ರಾಹುಲ್ ಕಾಶ್ಮೀರ ತಲುಪುವ ವೇಳೆ ಭಾರತ ಕಾಂಗ್ರೆಸ್ ಮುಕ್ತವಾಗಿರಲಿದೆ: ಬಿಜೆಪಿ ವ್ಯಂಗ್ಯ
Team Udayavani, Sep 27, 2022, 4:48 PM IST
ಗುವಾಹಟಿ: ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಯು ಕಾಶ್ಮೀರ ತಲುಪುವ ವೇಳೆಗೆ ಭಾರತವು ಕಾಂಗ್ರೆಸ್ ಮುಕ್ತವಾಗಿರಲಿದೆ ಎಂದು ಅಸ್ಸಾಂ ಬಿಜೆಪಿ ಸಚಿವ ಪಿಜುಶ್ ಹಜಾರಿಕ ವ್ಯಂಗ್ಯವಾಡಿದರು.
ಅಸ್ಸಾಂನ ಧುಬ್ರಿ ಜಿಲ್ಲೆಯ ರಾಜೀವ್ ಭವನದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವಿನ ಘರ್ಷಣೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದರು.
“ರಾಹುಲ್ ಗಾಂಧಿ ಅವರು ಕಾಶ್ಮೀರ ತಲುಪುವ ವೇಳೆ ಭಾರತವು ಕಾಂಗ್ರೆಸ್ ಮುಕ್ತವಾಗಬಹುದು” ಎಂದರು.
ಇದನ್ನೂ ಓದಿ:2.5 ಕೋಟಿ ರೂ. ಕರೆಂಟ್ ಬಿಲ್ ಬಾಕಿ; ಕತ್ತಲಲ್ಲಿ ನಡೆಯುತ್ತಾ ಭಾರತ-ದ.ಆಫ್ರಿಕಾ ಪಂದ್ಯ!
ಅಸ್ಸಾಂನ ಧುಬ್ರಿ ಜಿಲ್ಲೆಯ ರಾಜೀವ್ ಭವನದಲ್ಲಿ ಭಾರತ್ ಜೋಡೋ ಯಾತ್ರೆ ಕುರಿತು ಚರ್ಚಿಸಲು ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ದಿನದ ಬಳಿಕ ಹಜಾರಿಕ ಈ ರೀತಿ ವ್ಯಂಗ್ಯವಾಡಿದರು.
ಅಸ್ಸಾಂ ಕಾಂಗ್ರೆಸ್ ನ ಕೆಲವು ಹಿರಿಯ ನಾಯಕರ ಮುಂಭಾಗದಲ್ಲಿ ಈ ಗಲಾಟೆ ನಡೆದಿದೆ. ಭಾರತ್ ಜೋಡೊ ಯಾತ್ರೆಯು ನವೆಂಬರ್ 1ರಂದು ಅಸ್ಸಾಂಗೆ ಕಾಲಿರಲಿದೆ. ಈ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ಗಲಾಟೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ
Gujarat University;ದಾಳಿಯ ಬಳಿಕ ವಿದೇಶಿ ವಿದ್ಯಾರ್ಥಿಗಳ ಸ್ಥಳಾಂತರ: ಭದ್ರತೆ ಬಿಗಿ