![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಫಾರ್ವರ್ಡ್ ಮಾಡಿದರೂ ಹೊಣೆ ನಿಮ್ಮದೇ
Team Udayavani, Jul 5, 2018, 6:00 AM IST
![21.jpg](https://www.udayavani.com/wp-content/uploads/2018/07/5/21.jpg)
ಹೊಸದಿಲ್ಲಿ: ಸುಳ್ಳು ಸುದ್ದಿಗಳ ತಡೆಗೆ ಕ್ರಮ ಕೈಗೊಳ್ಳಲು ಮುಂದಾಗಿರುವ ವಾಟ್ಸ್ ಆ್ಯಪ್, ಕಳುಹಿಸಲಾದ ಸಂದೇಶ ಫಾರ್ವರ್ಡ್ ಆಗಿದ್ದೇ ಅಥವಾ ಅಲ್ಲವೇ ಎಂಬುದನ್ನು ಖಚಿತ ಪಡಿಸುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ಯಾರಿಂದ ಸಂದೇಶ ಬಂದಿದೆ ಎಂಬುದು ಗೊತ್ತಾಗುತ್ತದೆ ಎಂದಿದೆ. ಕರ್ನಾಟಕ, ಮಹಾರಾಷ್ಟ್ರ ಸಹಿತ ದೇಶದ ಹಲವು ಭಾಗಗಳಲ್ಲಿ ವಾಟ್ಸ್ಆ್ಯಪ್ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಹರಿದಾಡಿದ ಸುಳ್ಳು ಸುದ್ದಿಯಿಂದ ಆಗಿರುವ ಅನಾಹುತಗಳ ಹಿನ್ನೆಲೆಯಲ್ಲಿ ಸರಕಾರ ನೀಡಿದ ನೋಟಿಸ್ಗೆ ಉತ್ತರವಾಗಿ ಸಂಸ್ಥೆ ಈ ಮಾಹಿತಿ ನೀಡಿದೆ.
ಇದೇ ವೇಳೆ ಫೇಕ್ ನ್ಯೂಸ್ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಿಂದಲೇ “ಬೂಮ್ ಲೈವ್’ ಎಂಬ ಸಂಸ್ಥೆ ಜತೆ ಒಪ್ಪಂದ ಮಾಡಿಕೊಂಡಿತ್ತು. ಇತ್ತೀಚಿನ ಅವಾಂತರಗಳಿಗೆ ಕಾರಣವಾದ ಸುದ್ದಿಯ ಮೂಲಗಳನ್ನೂ ಅದು ಪತ್ತೆ ಹಚ್ಚಿದೆ ಎಂದು ಅದು ಹೇಳಿದೆ. ಸುಳ್ಳು ಸುದ್ದಿ ಹರಡುವುದನ್ನು ತಡೆಯುವುದರ ವಿರುದ್ಧ ಕೈಗೊಂಡಿರುವ ಕ್ರಮಗಳನ್ನೂ ವಿವರಿಸಿದೆ.
ಸುಳ್ಳು ಸುದ್ದಿಯನ್ನು ಹರಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಗ್ರೂಪ್ನಲ್ಲಿ ಯಾರು ಸಂದೇಶ ಕಳುಹಿಸಬಹುದು ಮತ್ತು ಯಾರು ಸಂದೇಶ ಕಳುಹಿಸಬಾರದು ಎಂಬುದನ್ನು ನಿಯಂತ್ರಿಸುವ ಅವಕಾಶವನ್ನು ಗ್ರೂಪ್ ಅಡ್ಮಿನ್ಗೆ ನೀಡಲಾಗಿದೆ. ಇನ್ನೊಂದೆಡೆ ಫಾರ್ವರ್ಡ್ ಮಾಡಿದ ಸಂದೇಶಗಳನ್ನು ಗುರುತಿಸಲು ಅನುವಾಗುವಂತೆ ಪ್ರತಿ ಸಂದೇಶ ಗಳಿಗೂ ಫಾರ್ವರ್ಡೆಡ್ ಎಂಬ ಲೇಬಲ್ ಪ್ರದರ್ಶನವನ್ನೂ ಆರಂಭಿಸಲಾಗಿದೆ.
ಸರಕಾರ, ಸಮಾಜದ ಸಹಭಾಗಿತ್ವದಲ್ಲಿ ಕ್ರಮ ಕೈಗೊಳ್ಳುವ ಭರವಸೆ
ವಾಟ್ಸ್ಆ್ಯಪ್ ಪರಿಣತರ ಜತೆ ಸೇರಿಕೊಂಡು ತಪ್ಪು ಮಾಹಿತಿ ಗುರುತಿಸಲು ಕ್ರಮ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.