ಪಾಕಿಗೆ ನೀಡಿದ್ದ ವಿಶೇಷ ಒಲುಮೆಯ ಸ್ಥಾನಮಾನ ಹಿಂಪಡೆದ ಭಾರತ
Team Udayavani, Feb 15, 2019, 5:48 AM IST
ಹೊಸದಿಲ್ಲಿ : 43 ಸಿಆರ್ಪಿಎಫ್ ಯೋಧರನ್ನು ಬಲಿಪಡೆದಿರುವ ಜಮ್ಮು ಕಾಶ್ಮೀರದ ಆವಂತಿಪೋರಾ ಉಗ್ರ ದಾಳಿಯ ಫಲಶ್ರುತಿ ಎಂಬಂತೆ ಭಾರತ ತಾನು ಪಾಕಿಸ್ಥಾನಕ್ಕೆ ಈ ಹಿಂದೆ ನೀಡಿದ್ದ ವಿಶೇಷ ಒಲುಮೆಯ ಸ್ಥಾನಮಾನವನ್ನು(Most Favoured Nation status) ಹಿಂದೆಗೆದುಕೊಂಡಿದೆ.
ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ನಡೆಸಿರುವ ಈ ಅತ್ಯಂತ ಘೋರ ಹಾಗೂ ವಿನಾಶಕಾರಿ ದಾಳಿಗಾಗಿ ಪಾಕಿಸ್ಥಾನಕ್ಕೆ ತಕ್ಕುದಾದ ಪಾಠವನ್ನು ಕಲಿಸಲು ಭಾರತ ನಿರ್ಧರಿಸಿದೆ.
ಆವಂತಿಪೋರಾ ಉಗ್ರ ದಾಳಿಯಲ್ಲಿ ಪಾಕಿಸ್ಥಾನದ ಐಎಸ್ಐ ಗುಪ್ತಚರ ಸಂಸ್ಥೆಯ ಕೈವಾಡ ಇರುವುದನ್ನು ಅಮೆರಿಕ ಕೂಡ ಶಂಕಿಸಿದೆ.
ಪ್ರಧಾನಿ ನರೇಂದ್ರ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆಯಲ್ಲಿ ಭಾರತದ ರಣತಂತ್ರ ಹೇಗಿರಬೇಕು ಎಂಬುದನ್ನು ಚರ್ಚಿಸಲಾಗಿದೆ. ಸಭೆಯಲ್ಲಿ ರಕ್ಷಣಾ ಸಚಿವರು, ಗೃಹ ವ್ಯವಹಾರಗಳ ಸಚಿವರು, ವಿದೇಶ ವ್ಯವಹಾರ ಸಚಿವರು, ಹಣ ಕಾಸು ಸಚಿವರು ಮತ್ತು ಸದಸ್ಯರು ಪಾಲ್ಗೊಂಡಿದ್ದಾರೆ.
ನಿನ್ನೆ ಗುರುವಾರ ಮಧ್ಯಾಹ್ನ 3.15ರ ಸುಮಾರಿಗೆ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ ಜೈಶ್ ಉಗ್ರ ಸ್ಫೋಟಕ ತುಂಬಿದ್ದ ವಾಹನವನ್ನು ಸಿಆರ್ಪಿಎಫ್ ಯೋಧರ ವಾಹನದ ಮೇಲೆ ನುಗ್ಗಿಸಿ ಭೀಕರ ಆತ್ಮಾಹುತಿ ದಾಳಿ ನಡೆಸಿ 43 ಯೋಧರನ್ನು ಬಲಿಪಡೆದಿದ್ದ.
ಕಳೆದ ವರ್ಷ ವಷ್ಟೇ ಜೈಶ್ ಉಗ್ರ ಸಂಘಟನೆಯನ್ನು ಸೇರಿಕೊಂಡಿದ್ದ ಎನ್ನಲಾದ ಪುಲ್ವಾಮಾ ನಿವಾಸಿ ಆದಿಲ್ ಅಹ್ಮದ್ ಈ ದಾಳಿ ನಡೆಸಿದ್ದ. ಇದನ್ನು ಅನುಸರಿಸಿ ಆತನ ಆತ್ಮಾಹುತಿ ದಾಳಿಯ ವಿಡಿಯೋ ಬಿಡುಗಡೆಗೊಂಡಿದ್ದು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಇದಕ್ಕೆ ಹೊಣೆ ಹೊತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ