ಹಿಂಜರಿತ: ಕ್ಷೇತ್ರವಾರು ಪರಿಹಾರ
Team Udayavani, Oct 11, 2019, 5:01 AM IST
ಮುಂಬಯಿ: ಆರ್ಥಿಕ ಕ್ಷೇತ್ರದಲ್ಲಿನ ಹಿಂಜರಿತ ಎದುರಿಸುವ ನಿಟ್ಟಿನಲ್ಲಿ ಸರಕಾರ ಕ್ಷೇತ್ರವಾರು ಪರಿಹಾರಗಳನ್ನು ನೀಡಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂಬಯಿನಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಸುಧಾರಿಸಲು ಸರಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.
ರಫ್ತು ಕ್ಷೇತ್ರದಲ್ಲಿ ಸುಧಾರಣೆ, ಸುಲಭದಲ್ಲಿ ಸಾಲ, ಬ್ಯಾಂಕ್ಗಳಿಗೆ ಮರು ಬಂಡವಾಳ, ಹೆಚ್ಚಿನ ಪ್ರಮಾಣದಲ್ಲಿ ಹಣದ ಹರಿವು ಸೇರಿದಂತೆ ಕೆಲ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಕ್ಷೇತ್ರವಾರು ಪರಿಹಾರಗಳನ್ನು ಸರಕಾರ ಪ್ರಕಟಿಸಲಿದೆ ಎಂದಿದ್ದಾರೆ.
ಆರ್ಬಿಐ ಜತೆ ಚರ್ಚೆ: ಪಂಜಾಬ್, ಮಹಾರಾಷ್ಟ್ರ ಸಹಕಾರ ಬ್ಯಾಂಕ್ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೆಚ್ಚಿನ ಮೊತ್ತ ವಿತ್ಡ್ರಾಗೆ ಅನುಮತಿ ನೀಡುವಂತೆ ಆರ್ಬಿಐ ಗವರ್ನರ್ ಜತೆ ಚರ್ಚಿಸುವುದಾಗಿ ಸಚಿವೆ ಹೇಳಿದ್ದಾರೆ. ಇದರ ಜತೆಗೆ ಇಂಥ ಘಟನೆ ತಡೆಯುವ ನಿಟ್ಟಿನಲ್ಲಿ ಕಾನೂನು ರೂಪಿಸುವ ಬಗ್ಗೆಯೂ ಮಾತನಾಡಿದ್ದಾರೆ. ಮುಂಬಯಿನಲ್ಲಿ ಸುದ್ದಿಗೋಷ್ಠಿ ನಡೆಸಲು ನಿರ್ಮಲಾ ಆಗಮಿಸುತ್ತಿದ್ದಂತೆಯೇ ಬ್ಯಾಂಕ್ ಗ್ರಾಹಕರ ಪ್ರತಿಭಟನೆ ಎದುರಿಸಬೇಕಾಯಿತು. ಅವರನ್ನು ಸಮಾಧಾನಪಡಿಸಿ ಕ್ರಮದ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ