ಕೆಂಪುಕೋಟೆ ಗಲಭೆ ಕ್ಯಾಪಿಟಲ್‌ ದಾಂಧಲೆಗೆ ಸಮ: ಭಾರತ ಅಮೆರಿಕಕ್ಕೆ

ಬ್ಯಾರಿಕೇಡ್‌ಗಳನ್ನೇ ಹಾಕಿದ್ದರಿಂದ ಪ್ರತಿಭಟನಾನಿರತ ರೈತರನ್ನು ಭೇಟಿಯಾಗುವುದು ಅಸಾಧ್ಯವಾಗಿದೆ

Team Udayavani, Feb 5, 2021, 11:31 AM IST

ಕೆಂಪುಕೋಟೆ ಗಲಭೆ ಕ್ಯಾಪಿಟಲ್‌ ದಾಂಧಲೆಗೆ ಸಮ: ಭಾರತ ಅಮೆರಿಕಕ್ಕೆ

ನವದೆಹಲಿ: “ಜ.6ರ ಕ್ಯಾಪಿಟಲ್‌ ಹಿಲ್‌ ಗಲಭೆಗೂ, ಜ.26ರ ಕೆಂಪುಕೋಟೆ ದಾಂಧಲೆಗೂ ಹೆಚ್ಚು ವ್ಯತ್ಯಾಸವೇನೂ ಇಲ್ಲ’!  -ಟ್ರ್ಯಾಕ್ಟರ್‌ ಪರೇಡ್‌ ನೆಪದಲ್ಲಿ ಪ್ರತಿಭಟನಾಕಾರರು ನಡೆ ಸಿದ ವಿಧ್ವಂಸಕ ಕೃತ್ಯವನ್ನು ಭಾರತ, ಅಮೆರಿಕಕ್ಕೆ ಈ ಒಂದು ತೀಕ್ಷ್ಣಸಾಲಿನ ಮೂಲಕ ಮನವರಿಕೆ ಮಾಡಿದೆ.

ಇದನ್ನೂ ಓದಿ:ಕೊಣಾಜೆ: ಶಾಲೆಯೆದುರು ಯುವಕ ಆತ್ಮಹತ್ಯೆ, ಪ್ರೇಮ ವೈಫಲ್ಯ ಶಂಕೆ!

ರೈತ ಕಾಯ್ದೆಗಳ ಬಗ್ಗೆ ಅಮೆರಿಕ ಬೆಂಬಲ  ಸೂಚಿಸಿದ ಬೆನ್ನ ಲ್ಲೇ ವಿದೇಶಾಂಗ ಸಚಿವಾಲಯ ವಕ್ತಾರ ಅನುರಾಗ್‌ ಶ್ರೀವಾ ಸ್ತವ್‌, “ಭಾರತ- ಅಮೆರಿಕ ಎರಡೂ ಸ್ಪಂದನಾಶೀಲ ಪ್ರಜಾಪ್ರಭುತ್ವ ಮೌಲ್ಯಗಳನ್ನು ಅಳವಡಿಸಿಕೊಂಡಿವೆ. ಕೆಂಪುಕೋಟೆಯಲ್ಲಿ ನಡೆದ ದಾಂಧಲೆಯು ಕ್ಯಾಪಿಟಲ್‌ ಹಿಲ್‌ನಲ್ಲಿ ನಡೆದ ದುರ್ಘ‌ಟನೆಯಂತೆ ಸಮಾನ ಭಾವನೆ ಮತ್ತು ಪ್ರತಿಕ್ರಿಯೆಗಳನ್ನು ಹೊಮ್ಮಿಸಿದೆ’ ಎಂದಿದ್ದಾರೆ.

“ಕೃಷಿ ಕಾಯ್ದೆಗಳ ಸುಧಾರಣೆಗೆ ಭಾರತ ಇಟ್ಟಿರುವ ಹೆಜ್ಜೆ  ಯನ್ನು ಅಮೆರಿಕದ ವಿದೇಶಾಂಗ ಇಲಾಖೆ ಒಪ್ಪಿಕೊಂಡಿದೆ. ಅಮೆರಿಕದ ಹೇಳಿಕೆಯನ್ನು ಗಮನಿಸಿದ್ದೇವೆ. ಇಂಥ ಸನ್ನಿ ವೇ ಶದಲ್ಲಿ ನಾವು ಅವರ ಅಭಿಪ್ರಾಯ ಸ್ವೀಕರಿಸುವುದೂ ಬಹಳ ಮುಖ್ಯ. ಇಲ್ಲಿನ ಯಾವುದೇ ಪ್ರತಿಭಟನೆಯನ್ನು ಭಾರತದ ಪ್ರಜಾಪ್ರಭುತ್ವದ ನೀತಿಗಣ್ಣಿಂದಲೇ ನೋಡಬೇಕು. ರೈತ ಸಮೂಹದ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ಪ್ರಯ ತ್ನಿಸುತ್ತಲೇ ಇದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಗಲಾಟೆ: “ಏಕಪಾತ್ರಾಭಿನಯ ಸಾಕು, ರೈತರೊಂದಿಗೆ ಮಾತುಕತೆ ಮುಂದುವರಿಸಿ’!- ಇದು ರಾಜ್ಯಸಭೆಯಲ್ಲಿ ವಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮಾಡಿರುವ ಒತ್ತಾಯ! “ಬಿಜೆಪಿ ಸಚಿವರು ಏಕಪಾತ್ರಾಭಿನಯದಲ್ಲಿ ಹೆಚ್ಚು ನಂಬಿಕೆ ಹೊಂದಿದ್ದಾರೆ. ಕಂದಕಗಳನ್ನು ಕೊರೆದು, ಮುಳ್ಳುತಂತಿಗಳನ್ನು ಹಾಕಿ, ಮೊಳೆಗಳನ್ನು ನೆಟ್ಟು ರೈತರ ಮೇಲೆ ಗೆಲುವು ಸಾಧಿಸಲು ಹೊರಟಿದ್ದಾರೆ’ ಎಂದು ಆಪ್‌ ಸಂಸದ ಸಂಜಯ್‌ ಸಿಂಗ್‌ ಸೇರಿದಂತೆ ಹಲವರು ಆರೋಪಿಸಿದ್ದಾರೆ.

ಫೆ.8ಕ್ಕೆ ಮೋದಿ ಉತ್ತರ: ಪ್ರಧಾನಿ ನರೆಂದ್ರ ಮೋದಿ ಅವರು ರಾಷ್ಟ್ರಪತಿ ಭಾಷಣಕ್ಕೆ ರಾಜ್ಯಸಭೆಯಲ್ಲಿ ಸೋಮವಾರ ದಂದು ಪ್ರತಿಕ್ರಿಯೆ ನೀಡಲಿದ್ದಾರೆ. ಅಲ್ಲದೆ, ಇದೇ ವೇಳೆ ಕೇಂದ್ರ ಬಜೆಟ್‌ ಕುರಿತಾಗಿಯೂ ಮಾತನಾಡಲಿದ್ದಾರೆ.

ಸಂಸದರಿಗೆ ತಡೆ: ಏತನ್ಮಧ್ಯೆ, ದೆಹಲಿಯ ಘಾಜಿಪುರ ಗಡಿ ಯಲ್ಲಿನ ಪ್ರತಿಭಟನೆಯ ಸ್ಥಳಕ್ಕೆ ತೆರಳುತ್ತಿದ್ದ ವಿಪಕ್ಷ ನಾಯ ಕರ ಗುಂಪನ್ನು ಪೊಲೀಸರು ತಡೆದಿದ್ದಾರೆ. ಶಿರೋಮಣಿ ಅಕಾಲಿದಳ, ಡಿಎಂಕೆ, ಎನ್‌ ಸಿಪಿ ಸೇರಿ ದಂತೆ 10 ವಿಪಕ್ಷ ಗಳ 15 ಸಂಸದರು ಘಾಜಿಪುರ ದತ್ತ ಹೊರಟಿದ್ದರು. ಹಾದಿ ತುಂಬಾ ಬ್ಯಾರಿಕೇಡ್‌ಗಳನ್ನೇ ಹಾಕಿದ್ದರಿಂದ ಇವರಿಗೆ ಪ್ರತಿಭಟನಾನಿರತ ರೈತರನ್ನು ಭೇಟಿಯಾಗುವುದು ಅಸಾಧ್ಯವಾಗಿದೆ. ಇದರಿಂದಾಗಿ ಸಂಸದರಾದ ಕೌರ್‌ ಬಾದಲ್‌, ಸುಪ್ರಿಯಾ ಸುಳೆ, ಕನ್ನಿ ಮೋಳಿ, ಸುಗತಾ ರಾಯ್‌ ಸೇರಿದಂತೆ ಹಲವು ಸಂಸದರು ವಿಧಿಯಿಲ್ಲದೆ ಮರಳಿದ್ದಾರೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.