ ಕರಾವಳಿ ನಿಯಂತ್ರಣ ವಲಯ ನಿಯಮ ಉಲ್ಲಂ ಸಿದ್ದಕ್ಕೆ 2019ರಲ್ಲಿ ಅಪಾರ್ಟ್‌ಮೆಂಟ್‌ ಅನ್ನು ಸ್ಫೋಟಿಸಿ ಕೆಡವಲಾಗಿತ್ತು.
65 ಮೀಟರ್‌- ಕೆಡವಲಾಗಿದ್ದ ಕಟ್ಟಡದ ಎತ್ತರ
122- ಅದರಲ್ಲಿ ಇದ್ದ ಫ್ಲಾಟ್‌ಗಳು
1,800 ಕೆಜಿ- ಬಳಕೆ ಮಾಡಲಾಗಿದ್ದ ಸ್ಫೋಟಕ ಪ್ರಮಾಣ
07 ದಿನ- ಸ್ಫೋಟಕಗಳನ್ನು ಇರಿಸಲುಬೇಕಾಗಿದ್ದ ದಿನ

 

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.