ಧೂಳಿನ ಬಿರುಗಾಳಿಗೆ 109 ಮಂದಿ ಸಾವು
Team Udayavani, May 4, 2018, 5:40 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳ ಹಲವು ಭಾಗಗಳಲ್ಲಿ ಬುಧವಾರ ಸಂಜೆಯಿಂದ ಬೀಸಿದ ಧೂಳುಮಿಶ್ರಿತ ಬಿರುಗಾಳಿಯಲ್ಲಿ ಕನಿಷ್ಠ 109 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಿರುಗಾಳಿಯ ತೀವ್ರತೆಗೆ ಎರಡೂ ರಾಜ್ಯಗಳಲ್ಲಿ ಮನೆ, ಕಟ್ಟಡಗಳು ಕುಸಿದು ಬಿದ್ದಿದ್ದು, ನೂರಾರು ಮರಗಳು ಧರೆಗುರುಳಿವೆ. ವಿದ್ಯುತ್, ದೂರವಾಣಿ ಕಂಬಗಳು ಮುರಿದು ಬಿದ್ದಿವೆ. ಇದರಿಂದ ಪಂಜಾಬ್, ಹರಿಯಾಣ, ಮಧ್ಯಪ್ರದೇಶಗಳ ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಗೆ ತೊಂದರೆಯಾಗಿದೆ.
ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಬುಧವಾರ ಸಂಜೆ 6.30ರ ಬಳಿಕ ಬಿರುಗಾಳಿ ಬೀಸಲಾರಂಭಿಸಿತು. ಆರಂಭದಲ್ಲಿ ಅದು ಅಷ್ಟೊಂದು ತೀವ್ರವಾಗಿರಲಿಲ್ಲ. ಸಮಯ ಕಳೆದಂತೆ ಅದು ಬಿರುಸಾಗತೊಡಗಿತು. ಗಾಳಿಯ ಜತೆಗೆ ಕೆಲವು ಸ್ಥಳಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿ ಧಾರಾಕಾರ ಮಳೆಯೂ ಸುರಿದಿದೆ. ಇದರ ಜತೆಗೆ ಆಲಿಕಲ್ಲು ಮಳೆಯೂ ಆಗಿದೆ. ಹೀಗಾಗಿ 10 ಜಿಲ್ಲೆಗಳಲ್ಲಿ ಒಟ್ಟು 64 ಮಂದಿ ಅಸುನೀಗಿದ್ದರೆ, 47 ಮಂದಿ ಗಾಯಗೊಂಡಿದ್ದಾರೆ. ಆಗ್ರಾ ಜಿಲ್ಲೆಯಲ್ಲಿಯೇ ಅತ್ಯಂತ ಹೆಚ್ಚು ಅಂದರೆ 36 ಮಂದಿ ಅಸುನೀಗಿ, 35 ಮಂದಿ ಗಾಯಗೊಂಡಿದ್ದಾರೆ. ಇದರ ಜತೆಗೆ ಇತರ 9 ಜಿಲ್ಲೆಗಳಲ್ಲಿ ಕೂಡ ಗಮನಾರ್ಹ ಹಾನಿ ಉಂಟಾಗಿದೆ. ಕರ್ನಾಟಕ ಚುನಾವಣ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಕಾರ್ಯದರ್ಶಿ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಆರ್ಭಟಿಸಿದೆ. ಮನೆಗಳ ಛಾವಣಿ ಹಾರಿಹೋಗಿವೆ. ಹಲವು ಮನೆಗಳು ಕುಸಿದು ಬಿದ್ದಿವೆ.
ರಾಜಸ್ಥಾನ 33 ಮಂದಿ ಸಾವು
ರಾಜಸ್ಥಾನದ ಮೂರು ಜಿಲ್ಲೆಗಳಲ್ಲಿ ಬೀಸಿದ ಗಾಳಿಯಿಂದಾಗಿ 33 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಧೋಲ್ಪುರ, ಭರತ್ಪುರ, ಅಲ್ವಾರ್ ಹಾನಿಗೀಡಾದ ಜಿಲ್ಲೆಗಳು. ಮುಖ್ಯಮಂತ್ರಿ ವಸುಂಧರಾ ರಾಜೆ ಟ್ವೀಟ್ ಮಾಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಸೂಚನೆ ನೀಡಿದ್ದಾರೆ. ಭರತ್ಪುರದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ.
ಮತ್ತೂಂದು ಬಿರುಗಾಳಿ?
ಭಾರತೀಯ ಹವಾಮಾನ ಇಲಾಖೆ ಗುರುವಾರ ಹೊರಡಿಸಿರುವ ಮತ್ತೂಂದು ಎಚ್ಚರಿಕೆಯ ಪ್ರಕಾರ, ಮುಂದಿನ 48 ಗಂಟೆಗಳ ಒಳಗಾಗಿ ಉತ್ತರ ಪ್ರದೇಶ, ರಾಜಸ್ಥಾನಗಳಲ್ಲಿ ಮತ್ತೂಂದು ಧೂಳಿನ ಬಿರುಗಾಳಿ ಬೀಸಲಿದೆ. ಉ.ಪ್ರ., ರಾಜಸ್ಥಾನದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಪ್ರಧಾನಿ ಸಂತಾಪ
ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಧೂಳಿನ ಬಿರುಗಾಳಿಯಿಂದ 109 ಮಂದಿ ಅಸುನೀಗಿದ ಬಗ್ಗೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಧೂಳಿನ ಬಿರುಗಾಳಿಯಿಂದ ಸಾವು ನೋಟು ಉಂಟಾದ ಬಗ್ಗೆ ದುಃಖವಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಅಗಲಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
ಕಾರಣವೇನು?
– ಅತ್ಯಂತ ಹೆಚ್ಚಿನ ಪ್ರಮಾಣದ ತಾಪಮಾನ ಹಾಗೂ ಪಶ್ಚಿಮ ಭಾಗದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಉಂಟಾದ ಬಿರುಗಾಳಿ, ತೇವಾಂಶ ಧೂಳಿನ ಬಿರುಗಾಳಿಗೆ ಕಾರಣವಾಗಿದೆ ಎನ್ನುತ್ತಾರೆ ಭಾರತೀಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿ ಕುಲದೀಪ್ ಶ್ರೀವಾಸ್ತವ
– ರಾಜಸ್ಥಾನದ ಕೆಲ ಭಾಗಗಳಲ್ಲಿನ ಗರಿಷ್ಠ ಉಷ್ಣತೆ 45 ಡಿಗ್ರಿ ಸೆಲ್ಷಿಯಸ್ ವರೆಗೆ ತಲುಪಿತ್ತು. ಹೀಗಾಗಿ ಅಲ್ಲಿನ ಉತ್ತರ ಭಾಗದಲ್ಲಿ ಒಂದು ರೀತಿಯ ಒತ್ತಡದ ವಾತಾವರಣ ಕಂಡುಬಂದಿತ್ತು.
– ಹೆಚ್ಚಿನ ಪ್ರಮಾಣದ ತಾಪಮಾನ ತೇವಾಂಶ ಹೆಚ್ಚಾಗುವಂತೆ ಮಾಡುತ್ತದೆ. ಇದರ ಜತೆಗೆ ಮೋಡಗಳಿಂದಾಗಿ ಧಾರಾಕಾರ ಮಳೆ ಮತ್ತು ಬಿರುಗಾಳಿ ಉಂಟಾಗುತ್ತವೆ.
– ಏಕಾಏಕಿ ಈ ರೀತಿ ಉಂಟಾಗುತ್ತದೆ ಎನ್ನುತ್ತಾರೆ ಸ್ಕೈಮೆಟ್ ಹವಾಮಾನ ಸಂಸ್ಥೆಯ ಮುಖ್ಯ ಹವಾಮಾನ ತಜ್ಞ ಮಹೇಶ್ ಪಲಾವಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ