ಅಂಡಮಾನ್‌ನ ಆಳ ಸಮುದ್ರದಲ್ಲಿ ತೈಲಾನ್ವೇಷಣೆಗೆ ಸಿದ್ಧತೆ

ಒಎನ್‌ಜಿಸಿ ಮೂಲಕ ತೈಲ ಬಾವಿ ಕೊರೆಯಲು ನಿರ್ಧಾರ: ಕೇಂದ್ರ ಸರ್ಕಾರದಿಂದಲೇ ಕಂಪನಿಗೆ ಹಣಕಾಸು ನೆರವು

Team Udayavani, Jun 30, 2022, 7:00 AM IST

thumb 6 oil

ನವದೆಹಲಿ: ತೈಲ ದರ ಏರಿಕೆಯಿಂದ ಜನರು ಕಂಗಾಲಾಗಿರುವಂತೆಯೇ ತೈಲ ಮತ್ತು ಅನಿಲದ ದೇಶೀಯ ಉತ್ಪಾದನೆ ಮತ್ತು ಆಮದು ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸ ಯೋಜನೆಯೊಂದನ್ನು ಹಾಕಿಕೊಂಡಿದೆ.

ಅದೇನೆಂದರೆ, ಅಂಡಮಾನ್‌ನ ಆಳ ಸಮುದ್ರದ ಜಲಾನಯನ ಪ್ರದೇಶದಲ್ಲಿ ತೈಲ ಮತ್ತು ಅನಿಲ ಅನ್ವೇಷಣೆ!

ಹೌದು, ಆಳ ಸಮುದ್ರದಲ್ಲಿ ತೈಲಾನ್ವೇಷಣೆಗಾಗಿ ಒಎನ್‌ಜಿಸಿ ನೇತೃತ್ವದ ಡ್ರಿಲ್ಲಿಂಗ್‌ ಪ್ರಕ್ರಿಯೆಗೆ ಹಣಕಾಸು ನೆರವು ಒದಗಿಸುವ ಚಿಂತನೆಯನ್ನೂ ಸರ್ಕಾರ ನಡೆಸಿದೆ.

3-4 ಬಾವಿ ಕೊರೆಯಲು ಸಿದ್ಧತೆ:
ಈ ಮಳೆಗಾಲ ಮುಗಿಯುತ್ತಿದ್ದಂತೆ ಒಎನ್‌ಜಿಸಿ ಅಂಡಮಾನ್‌ನಲ್ಲಿ ಡ್ರಿಲ್ಲಿಂಗ್‌ ಕೆಲಸ ಆರಂಭಿಸಲಿದೆ. ಈಗಾಗಲೇ ಈ ಪ್ರಾಜೆಕ್ಟ್‌ನಲ್ಲಿ ಭಾಗಿಯಾಗುವ ಕುರಿತು ಎಕ್ಸಾನ್‌ಮೊಬಿಲ್‌ ಮತ್ತು ಶೆಲ್‌ ಕಂಪನಿಗಳೊಂದಿಗೆ ಮಾತುಕತೆಯನ್ನೂ ನಡೆಸುತ್ತಿದೆ. ಕೇಂದ್ರ ಸರ್ಕಾರದ ವಿಶೇಷ ಹಣಕಾಸು ನೆರವಿನಿಂದ ಅಂಡಮಾನ್‌ನ ಆಳಸಮುದ್ರದಲ್ಲಿ 3-4 ತೈಲ ಬಾವಿಗಳನ್ನು ಕೊರೆಯುವ ಗುರಿಯನ್ನು ಒಎನ್‌ಜಿಸಿ ಹಾಕಿಕೊಂಡಿದೆ. ಪ್ರತಿ ಬಾವಿ ಕೊರೆಯಲು ಸುಮಾರು 350-400 ಕೋಟಿ ರೂ. ವೆಚ್ಚವಾಗಲಿದೆ ಎಂದು ಮೂಲಗಳು ತಿಳಿಸಿವೆ.

“ರಾಷ್ಟ್ರೀಯ ದ್ವೀಪ ಅನ್ವೇಷಣೆ ಯೋಜನೆ’ಯಡಿ ಸರ್ಕಾರವು “ನೋ-ಗೋ’ ವಲಯ(ನಿಷೇಧಿತ ಪ್ರದೇಶ) ಎಂದು ವರ್ಗೀಕರಿಸಲ್ಪಟ್ಟ ಪ್ರದೇಶದಲ್ಲಿ 22,500 ಕಿ.ಮೀ.ನಷ್ಟು 2ಡಿ ಭೂಕಂಪನ ದತ್ತಾಂಶವನ್ನು ಸಂಗ್ರಹಿಸಿದೆ.

ವಿನಾಯ್ತಿ ಘೋಷಣೆ:
ಈ ಯೋಜನೆಗೆ ಅಗತ್ಯವಿರುವ ರಕ್ಷಣೆ ಮತ್ತು ಬಾಹ್ಯಾಕಾಶ ಇಲಾಖೆಯ ಅನುಮತಿಗೆ ಸರ್ಕಾರವು ವಿನಾಯ್ತಿ ನೀಡಿದೆ. ತೈಲ ದರದ ಗಣನೀಯ ಏರಿಕೆಯೇ ಕೇಂದ್ರ ಸರ್ಕಾರವು ಈ ಯೋಜನೆಗೆ ತುರ್ತಾಗಿ ಕೈಹಾಕಲು ಕಾರಣ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.