ಇರಾನ್ ತೈಲ ಬಳಕೆಗೆ ಮಿತಿ
Team Udayavani, Jun 29, 2018, 6:00 AM IST
ವಾಷಿಂಗ್ಟನ್/ಹೊಸದಿಲ್ಲಿ: ಇರಾನ್ನಿಂದ ಭಾರೀ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ತಗ್ಗಿಸಲು ಭಾರತ ಸರಕಾರ ನಿರ್ಧರಿಸಿದೆ. ಇರಾನ್ ತೈಲ ಆಮದು ಸ್ಥಗಿತಗೊಳಿಸಲು ಅಮೆರಿಕ ನ.4ರ ಗಡುವು ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಯುರೇನಿಯಂ ಅಭಿವೃದ್ಧಿ ಆರೋಪಗಳ ಹಿನ್ನೆಲೆಯಲ್ಲಿ ಇರಾನ್ ಮೇಲೆ ಆರ್ಥಿಕ ನಿಷೇಧ ಹೇರಲು ಅಮೆರಿಕ ನಿರ್ಧರಿಸಿದ್ದ ಹಿನ್ನೆಲೆಯಲ್ಲಿ ಭಾರತ, ಚೀನಕ್ಕೆ ನ.4ರ ಒಳಗಾಗಿ ತೈಲ ಆಮದು ಪ್ರಮಾಣ ತಗ್ಗಿಸಬೇಕೆಂದು ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದರು. ಅದಕ್ಕೆ ಪೂರಕವಾಗಿ ಹೊಸದಿಲ್ಲಿಯಲ್ಲಿ ಗುರುವಾರ ಸಭೆ ನಡೆಸಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾ ಲಯದ ಹಿರಿಯ ಅಧಿಕಾರಿಗಳು, “ಕುವೈತ್ ಮತ್ತು ಸೌದಿ ಅರೇಬಿಯಾದಿಂದ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳಬೇಕು. ಇರಾನ್ನಿಂದ ಖರೀದಿ ಪ್ರಮಾಣ ತಗ್ಗಿಸಬೇಕು’ ಎಂದು ಸರಕಾರಿ ಸ್ವಾಮ್ಯದ ಮತ್ತು ಖಾಸಗಿ ಸ್ವಾಮ್ಯದ ತೈಲ ಕಂಪೆನಿಗಳು, ರಿಫೈನರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಮಂಗಳೂರು ರಿಫೈನರೀಸ್ ಮತ್ತು ಪೆಟ್ರೋಕೆಮಿಕಲ್ಸ್ (ಎಂಆರ್ಪಿಎಲ್) ರಷ್ಯಾದ ತೈಲ ಕಂಪನಿ ರೋಸ್ನೆಫ್ಟ್ ಪ್ರವರ್ತಿತ ಭಾರತ ಮೂಲದ ತೈಲ ಸಂಸ್ಥೆ ನಯರಾ ಎನರ್ಜಿ ಇರಾನ್ನಿಂದ ಕಚ್ಚಾ ತೈಲ ಆಮದು ಪ್ರಮಾಣ ತಗ್ಗಿಸಲು ಮುಂದಾಗಿವೆ.
ಅಗತ್ಯ ಕ್ರಮ: ಇದೇ ವೇಳೆ ಇರಾನ್ನಿಂದ ಕಚ್ಚಾ ತೈಲ ಆಮದು ಪ್ರಮಾಣ ಕಡಿತಗೊಳಿಸುವ ಬಗ್ಗೆ ಅಮೆರಿಕದ ಕಟ್ಟಪ್ಪಣೆ ಕುರಿತು ಪ್ರತಿಕ್ರಿಯೆ ನೀಡಿದ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್, “ದೇಶದ ತೈಲೋತ್ಪನ್ನಗಳು ಮತ್ತು ಇಂಧನ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಅಮೆರಿಕ ಸರಕಾರ ನ.4ರ ಒಳಗಾಗಿ ಇರಾನ್ನಿಂದ ಕಚ್ಚಾ ತೈಲ ಖರೀದಿ ಸಂಪೂರ್ಣ ನಿಲ್ಲಿಸಬೇಕು ಎಂದು ಮಾತ್ರ ಹೇಳಿತ್ತು. ಸಂಬಂಧ ಕಡಿತಗೊಳಿಸುವ ಬಗ್ಗೆ ಸೂಚಿಸಿರಲಿಲ್ಲ’ ಎಂದಿದ್ದಾರೆ. ಈ ಬಗ್ಗೆ ಎಲ್ಲರ ಜತೆಯೂ ಮಾತುಕತೆ ನಡೆಸುತ್ತೇವೆ ಎಂದೂ ಹೇಳಿದ್ದಾರೆ.
ರಾಷ್ಟ್ರೀಯ ಹಿತಾಸಕ್ತಿ ಮುಖ್ಯ: ಅಮೆರಿಕದ ಎಚ್ಚರಿಕೆಗೆ ಪ್ರತಿಕ್ರಿಯೆ ನೀಡಿದ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು ಕೇಂದ್ರ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. ಇರಾನ್ನಿಂದ ತೈಲ ಆಮದು ಪ್ರಮಾಣ ಮೇ ನಲ್ಲಿ ಪ್ರತಿ ದಿನ 7.05 ಲಕ್ಷ ಬ್ಯಾರೆಲ್ಗೆ ಏರಿಕೆಯಾಗಿತ್ತು.
ದಿನಾಂಕ ಶೀಘ್ರ ಮರುನಿಗದಿ
ಅಮೆರಿಕ- ಭಾರತ ನಡುವಿನ ವಿದೇಶಾಂಗ ಮತ್ತು ರಕ್ಷಣಾ ಖಾತೆ ಸಚಿವರ ನಡುವಿನ 2+2 ಮಾತುಕತೆ ಬಗ್ಗೆ ಶೀಘ್ರ ದಿನಾಂಕ ಮರು ನಿಗದಿಮಾಡುವ ಬಗ್ಗೆ ಅಮೆರಿಕ ವಿದೇಶಾಂಗ ಸಚಿವ ಮೈಕ್ ಪೊಪೊÂà ಅವರು ಸಚಿವೆ ಸುಷ್ಮಾ ಸ್ವರಾಜ್ ಜತೆ ಫೋನ್ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ನಡುವೆ ವಾಷಿಂಗ್ಟನ್ನಲ್ಲಿ ಮಾತನಾಡಿದ ಅಮೆರಿಕದ ವಿದೇಶಾಂಗ ಇಲಾಖೆ ವಕ್ತಾರ, ಮುಂದೂಡಿಕೆಗೆ ಕಾರಣ ನೀಡಿಲ್ಲ. ಈ ಬಗ್ಗೆ 2 ದೇಶಗಳ ಸಚಿವರು ಮಾತನಾಡಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದಾರೆ. ಅಮೆರಿಕದ ಹಲವು ತಜ್ಞರೂ ಸಭೆ ಮುಂದೂಡಿಕೆಯಾದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಡುವಿನ ಮಾತುಕತೆ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.
ಪ್ರಧಾನಿಗೆ ಕಾರಣ ಗೊತ್ತು
ಮುಂದಿನ ವಾರ ಅಮೆರಿಕದಲ್ಲಿ ನಡೆಯಬೇಕಾಗಿದ್ದ ಅಮೆರಿಕ-ಭಾರತ ಮಾತುಕತೆ ರದ್ದಾಗಿರುವುದಕ್ಕೆ ಕಾರಣ ಪ್ರಧಾನಿ ಮೋದಿಗೆ ಗೊತ್ತು ಎಂದು ವಿಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿ ನಿಕ್ಕಿ ಹ್ಯಾಲೆ ಹೇಳಿದ್ದಾರೆ. “ಎನ್ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರಿಗೆ ಗೊತ್ತಿರುವ ವಿಚಾರ ಶೀಘ್ರದಲ್ಲಿಯೇ ಜಗತ್ತಿಗೇ ಗೊತ್ತಾಗಲಿದೆ ಎಂದಿದ್ದಾರೆ. “ಇಂಥ ಘಟನೆಗಳು ನಡೆಯುತ್ತವೆ. ಇದರ ಹೊರತಾಗಿಯೂ ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯ ಈ ಹಿಂದೆ ಸದೃಢವಾಗಿರಲಿಲ್ಲ ಎನ್ನುವುದು ನನ್ನ ಭಾವನೆ. ಭಾರತದ ಅಭಿಪ್ರಾಯವೂ ಇದೇ ಆಗಿದೆ ಎಂದುಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್