ಶಾಂತಿ ಪ್ರಕ್ರಿಯೆಯಲ್ಲಿ ಭಾರತದ್ದೂ ಪಾಲಿದೆ
Team Udayavani, Jul 11, 2018, 12:00 PM IST
ಹೊಸದಿಲ್ಲಿ: ಕೊರಿಯಾ ಪರ್ಯಾಯ ದ್ವೀಪದಲ್ಲಿನ ಶಾಂತಿ ಪ್ರಕ್ರಿಯೆಯಲ್ಲಿ ಭಾರತವೂ ಪಾಲುದಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಗಳವಾರ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೇ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.
ಈಶಾನ್ಯ ಏಷ್ಯಾ ಹಾಗೂ ದಕ್ಷಿಣ ಏಷ್ಯಾ ನಡುವಿನ ನಂಟು ಭಾರತಕ್ಕೆ ಕಳವಳಕಾರಿಯಾಗಿದೆ. ಹೀಗಾಗಿ, ಭಾರತ ಕೂಡ ಕೊರಿಯಾ ದ್ವೀಪದಲ್ಲಿ ಶಾಂತಿಯನ್ನು ಬಯಸುತ್ತದೆ. ಪಾಕಿಸ್ಥಾನದ ಜೊತೆ ಉತ್ತರ ಕೊರಿಯಾ ಹೊಂದಿರುವ ಅಣ್ವಸ್ತ್ರ ನಂಟಿನ ಕುರಿತು ತನಿಖೆಯಾಗ ಬೇಕು. ಅದಕ್ಕೆ ಕಾರಣೀಕರ್ತರಾದವರನ್ನು ಹೊಣೆಗಾರರ ನ್ನಾಗಿ ಸಬೇಕು ಎಂದು ಭಾರತ ಒತ್ತಾಯಿಸುತ್ತದೆ ಎಂದೂ ಮೋದಿ ಹೇಳಿದ್ದಾರೆ.
ಮಾತುಕತೆ ವೇಳೆ, ಎರಡೂ ರಾಷ್ಟ್ರಗಳ ನಡುವಿನ ವ್ಯಾಪಾರ, ಭದ್ರತೆ, ಕೃತಕ ಬುದ್ಧಿಮತ್ತೆ, ರಕ್ಷಣಾ ಸಹಕಾರ ವೃದ್ಧಿ, ಪ್ರಾದೇಶಿಕ ಶಾಂತಿ ಮತ್ತು ಸಾಮೂಹಿಕ ನಾಶದ ಶಸ್ತ್ರಗಳ ನಾಶ ಮತ್ತಿತರ ಕ್ಷೇತ್ರಗಳಲ್ಲಿ ಸಹಕಾರ ಸಾಧಿಸುವ ಬಗ್ಗೆ ಒಪ್ಪಂದ ಏರ್ಪಟ್ಟಿದೆ. ಇದೇ ವೇಳೆ, ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವನ್ನು ಮೇಲ್ದರ್ಜೆಗೇ ರಿಸುವ ಕುರಿತ ಕಡತಕ್ಕೆ ಎರಡೂ ದೇಶಗಳು ಸಹಿ ಮಾಡಿ ದ್ದು ಮಾತ್ರವಲ್ಲದೆ, ಒಟ್ಟು 10 ಒಪ್ಪಂದಗಳನ್ನೂ ಮಾಡಿಕೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?