ಇನ್ನು ನಮ್ಮ ಸೈನಿಕರಿಗೆ, ಪೊಲೀಸರಿಗೆ ಸಿಗಲಿದೆ ಸ್ವದೇಶಿ ಬುಲೆಟ್ ಪ್ರೂಫ್ ಜಾಕೆಟ್


Team Udayavani, Oct 5, 2019, 7:10 AM IST

Bullet-Froof-Jacket-730

ನವದೆಹಲಿ: ಇನ್ನು ಮುಂದೆ ನಮ್ಮ ಸಶಸ್ತ್ರಪಡೆಯ ಯೋಧರಿಗೆ, ಅರೆ ಸೈನಿಕ ಪಡೆಯ ಸೈನಿಕರಿಗೆ ಮತ್ತು ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ದೇಶೀಯವಾಗಿ ಅಭಿವೃದ್ಧಿಗೊಳಿಸಲಾದ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಸಮನಾದ ಬುಲೆಟ್ ಪ್ರೂಫ್ ಜಾಕೆಟ್ ಗಳು ಸಿಗಲಿವೆ. ಈ ಜಾಕೆಟ್ ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿಯಲ್ಲಿ ಭಾರತದಲ್ಲೇ ತಯಾರಿಸಲಾಗಿದೆ.

ಇಂಡಿಯನ್ ಸ್ಟ್ಯಾಂಡರ್ಡ್ಸ್ ಮಂಡಳಿ (ಬಿ.ಐ.ಎಸ್.) 2018ರಲ್ಲಿ ಸಿದ್ಧಪಡಿಸಿ ಸೂಚಿಸಿದ್ದ ಮಾನದಂಡಗಳಿಗೆ ಅನುಗುಣವಾಗಿ ಈ ಜಾಕೆಟ್ ಗಳನ್ನು ತಯಾರಿಸಲಾಗಿದೆ. ನೀತಿ ಆಯೋಗ ಮತ್ತು ಗೃಹ ವ್ಯವಹಾರಗಳ ಸಚಿವಾಲಯದ ನಿರ್ದೇಶನಗಳಿಗೆ ಅನುಸಾರವಾಗಿ ಬಿ.ಐ.ಎಸ್. ಈ ಮಾನದಂಡಗಳನ್ನು ಸಿದ್ಧಗೊಳಿಸಿತ್ತು.

ಈ ಜಾಕೆಟ್ ಗಳು ಇದೀಗ ಬಳಕೆಗೆ ಲಭ್ಯವಾಗುವ ಮೂಲಕ ಭಾರತೀಯ ಸಶಸ್ತ್ರ ಪಡೆಗಳು, ಅರೆ ಸೈನಿಕ ಪಡೆಗಳು ಮತ್ತು ರಾಜ್ಯಗಳ ಪೊಲೀಸ್ ಪಡೆಗಳ ದೀರ್ಘಕಾಲೀನ ಬೇಡಿಕೆ ಈಡೇರಿದಂತಾಗಿದೆ. ಇಷ್ಟು ಮಾತ್ರವಲ್ಲದೇ ನಿರ್ಧಿಷ್ಟ ಮಾನದಂಡಗಳನ್ನು ಅನುಸರಿಸಿ ಸ್ವದೇಶಿಯಾಗಿ ತಯಾರಿಸಿದ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತಯಾರಿಸುವ ಮೂಲಕ ಭಾರತವು ಬುಲೆಟ್ ಪ್ರೂಫ್ ಜಾಕೆಟ್ ಗಳ ತಯಾರಿಯಲ್ಲಿ ತಮ್ಮದೇ ಆದ ಗುಣಮಟ್ಟ ಮಾದರಿಗಳನ್ನು ಹೊಂದಿರುವ ಅಮೆರಿಕಾ, ಇಂಗ್ಲಂಡ್ ಮತ್ತು ಜರ್ಮನಿಯಂತಹ ರಾಷ್ಟ್ರಗಳ ಸಾಲಿಗೆ ಸೇರ್ಪಡೆಗೊಂಡ ಹೆಗ್ಗಳಿಕೆಗೂ ಪಾತ್ರವಾಗಲಿದೆ.

ಈ ಜಾಕೆಟ್ ಗಳು ಅಪಾಯದ ತೀವ್ರತೆಯನ್ನು ಅವಲಂಬಿಸಿ 5 ರಿಂದ 10 ಕಿಲೋ ಗ್ರಾಂ ತೂಕದಲ್ಲಿ ತಯಾರಾಗಿದೆ ಮತ್ತಿದು ವಿಶ್ವದಲ್ಲೇ ಉತ್ತಮ ಗುಣಮಟ್ಟವನ್ನೂ ಸಹ ಹೊಂದಿದೆ. ಇನ್ನು ಈ ಜಾಕೆಟ್ ಗಳ ಬೆಲೆ 70,000 ದಿಂದ 80,000 ರೂಪಾಯಿಗಳವರೆಗೆ ಇರಲಿದ್ದು, ಇದು ಈ ಹಿಂದೆ ತರಿಸಿಕೊಳ್ಳುತ್ತಿದ್ದ ಜಾಕೆಟ್ ಗಳ ಬೆಲೆಗಳಿಗಿಂತ ಅಗ್ಗವಾಗಲಿದೆ.

ನಮ್ಮಲ್ಲೇ ತಯಾರಿಸಲಾಗುವ ಈ ಜಾಕೆಟ್ ಗಳನ್ನು ಈಗಾಗಲೇ ಇತರೇ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯನ್ನೂ ಸಹ ಕೇಂದ್ರ ಸರಕಾರ ಹೊಂದಿದೆ.

ಮಾಜೀ ಸೇನಾಧಿಕಾರಿಯೊಬ್ಬರು ಈ ನೂತನ ಸ್ವದೇಶಿ ಬುಲೆಟ್ ಪ್ರೂಫ್ ಜಾಕೆಟ್ ನ ಪ್ರಾತಕ್ಷಿಕೆಯನ್ನು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಇದರ ಲಕ್ಷಣಗಳನ್ನು ವಿವರಿಸಿದರು.

– ಈ ಜಾಕೆಟ್ ಡೈನಾಮಿಕ್ ತೂಕ ವಿತರಣಾ ವ್ಯವಸ್ಥೆಯನ್ನು ಹೊಂದಿರುವುದರಿಂದ ಈ ಜಾಕೆಟ್ ತೊಟ್ಟುಕೊಳ್ಳುವವರಿಗೆ ಇದರ ನಿಜವಾದ ತೂಕದ ಅರ್ಧ ಭಾರ ಮಾತ್ರ ಅನುಭವಕ್ಕೆ ಬರುತ್ತದೆ.

– ಇನ್ನು ಈ ಜಾಕೆಟ್ ತೊಟ್ಟುಕೊಳ್ಳಲು ಹಾಗೂ ತೆಗೆಯಲು ಸುಲಭ ಸಾಧ್ಯ ರೂಪದಲ್ಲಿದ್ದು ಇದರಿಂದ ಈ ಜಾಕೆಟ್ ಬಳಸುವವರಿಗೆ ಇದನ್ನು ಬೇಕೆಂದಾಗ ಥಟ್ಟನೆ ತೊಟ್ಟುಕೊಳ್ಳಲು ಹಾಗೂ ಬೇಡವೆಂದಾಗ ಸುಲಭವಾಗಿ ತೆಗೆಯಲು ಅನುಕೂಲವಾಗುತ್ತದೆ.

– ಬುಲೆಟ್ ಗಳಿಂದ 360 ಡಿಗ್ರಿ ಕೋನದಲ್ಲಿ ರಕ್ಷಣೆ ಒದಗಿಸುವ ವ್ಯವಸ್ಥೆಯನ್ನು ಇದು ಹೊಂದಿರುವುದರಿಂದ ಸೈನಿಕರಿಗೆ ತಮ್ಮ ಆಯುಧಗಳನ್ನು ಸುಲಭವಾಗಿ ಬಳಸಲು ಈ ಜಾಕೆಟ್ ಸಹಕಾರಿಯಾಗಿದೆ.

ಸಿ.ಆರ್.ಪಿ.ಎಫ್., ಬಿ.ಎಸ್.ಎಫ್., ಎಸ್.ಎಸ್.ಬಿ., ಸಿ.ಐ.ಎಸ್.ಎಫ್., ಎನ್.ಎಸ್.ಜಿ. ಸೇರಿದಂತೆ ಕೇಂದ್ರೀಯ ಸಶಸ್ತ್ರ ಪಡೆಗಳು ಈಗಾಗಲೇ ಈ ಸ್ವದೇಶಿ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಖರೀದಿಸುವ ಪ್ರಕ್ರಿಯೆಗೆ ಚಾಲನೆ ನೀಡಿವೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.