ಅಸಮಂಜಸ ನಕಾಶೆ ಪ್ರದರ್ಶಿಸಿದ ಪಾಕ್: SCO ಸಭೆಯಿಂದ ಹೊರನಡೆದ ಭಾರತ


Team Udayavani, Sep 15, 2020, 8:50 PM IST

ಅಸಮಂಜಸ ನಕಾಶೆ ಪ್ರದರ್ಶಿಸಿದ ಪಾಕ್: SCO ಸಭೆಯಿಂದ ಹೊರನಡೆದ ಭಾರತ

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ಥಾನ ದೇಶಗಳ ಗಡಿ ಭಾಗಗಳನ್ನು ಅಸಮಂಜಸ ರೀತಿಯಲ್ಲಿ ಬಿಂಬಿಸುವ ತನ್ನ ನಕ್ಷೆಯನ್ನು ಪಾಕಿಸ್ಥಾನ ಪ್ರದರ್ಶಿಸಿರುವುದನ್ನು ಖಂಡಿಸಿ ಭಾರತವು ಸಹಕಾರ ಸಂಸ್ಥೆಯ (SCO) ವರ್ಚ್ಯುವಲ್ ಸಭೆಯನ್ನು ಬಹಿಷ್ಕರಿಸಿ ಹೊರನಡೆದಿದೆ.

ಶಾಂಘೈ ಸಹಕಾರ ಸಂಸ್ಥೆಯ ಸದಸ್ಯ ರಾಷ್ಟ್ರಗಳ ರಾಷ್ಟ್ರೀಯ ಭದ್ರತಾ ಸಲಹೆಗಾರರ ವರ್ಚ್ಯುವಲ್ ಸಭೆ ನಡೆಯುತ್ತಿದ್ದ ಸಂದರ್ಭದಲ್ಲೇ ಪಾಕಿಸ್ಥಾನ ಈ ದುರ್ವರ್ತನೆಯನ್ನು ತೋರಿಸಿರುವುದು ಭಾರತವನ್ನು ಸಹಜವಾಗಿಯೇ ಕೆರಳಿಸಿದೆ.

‘ರಷ್ಯಾದ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದ ಈ ವರ್ಚ್ಯುವಲ್ ಸಭೆಯ ಸಂದರ್ಭದಲ್ಲಿ ಪಾಕಿಸ್ಥಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಉದ್ದೇಶಪೂರ್ವಕವಾಗಿಯೇ ಆ ದೇಶ ಕಳೆದ ಕೆಲವು ದಿನಗಳಿಂದ ಬಿಂಬಿಸುತ್ತಿರುವ ಅಸಮಂಜಸ ನಕ್ಷೆಯನ್ನು ಪ್ರದರ್ಶಿಸಿದರು’ ಎಂದು ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ಅವರ ಹೇಳಿಕೆಯನ್ನು ಆಧರಿಸಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಪಾಕಿಸ್ಥಾನದ ಈ ಅಧಿಕಪ್ರಸಂಗಿತನ ಸಭೆಯ ನಿಯಮಾವಳಿಗಳಿಗೆ ವಿರುದ್ಧವಾಗಿತ್ತು. ಹಾಗಾಗಿ ಈ ಸಭೆಯನ್ನು ಆಯೋಜಿಸಿದ್ದ ರಾಷ್ಟ್ರದ ಜೊತೆ ಸಮಾಲೋಚನೆ ನಡೆಸಿ ಭಾರತವು ಈ ಸಭೆಯಿಂದ ಹೊರ ನಡೆಯಿತು ಎಂದು ಶ್ರೀವಾಸ್ತವ ಅವರು ಘಟನೆಯ ಕುರಿತಾದ ವಿವರಗಳನ್ನು ನೀಡಿದ್ದಾರೆ.

ಇಂದಿನ ಬೆಳವಣಿಗೆಗಳ ಕುರಿತಾಗಿ ನಿಖರ ಮಾಹಿತಿ ಹೊಂದಿರುವ ವ್ಯಕ್ತಿ ತನ್ನ ಗುರುತಿನ ಗೌಪ್ಯತೆಯನ್ನು ಕಾಪಿಡುವ ಷರತ್ತಿನ ಮೇಲೆ ಪಾಕ್ ನಡೆಸಿದ ಕಿತಾಪತಿಯನ್ನು ‘ಹಿಂದೂಸ್ತಾನ್ ಟೈಮ್ಸ್’ ಜೊತೆ ಹಂಚಿಕೊಂಡಿದ್ದು ಹೀಗೆ…:

‘ಇಂದಿನ ವರ್ಚ್ಯುವಲ್ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಾಕಿಸ್ಥಾನದ ಪ್ರತಿನಿಧಿ ಕುಳಿತಿದ್ದ ಹಿಂಭಾಗದಲ್ಲಿ ಇರಿಸಲಾಗಿದ್ದ ನಕಾಶೆ ಅಸಮಂಜಸ ಮತ್ತು ಕಾಲ್ಪನಿಕವಾಗಿತ್ತು. ಮತ್ತು ಈ ನಕಾಶೆಯಲ್ಲಿ ಭಾರತದ ಸಾರ್ವಭೌಮತೆಗೊಳಪಟ್ಟ ಪ್ರದೇಶಗಳನ್ನು ಪಾಕಿಸ್ಥಾನ ತನ್ನದೆಂದು ಬಿಂಬಿಸಿಕೊಂಡಿತ್ತು. ಮತ್ತು ಪಾಕ್ ನ ಈ ನಡೆ SCOನ ಸದಸ್ಯ ರಾಷ್ಟ್ರಗಳ ಸಾರ್ವಭೌಮತೆ, ಸಮಗ್ರತೆಯ ರಕ್ಷಣೆಯ ಸ್ಪಷ್ಟ ಉಲ್ಲಂಘನೆಯಾಗಿತ್ತು’ ಎಂದು ಅವರು ಹೇಳಿದ್ದಾರೆ.

ಇದನ್ನು ಕಂಡ ಕೂಡಲೇ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಅಜಿತ್ ದೋವಲ್ ಮತ್ತು ಅವರ ತಂಡ ಪಾಕ್ ನ ಈ ದುಸ್ಸಾಹಸವನ್ನು ಕಟುಶಬ್ದಗಳಲ್ಲಿ ಖಂಡಿಸಿದ್ದಾರೆ ಮತ್ತು ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರಷ್ಯಾ ಸಹ ಪಾಕಿಸ್ಥಾನಕ್ಕೆ ಈ ರೀತಿ ಮಾಡದಂತೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಮಾಡಿತು.

ಮತ್ತು ಈ ಸಭೆಯಲ್ಲಿ ಭಾಗವಹಿಸಿದ್ದಕ್ಕೆ ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೊಲಾಯ್ ಪತ್ರುಶೇವ್ ಅವರು ಅಜಿತ್ ದೋವಲ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮಾತ್ರವಲ್ಲದೇ ಪಾಕಿಸ್ಥಾನದ ಈ ಆಕ್ಷೇಪಾರ್ಹ ನಡೆ SCOದಲ್ಲಿ ಭಾರತದ ಭಾಗವಹಿಸುವಿಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಆಶಾಭಾವನೆಯನ್ನು ಅವರು ವ್ಯಕ್ತಪಡಿಸಿದರು ಹಾಗೂ ಮುಂಬರುವ ದಿನಗಳಲ್ಲಿ ನಡೆಯುವ ಸಭೆಗಳಲ್ಲಿ ಅಜಿತ್ ದೋವಲ್ ಅವರ ಭಾಗವಹಿಸುವಿಕೆಯನ್ನು ನಿರೀಕ್ಷಿಸುತ್ತಿರುವುದಾಗಿ ಪತ್ರುಶೇವ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.