ವಿಪಕ್ಷ ಒಕ್ಕೂಟಕ್ಕೆ INDIA ಹೆಸರು, ಪ್ರತಿಕ್ರಿಯೆ ಸಲ್ಲಿಕೆಗೆ ಕಡೇ ಅವಕಾಶ: ದೆಹಲಿ ಹೈಕೋರ್ಟ್
ಏ.10ರೊಳಗೆ ಅರ್ಜಿ ಇತ್ಯರ್ಥಗೊಳಿಸುವ ಭರವಸೆ ಕೊಟ್ಟ ನ್ಯಾಯಪೀಠ
Team Udayavani, Apr 2, 2024, 8:44 PM IST
ನವದೆಹಲಿ: ಪ್ರತಿಪಕ್ಷಗಳ ಒಕ್ಕೂಟಕ್ಕೆ “ಇಂಡಿಯಾ’ ಹೆಸರಿಟ್ಟಿರುವುದನ್ನು ಆಕ್ಷೇಪಿಸಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಂಬಂಧಿಸಿದಂತೆ ಪ್ರತಿಕ್ರಿಯೆ ದಾಖಲಿಸಲು ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಕೊನೆಯ ಅವಕಾಶ ನೀಡಿದೆ.
ಲೋಕಸಭೆ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ಕೋರಿ ಅರ್ಜಿದಾರರು ಮನವಿ ಸಲ್ಲಿಸಿದ್ದರು. ನ್ಯಾ.ಮನ್ಮೋಹನ್ ಹಾಗೂ ನ್ಯಾ. ಮನ್ಶೀತ್ ಪ್ರೀತಂ ಸಿಂಗ್ ಅರೋರಾ ಅವರ ನ್ಯಾಯಪೀಠವು ಮನವಿಯನ್ನು ತಿರಸ್ಕರಿಸಿದೆ.
ತುರ್ತಾಗಿ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿ, ಕೇಂದ್ರ ಮತ್ತು ವಿಪಕ್ಷಗಳಿಗೆ ಪ್ರತಿಕ್ರಿಯೆ ದಾಖಲಿಸಲು ಕಡೆಯ ಅವಕಾಶ ನೀಡಿದೆ. ಇದರ ಹೊರತಾಗಿಯೂ ಏ.10ರ ಒಳಗೆ ಅರ್ಜಿ ವಿಚಾರಣೆ ನಡೆಸಿ ವಿಲೇವಾರಿ ಮಾಡಲು ಪ್ರಯತ್ನಿಸುವುದಾಗಿಯೂ ಹೇಳಿದೆ. ಇತ್ತೀಚೆಗಷ್ಟೇ ಭಾರತೀಯ ಚುನಾವಣೆ ಆಯೋಗ ಕೂಡ ಕೋರ್ಟ್ಗೆ ತನ್ನ ಪ್ರತಿಕ್ರಿಯೆ ದಾಖಲಿಸಿ ವಿಪಕ್ಷಗಳಿಗೆ ಈ ಹೆಸರು ಬಳಸಿ ಅಥವಾ ಬೇಡ ಎಂದು ತಾನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!