ಭಾರತ-ಅಮೆರಿಕ ನಡುವೆ 3 ಬಿಲಿಯನ್ ಡಾಲರ್ ರಕ್ಷಣಾ ಒಪ್ಪಂದ; ಮೊಟೆರಾದಲ್ಲಿ ಟ್ರಂಪ್ ಘೋಷಣೆ

ಪಾಕಿಸ್ತಾನದಲ್ಲಿರುವ ಉಗ್ರರನ್ನು ಮಟ್ಟ ಹಾಕುವಂತೆ ಅಮೆರಿಕ ಒತ್ತಡ ಹೇರಿದೆ.

Team Udayavani, Feb 24, 2020, 2:50 PM IST

Motera-Trumph

ಅಹಮದಾಬಾದ್: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಉಭಯ ದೇಶಗಳು ಹೋರಾಟ ಮುಂದುವರಿಯಲಿದೆ. ಐಸಿಸ್ ಎಂಬ ಉಗ್ರ ಸಂಘಟನೆಯನ್ನು ಅಮೆರಿಕ ಮಟ್ಟ ಹಾಕಿದೆ. ಪಾಕಿಸ್ತಾನದಲ್ಲಿರುವ ಉಗ್ರರನ್ನು ಮಟ್ಟ ಹಾಕುವಂತೆ ಅಮೆರಿಕ ಒತ್ತಡ ಹೇರಿದೆ. ಭಾರತ ಮತ್ತು ಅಮೆರಿಕವನ್ನು ಕೆಣಕಿದವರಿಗೆ ತಕ್ಕ ಶಾಸ್ತಿಯಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದರು.

ಸೋಮವಾರ ಎರಡು ದಿನಗಳ ಭಾರತ ಪ್ರವಾಸದ ಹಿನ್ನೆಲೆಯಲ್ಲಿ ಗುಜರಾತ್ ನ ಅಹಮದಾಬಾದ್ ಗೆ ಆಗಮಿಸಿದ್ದ ಡೊನಾಲ್ಡ್ ಟ್ರಂಪ್ ವಿಶ್ವದ ಅತೀ ದೊಡ್ಡ ಕ್ರೀಡಾ ಮೈದಾನ ಮೊಟೆರಾದಲ್ಲಿ ಆಯೋಜಿಸಿದ್ದ ನಮಸ್ತೆ ಟ್ರಂಪ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಯೊಂದು ದೇಶಕ್ಕೂ ತಮ್ಮ ಗಡಿಯನ್ನು ರಕ್ಷಿಸುವ ಹಕ್ಕು ಇರುತ್ತದೆ. ಭಾರತ ಮತ್ತು ಅಮೆರಿಕ ಭಯೋತ್ಪಾದನೆಯಿಂದ ತೊಂದರೆಗೆ  ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಮುಂದಿನ ದಿನಗಳಲ್ಲಿ ನಮ್ಮ ಪ್ರಮುಖ ರಕ್ಷಣಾ ಪಾಲುದಾರ ದೇಶವಾಗಬೇಕು ಎಂಬುದು ನಮ್ಮ ಇಚ್ಚೆ ಎಂದು ಹೇಳಿದರು.

3 ಬಿಲಿಯನ್ ಅಮೆರಿಕನ್ ಡಾಲರ್ ರಕ್ಷಣಾ ಒಪ್ಪಂದ:

ಭಾರತ ಮತ್ತು ಅಮೆರಿಕ ನಡುವಿನ ರಕ್ಷಣಾ ಸಹಕಾರ ಮುಂದುವರಿಯಲಿದೆ. ಭಾರತಕ್ಕೆ ನಾವು ಈ ಅತ್ಯಾಧುನಿಕ ಸೇನಾ ಶಸ್ತ್ರಾಸ್ತ್ರ ಮಾರಾಟ ಮಾಡಲು ಎದುರು ನೋಡುತ್ತಿದ್ದೇವೆ. ನಾವು ಈಗಾಗಲೇ ಹಲವು ಆಧುನಿಕ ಶಸ್ತ್ರಾಸ್ತ್ರ ತಯಾರಿಸಿದ್ದೇವೆ. ಈ ನಿಟ್ಟಿನಲ್ಲಿ ಭಾರತ ಮತ್ತು ಅಮೆರಿಕದ ನಡುವೆ ಬೃಹತ್ ಒಪ್ಪಂದ ನಡೆಯಲಿದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಭಾರತ ಮತ್ತು ಅಮೆರಿಕ ನಡುವೆ ಭಾರತ ಸೇನಾಪಡೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಮಾರಾಟ ಮಾಡುವ 3 ಬಿಲಿಯನ್ ಅಮೆರಿಕನ್ ಡಾಲರ್(ಸುಮಾರು 20ಸಾವಿರ ಕೋಟಿ ರೂಪಾಯಿ) ಒಪ್ಪಂದ ನಡೆಯಲಿದೆ ಎಂದು ಟ್ರಂಪ್ ಮೊಟೆರಾ ಮೈದಾನದಲ್ಲಿ ಘೋಷಿಸಿದ್ದಾರೆ.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malena-Chimdren-25-2

ಮಕ್ಕಳ ಜತೆಗೆ ಮೆಲಾನಿಯಾ ಮಾತು

Donald-T-America

ಸಿಎಎ ಭಾರತದ ಆಂತರಿಕ ವಿಷಯ, ಮೋದಿ ಧಾರ್ಮಿಕ ಸ್ವಾತಂತ್ರ್ಯದ ಪರ: ಡೊನಾಲ್ಡ್ ಟ್ರಂಪ್

Donald-Trump-04-730

‘ಇನ್ನೊಂದು ಅವಧಿಗೂ ನಾನೇ ಅಧ್ಯಕ್ಷ’ ; ಭಾರತೀಯ ಸಿಇಒಗಳಿಗೆ ಟ್ರಂಪ್ ಭರವಸೆ

Joint-Press-Meet

ರಕ್ಷಣಾ ಕ್ಷೇತ್ರಕ್ಕೆ ಬಲ: ಅಪಾಚೆ, MH ರೋಮೆಯೊ ಹೆಲಿಕಾಪ್ಟರ್ ಖರೀದಿಗೆ ಭಾರತ-ಅಮೆರಿಕ ಒಪ್ಪಂದ

Trumph

ಟ್ರಂಪ್ ಭೇಟಿ; ಅಮೆರಿಕ ನಿವಾಸಿಗಳು ಅತೀ ಹೆಚ್ಚು ಗೂಗಲ್ ಸರ್ಜ್ ಮಾಡಿದ್ದು ಯಾವ ವಿಷಯ ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.