ಗಡಿ ದಾಟಿ ಬಂದ ಪಾಕ್ ಪ್ರಜೆಯನ್ನು ತವರಿಗೆ ಕಳುಹಿಸಿಕೊಟ್ಟ ಭಾರತೀಯ ಸೇನೆ
ತಾಯಿನಾಡಿಗೆ ಮರಳಿಸಿದ ಅಧಿಕಾರಿಗಳಿಗೆ ಬಟ್ಟೆ ಹಾಗೂ ಸಿಹಿತಿಂಡಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾನೆ.
Team Udayavani, Apr 7, 2021, 5:49 PM IST
ಜಮ್ಮು-ಕಾಶ್ಮಿರ:ಆಕಸ್ಮಿಕವಾಗಿ ಭಾರತದ ಗಡಿ ಪ್ರವೇಶಿಸಿದ್ದ ಪಾಕ್ ಪ್ರಜೆಯನ್ನು ಭಾರತೀಯ ಸೇನಾಧಿಕಾರಿಗಳು ತವರಿಗೆ ಕಳುಹಿಸಿ ಕೊಟ್ಟಿದ್ದಾರೆ. ಪಾಕಿಸ್ತಾನದ ಲಿಪಾ ಪ್ರದೇಶದ ನಿವಾಸಿ ಮಂಜೂರ್ ಅಹ್ಮದ್ ಎಂಬುವರ ಪುತ್ರ ಮೌಸಮ್ ಹೆಸರಿನ ಯುವಕ ಏಪ್ರಿಲ್ 5 ರಂದು ಭಾರತದ ಗಡಿ ಪ್ರವೇಶಿಸಿದ್ದ.
ಜಮ್ಮು-ಕಾಶ್ಮಿರದ ಕುಪ್ವಾರಾದ ಕರ್ಣ ಎಂಬಲ್ಲಿ ಭಾರತದ ಗಡಿ ನಿಯಂತ್ರಣ ರೇಖೆ( ಎಲ್ಒಸಿ) ಯನ್ನು ದಾಟಿ ಭಾರತಕ್ಕೆ ಆಗಮಿಸಿದ್ದ. ಈತನನ್ನು ವಶಕ್ಕೆ ಪಡೆದ ಭಾರತೀಯ ಸೇನೆ ಪಾಕಿಸ್ತಾನ್ ಅಧಿಕಾರಿಗಳ ಗಮನಕ್ಕೆ ತಂದಿತ್ತು.
ಉಭಯ ರಾಷ್ಟ್ರಗಳ ಅಧಿಕಾರಿಗಳ ನಡುವೆ ಮಾತುಕತೆ ನಡೆದು ಇಂದು (ಏ.7) ಬೆಳಿಗ್ಗೆ 11.50ರ ವೇಳೆ ತೀತ್ ವಾಲ್ ಎಂಬಲ್ಲಿ ಮೌಸಮ್ನನ್ನು ಪಾಕ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಮೌಸಮ್ ತಾಯಿನಾಡಿಗೆ ಮರಳಿಸಿದ ಅಧಿಕಾರಿಗಳಿಗೆ ಬಟ್ಟೆ ಹಾಗೂ ಸಿಹಿತಿಂಡಿ ನೀಡಿ ಕೃತಜ್ಞತೆ ಸಲ್ಲಿಸಿದ್ದಾನೆ.
ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಮಾತಾಡಿರುವ ಭಾರತೀಯ ಸೇನಾಧಿಕಾರಿಗಳು ಮಾನವೀಯತೆಯ ನೆಲೆಗಟ್ಟಿನಲ್ಲಿ ತವರಿಗೆ ಮರಳಿ ಕಳುಹಿಸಿದ್ದೇವೆ ಎಂದಿದ್ದಾರೆ.
#WATCH: Indian authorities repatriated a youth to Pakistani authorities from Teethwal crossing point as humanitarian gesture. He was given clothes and sweets on his return. He had crossed LoC into Karna, Kupwara (Jammu and Kashmir) on 5th April.
(Source: Indian Army) pic.twitter.com/QbYbMIv81O
— ANI (@ANI) April 7, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ