ಭಾರತಕ್ಕೊಂದೇ ಇಂಟರ್‌ನೆಟ್‌


Team Udayavani, Feb 2, 2020, 4:06 AM IST

bharatakkonde

ಕೇಂದ್ರ ಸರ್ಕಾರ ಟೆಕ್‌ ವಲಯದತ್ತ, ಅದರಲ್ಲೂ ಡಿಜಿಟಲ್‌ ಟೆಕ್ನಾಲಜಿಯತ್ತ ಹೆಚ್ಚು ಗಮನ ಹರಿಸಿರುವುದು ಈ ಬಾರಿಯ ಬಜೆಟ್‌ನಿಂದ ವೇದ್ಯವಾಗುತ್ತಿದೆ. ಮೊದಲನೆಯದಾಗಿ, ಇಡೀ ಭಾರತವನ್ನು ಒಂದೇ ಆಪ್ಟಿಕಲ್‌ ಫೈಬರ್‌ ಜಾಲದೊಂದಿಗೆ ಬೆಸೆಯುವ ಮಹತ್ವಾಕಾಂಕ್ಷಿ “ಭಾರತ್‌ನೆಟ್‌’ನ ಎಫ್ಟಿಟಿಎಚ್‌ ಸಂಪರ್ಕವನ್ನು ಈ ವರ್ಷಾಂತ್ಯದೊಳಗೆ 1 ಲಕ್ಷ ಹೆಚ್ಚುವರಿ ಗ್ರಾಮಗಳಿಗೆ ವಿಸ್ತರಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಈ ಕಾಮನ್‌ ಆಪ್ಟಿಕಲ್‌ ಫೈಬರ್‌ ನೆಟ್ವರ್ಕ್‌ ಯೋಜನೆಯು ವಿಶ್ವದಲ್ಲೇ ಅತಿದೊಡ್ಡದಾಗಿದ್ದು, ಅಂಗನವಾಡಿಗಳು, ಆರೋಗ್ಯ ಕೇಂದ್ರಗಳು, ಸರ್ಕಾರಿ ಶಾಲೆಗಳಿಗೆಲ್ಲ ಡಿಜಿಟಲ್‌ ಸಂಪರ್ಕ ಕಲ್ಪಿಸುವಲ್ಲಿ ಈ ಯೋಜನೆ ಗಮನಾರ್ಹ ಯಶಸ್ಸು ಪಡೆಯುತ್ತಿದೆ.

ಡಾಟಾ ಸೆಂಟರ್‌ ಪಾರ್ಕ್‌ ನೀತಿ: ಖಾಸಗಿ ಸಂಸ್ಥೆಗಳು ಸ್ಥಾಪಿಸುವ ಡೇಟಾ ಸೆಂಟರ್‌ಗಳಿಗಾಗಿ ಶೀಘ್ರದಲ್ಲೇ ನೀತಿ ನಿರೂಪಿಸುವ ಘೋಷಣೆ ಮಾಡಿದೆ ಕೇಂದ್ರ ಸರ್ಕಾರ. ಗಮನಾರ್ಹ ಸಂಗತಿಯೆಂದರೆ, ಈಗಾಗಲೇ ಹಲವು ಖಾಸಗಿ ಕಂಪನಿಗಳು ದೇಶದಲ್ಲಿ ಡಾಟಾ ಸೆಂಟರ್‌ಗಳನ್ನು ಸ್ಥಾಪಿಸಲು ಮುಂದಾಗಿದ್ದು, ಇವುಗಳಿಗೆ ಪೂರಕವಾಗುವುದಕ್ಕಾಗಿ ಕೇಂದ್ರ ಈ ನೀತಿಯನ್ನು ರೂಪಿಸುವ ಘೋಷಣೆ ಮಾಡಿದೆ. ವಿದೇಶದ ಟೆಕ್‌ ಕಂಪನಿಗಳು ಮತ್ತು ಭಾರತೀಯ ಸರ್ಕಾರದ ನಡುವೆ ಡಾಟಾ ವಿಚಾರವು ಬಹುಕಾಲದಿಂದ ಚರ್ಚೆಯ, ವಾದ-ವಿವಾದದ ವಿಷಯವಾಗಿದೆ.

ಭಾರತದಲ್ಲಿ ಮೊಬೈಲ್‌ ಟಾರಿಫ್ ದರದಲ್ಲಿನ ಕಡಿತ, ಅಗ್ಗದ ಮೊಬೈಲ್‌ಗಳು, 4ಜಿ ಕ್ರಾಂತಿಯಿಂದಾಗಿ ಅಂತರ್ಜಾಲ ಬಳಕೆದಾರರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಅಧಿಕವಾಗಿದ್ದು, ಇದುವರೆಗೂ ಭಾರತೀಯರ ಡಾಟಾಗಳನ್ನು(ದತ್ತಾಂಶಗಳನ್ನು) ಶೇಖರಿಸಿಡುವಂಥ ಬೃಹತ್‌ ಘಟಕಗಳನ್ನು ನಮ್ಮಲ್ಲಿ ನಿರ್ಮಿಸಲಾಗಿಲ್ಲ. ಈಗಲೂ ಭಾರತೀಯ ಬಳಕೆದಾರರ ಡಾಟಾ ಸಮುದ್ರದಲ್ಲಿ ಹಾಸಲಾದ ಕೇಬಲ್ಗಳ ಮೂಲಕ ಹೋಗಿ, ವಿದೇಶಗಳ ವಿವಿಧ ಡಾಟಾ ಪಾರ್ಕುಗಳಲ್ಲಿ ಸ್ಟೋರ್‌ ಆಗುತ್ತಿದೆ.

ಭಾರತವು ಈ ನಿಟ್ಟಿನಲ್ಲಿ ಹೆಚ್ಚು ಗಮನ ಹರಿಸಿದರೆ, ಪ್ರಪಂಚದ ಅತಿದೊಡ್ಡ ಡಾಟಾ ಕೇಂದ್ರವಾಗಿ ಬದಲಾಗಬಹುದು ಎನ್ನುತ್ತಾರೆ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮದ( ಎಂಐಡಿಸಿ) ಸಿಇಒ ಅನ್‌ಬಳಗನ್‌. ಈ ವಿಚಾರದಲ್ಲಿ ಕಳೆದ ತಿಂಗಳಷ್ಟೇ, ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ(ಎಂಐಡಿಸಿ)ಯು 600 ಎಕರೆ ಜಮೀನಿನಲ್ಲಿ ದೇಶದ ಅತಿದೊಡ್ಡ ಡಾಟಾ ಪಾರ್ಕ್‌ ನಿರ್ಮಿಸುವ ಘೋಷಣೆ ಮಾಡಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈಗ ಖಾಸಗಿ ಕಂಪನಿಗಳೂ ಸಣ್ಣ ಗಾತ್ರದ ಡಾಟಾ ಪಾರ್ಕ್‌ಗಳನ್ನು ಸ್ಥಾಪಿಸಲಾರಂಭಿಸಿದ್ದು, ಈ ವಿಚಾರದಲ್ಲಿ ನೀತಿ ನಿರೂಪಣೆ ಬಹುಮುಖ್ಯವಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.