ರಾಹುಲ್ ಕಾಶ್ಮೀರ ತಲುಪುವ ವೇಳೆ ಭಾರತ ಕಾಂಗ್ರೆಸ್ ಮುಕ್ತವಾಗಿರಲಿದೆ: ಬಿಜೆಪಿ ವ್ಯಂಗ್ಯ
Team Udayavani, Sep 27, 2022, 4:48 PM IST
ಗುವಾಹಟಿ: ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಯು ಕಾಶ್ಮೀರ ತಲುಪುವ ವೇಳೆಗೆ ಭಾರತವು ಕಾಂಗ್ರೆಸ್ ಮುಕ್ತವಾಗಿರಲಿದೆ ಎಂದು ಅಸ್ಸಾಂ ಬಿಜೆಪಿ ಸಚಿವ ಪಿಜುಶ್ ಹಜಾರಿಕ ವ್ಯಂಗ್ಯವಾಡಿದರು.
ಅಸ್ಸಾಂನ ಧುಬ್ರಿ ಜಿಲ್ಲೆಯ ರಾಜೀವ್ ಭವನದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವಿನ ಘರ್ಷಣೆಯ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದರು.
“ರಾಹುಲ್ ಗಾಂಧಿ ಅವರು ಕಾಶ್ಮೀರ ತಲುಪುವ ವೇಳೆ ಭಾರತವು ಕಾಂಗ್ರೆಸ್ ಮುಕ್ತವಾಗಬಹುದು” ಎಂದರು.
ಇದನ್ನೂ ಓದಿ:2.5 ಕೋಟಿ ರೂ. ಕರೆಂಟ್ ಬಿಲ್ ಬಾಕಿ; ಕತ್ತಲಲ್ಲಿ ನಡೆಯುತ್ತಾ ಭಾರತ-ದ.ಆಫ್ರಿಕಾ ಪಂದ್ಯ!
ಅಸ್ಸಾಂನ ಧುಬ್ರಿ ಜಿಲ್ಲೆಯ ರಾಜೀವ್ ಭವನದಲ್ಲಿ ಭಾರತ್ ಜೋಡೋ ಯಾತ್ರೆ ಕುರಿತು ಚರ್ಚಿಸಲು ನಡೆದ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ದಿನದ ಬಳಿಕ ಹಜಾರಿಕ ಈ ರೀತಿ ವ್ಯಂಗ್ಯವಾಡಿದರು.
ಅಸ್ಸಾಂ ಕಾಂಗ್ರೆಸ್ ನ ಕೆಲವು ಹಿರಿಯ ನಾಯಕರ ಮುಂಭಾಗದಲ್ಲಿ ಈ ಗಲಾಟೆ ನಡೆದಿದೆ. ಭಾರತ್ ಜೋಡೊ ಯಾತ್ರೆಯು ನವೆಂಬರ್ 1ರಂದು ಅಸ್ಸಾಂಗೆ ಕಾಲಿರಲಿದೆ. ಈ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ಗಲಾಟೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ