ಪಾಕ್ ಬೊಗಳೆಗೆ ಭಾರತ ತಿರುಗೇಟು
Team Udayavani, Sep 1, 2018, 6:00 AM IST
ನವದೆಹಲಿ: ಸಿಂಧೂ ನದಿ ನೀರು ಹಂಚಿಕೆ ಸಂಬಂಧ ನಡೆದ ಮಾತುಕತೆಯ ಕುರಿತು ಪಾಕಿಸ್ತಾನ ಬಿಟ್ಟಿರುವ ಬೊಗಳೆಯನ್ನು ಭಾರತ ಖಂಡಿಸಿದ್ದು ವಾಸ್ತವ ಸಂಗತಿಯನ್ನು ತೆರೆದಿಟ್ಟಿದೆ. ಸಿಂಧೂ ನದಿಯುದ್ದಕ್ಕಿರುವ ಎರಡೂ ದೇಶಗಳ ಜಲವಿದ್ಯುತ್ ಯೋಜನೆಗಳಿಗೆ ಪರಸ್ಪರ ದೇಶಗಳ ನಿಯೋಗ ತೆರಳಲು ಗುರುವಾರ ಮುಕ್ತಾಯಗೊಂಡ ಸಭೆಯಲ್ಲಿ ಉಭಯ ದೇಶಗಳು ಸಮ್ಮತಿಸಿದ್ದವು. ಆದರೆ ಪಾಕಿಸ್ತಾನ ಪತ್ರಿಕಾಗೋಷ್ಠಿ ನಡೆಸಿ, ಭಾರತದ ಜಲವಿದ್ಯುತ್ ಯೋಜನೆಗಳನ್ನಷ್ಟೇ ಪಾಕಿಸ್ತಾನ ತಪಾಸಣೆ ನಡೆಸಲು ಸಭೆಯಲ್ಲಿ ಒಪ್ಪಿಗೆ ಪಡೆದುಕೊಳ್ಳಲಾಯಿತು. ಇದು ತನ್ನ ಗೆಲುವು ಎಂದು ಸುಳ್ಳು ಹೇಳಿತ್ತು.
ಪಾಕಿಸ್ತಾನದ ಹುಸಿವಾದವನ್ನು ತಳ್ಳಿಹಾಕಿರುವ ಭಾರತದ ವಿದೇಶಾಂಗ ಇಲಾಖೆ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿದ್ದು, ಎರಡು ದಿನಗಳ ಸಭೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಪಾಕಲ್ ದುಲ್ (1000 ಮೆವ್ಯಾ) ಹಾಗೂ ಲೋವರ್ ಕಲಾನಿ (48 ಮೆವ್ಯಾ) ಸಹಿತ ವಿವಿಧ ಜಲವಿದ್ಯುತ್ ಯೋಜನೆಗಳ ಅನುಷ್ಠಾನದ ಕುರಿತು ತಾಂತ್ರಿಕ ಚರ್ಚೆಗಳು ನಡೆದವು. ಎರಡೂ ದೇಶಗಳು ಸಿಂಧೂ ಕಣಿವೆಯಲ್ಲಿರುವ ಪರಸ್ಪರರ ಯೋಜನೆಗಳನ್ನು ವೀಕ್ಷಿಸಲು ಒಪ್ಪಿಕೊಂಡಿವೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ