ರಫೇಲ್‌ ಸಡ್ಡು: ಜುಲೈ ಅಂತ್ಯಕ್ಕೆ ಬರುವ ಸಮರ ವಿಮಾನ ನೇರ ಲಡಾಖ್‌ಗೆ?


Team Udayavani, Jul 20, 2020, 6:57 AM IST

ರಫೇಲ್‌ ಸಡ್ಡು: ಜುಲೈ ಅಂತ್ಯಕ್ಕೆ ಬರುವ ಸಮರ ವಿಮಾನ ನೇರ ಲಡಾಖ್‌ಗೆ?

ಹೊಸದಿಲ್ಲಿ: ಈ ಮಾಸಾಂತ್ಯಕ್ಕೆ ರಫೇಲ್‌ ಯುದ್ಧ ವಿಮಾನಗಳ ಮೊದಲ ಕಂತು ಫ್ರಾನ್ಸ್‌ನಿಂದ ಭಾರತಕ್ಕೆ ಆಗಮಿಸಲಿವೆ.

ಇವುಗಳನ್ನು ನೇರವಾಗಿ ಲಡಾಖ್‌ ಗಡಿಯಲ್ಲಿ ನಿಯೋಜಿಸಲು ಚಿಂತನೆ ನಡೆದಿದೆ.

ಇದೇ ವಾರ, ಜು.22ರಿಂದ ಎರಡು ದಿನಗಳ ಕಾಲ ಭಾರತೀಯ ವಾಯುಪಡೆಯ ಉನ್ನತ ಕಮಾಂಡರ್‌ಗಳ ಸಭೆ ನಡೆಯಲಿದೆ.

ಇದರಲ್ಲಿ ಲಡಾಖ್‌ ಸನಿಹದ ನೆಲೆಗಳಲ್ಲಿ ರಫೇಲ್‌ ಸಮರ ವಿಮಾನಗಳನ್ನು ನೆಲೆಗೊಳಿಸುವ ವಿಚಾರವೇ ಮುಖ್ಯವಾಗಿ ಚರ್ಚೆಯಾಗಲಿದೆ ಎಂದು ವಾಯುಪಡೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಭಾರತ – ಚೀನ ನಡುವೆ ಉದ್ವಿಗ್ನ ಸ್ಥಿತಿ ಹಿನ್ನೆಲೆಯಲ್ಲಿಯೇ ಈ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಏರ್‌ ಚೀಫ್ ಮಾರ್ಷಲ್‌ ಆರ್‌.ಕೆ.ಎಸ್‌. ಭದೌರಿಯಾ ಮತ್ತು ವಾಯುಪಡೆಯ ಎಲ್ಲ ಏಳು ಕಮಾಂಡರ್‌ಗಳು ಭಾಗಿಯಾಗಲಿದ್ದಾರೆ.

ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಪರಿಸ್ಥಿತಿ ಮತ್ತು ಚೀನಕ್ಕೆ ತಿರುಗೇಟು ನೀಡುವ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಈಗಾಗಲೇ ಆಗಿರುವ ಯುದ್ಧ ವಿಮಾನ ನಿಯೋಜನೆಯ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಭಾರತೀಯ ವಾಯುಪಡೆ ತನ್ನ ಬತ್ತಳಿಕೆಯಲ್ಲಿರುವ ಎಲ್ಲ ಅತ್ಯಾಧುನಿಕ ಸಮರ ವಿಮಾನಗಳನ್ನು ಎಲ್‌ಎಸಿಯತ್ತ ಕಳುಹಿಸಿದೆ. ಇದರ ಜತೆಗೆ ಅತ್ಯಾಧುನಿಕ ಅಪಾಚೆ ಹೆಲಿಕಾಪ್ಟರ್‌ಗಳನ್ನೂ ಮುಂಚೂಣಿಯ ನೆಲೆಗಳಲ್ಲಿ ನಿಯೋಜಿಸಿದೆ.

ನೌಕಾಪಡೆಯಿಂದ ಅಭ್ಯಾಸ
ಎಲ್‌ಎಸಿಯಿಂದ ಚೀನ ಇನ್ನೂ ಪೂರ್ಣವಾಗಿ ಹಿಂದೆ ಸರಿಯದಿರುವ ಕಾರಣ ಭಾರತೀಯ ನೌಕಾಪಡೆಯು ಅಂಡಮಾನ್‌ ಮತ್ತು ನಿಕೋಬಾರ್‌ ಬಳಿಯ ಸಮುದ್ರ ಪ್ರದೇಶದಲ್ಲಿ ಅಭ್ಯಾಸ ನಡೆಸುತ್ತಿದೆ. ಈಸ್ಟರ್ನ್ ನೇವಲ್‌ ಕಮಾಂಡ್‌ ಹಾಗೂ ಅಂಡಮಾನ್‌ ಮತ್ತು ನಿಕೋಬಾರ್‌ ನೇವಲ್‌ ಕಮಾಂಡ್‌ಗಳು ಈ ಅಭ್ಯಾಸದಲ್ಲಿ ಭಾಗಿಯಾಗಿವೆ.

ರಫೇಲ್‌ನಿಂದ ನೂರಾನೆ ಬಲ
ರಫೇಲ್‌ ಯುದ್ಧ ವಿಮಾನಗಳನ್ನೂ ಎಲ್‌ಎಸಿ ಬಳಿ ನಿಯೋಜಿಸಿದರೆ ಭಾರತದ ಕೈ ಮೇಲಾಗುತ್ತದೆ ಎಂಬುದು ವಾಯುಪಡೆಯ ಹಿರಿಯ ಅಧಿಕಾರಿಗಳ ನಿಲುವು. ರಫೇಲ್‌ಗ‌ಳು ಅತ್ಯಾಧುನಿಕವಾಗಿರುವುದಷ್ಟೇ ಅಲ್ಲದೆ, ಹೊಸ ಶಸ್ತ್ರಾಸ್ತ್ರಗಳ ಸಹಿತ ಹೋರಾಡಬಲ್ಲವು. ರಫೇಲ್‌ನಲ್ಲಿ ಏರ್‌ ಟು ಏರ್‌ ಕ್ಷಿಪಣಿಗಳನ್ನೂ ಅಳವಡಿಸಿ ದಾಳಿ ನಡೆಸಬಹುದು. ಇದರಿಂದ ದಕ್ಷಿಣ ಏಶ್ಯಾದಲ್ಲಿ ಭಾರತವು ಚೀನ ಮತ್ತು ಪಾಕಿಸ್ಥಾನಗಳಿಗಿಂತ ಬಲಿಷ್ಠವಾಗುತ್ತದೆ.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.