ಭಾರತ ಮೂಲದ 15 ವರ್ಷದ ಸಂಶೋಧಕಿಗೆ ಟೈಮ್ಸ್‌  ಪುರಸ್ಕಾರ


Team Udayavani, Dec 5, 2020, 6:17 AM IST

Times

ಟೈಮ್ಸ್‌ ನಿಯತಕಾಲಿಕವು ಇದೇ ಮೊದಲ ಬಾರಿ ಪರಿಚಯಿಸಿರುವ ಪ್ರತಿಷ್ಠಿತ “ಕಿಡ್‌ ಆಫ್ ದಿ ಇಯರ್‌’ ಪುರಸ್ಕಾರಕ್ಕೆ ಭಾರತ ಮೂಲದ ಸಂಶೋಧಕಿ 15 ವರ್ಷದ ಗೀತಾಂಜಲಿ ರಾವ್‌ ಆಯ್ಕೆಯಾಗಿದ್ದಾರೆ. ಈ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದ್ದ 5 ಸಾವಿರ ಮಕ್ಕಳಲ್ಲಿ ಗೀತಾಂಜಲಿ ಆಯ್ಕೆಯಾಗಿರುವುದು ವಿಶೇಷ. ಕಲುಷಿತ ನೀರಿನ ಶುದ್ಧೀಕರಣ, ಮಾದಕ ವ್ಯಸನದಿಂದ ಮುಕ್ತವಾಗುವುದು ಮತ್ತು ಸೈಬರ್‌ ಬುಲ್ಲೀಯಿಂಗ್‌(ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆ)ನಂಥ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿಶಿಷ್ಟ ಸಂಶೋಧನೆ ಕೈಗೊಂಡಿದ್ದಾರೆ ಗೀತಾಂಜಲಿ. ಹಾಲಿವುಡ್‌ನ‌ ಖ್ಯಾತ ನಟಿ ಏಂಜಲಿನಾ ಜೋಲಿ ಈ ನಿಟ್ಟಿನಲ್ಲಿ ಗೀತಾಂಜಲಿಯೊಂದಿಗೆ ವರ್ಚುವಲ್‌ ಸಂದರ್ಶನ ನಡೆಸಿದ್ದು, ಸಂದರ್ಶನದ ಆಯ್ದ ಭಾಗ ಇಲ್ಲಿದೆ…

 ವಿಜ್ಞಾನದಲ್ಲಿ ನಿನಗೆ ಒಲವು ಇದೆ ಎಂದು ಯಾವಾಗ ಅರಿವಾಯಿತು?
ಇದು ಒಂದೇ ದಿನಕ್ಕೆ ಆಗಿದ್ದಲ್ಲ. ಜನರ ಮುಖದ ಮೇಲೆ ಮಂದಹಾಸ ಮೂಡಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಈ ಭಾವನೆಯೇ ಮುಂದೆ ನಾವಿರುವ ಜಾಗದಲ್ಲಿ, ಸಮುದಾಯದಲ್ಲಿ ಗುಣಾತ್ಮಕತೆಯನ್ನು ತರುವುದು ಹೇಗೆ ಎನ್ನುವ ಪ್ರಶ್ನೆಯಾಗಿ ಬದಲಾಯಿತು. ಈ ಬದಲಾವಣೆಯನ್ನು ತರಲು ವಿಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಎಂದು ಯೋಚಿಸಲಾರಂಭಿಸಿದೆ. ನನ್ನ 10ನೇ ವಯಸ್ಸಿನಲ್ಲಿ ಅಪ್ಪ ಅಮ್ಮನಿಗೆ ಹೇಳಿದೆ- ನನಗೆ ಕಾರ್ಬನ್‌ ನ್ಯಾನೋಟ್ಯೂಬ್‌ ಸೆನ್ಸರ್‌ ಟೆಕ್ನಾಲಜಿಯಲ್ಲಿ ಸಂಶೋಧನೆ ಮಾಡಲು ಆಸಕ್ತಿ ಇದೆ ಎಂದು. ಇದನ್ನು ಕೇಳಿ ನನ್ನ ಅಮ್ಮ ಕೇಳಿದಳು- ಹಂಗಂದ್ರೆ ಏನು?!(ನ್ಯಾನೋಟ್ಯೂಬ್‌ ಸೆನ್ಸರ್‌ಗಳು ನೀರಿನಲ್ಲಿನ ರಾಸಾಯನಿಕಗಳನ್ನು ಪತ್ತೆ ಹಚ್ಚಲು ಸಹಕರಿಸುತ್ತವೆ). ಈ ಕೆಲಸವನ್ನು ಯಾರೂ ಮಾಡಲಿಲ್ಲ ಅಂದರೆ, ನಾನು ಮಾಡುತ್ತೇನೆ!

 ನಿನ್ನ ಹೊಸ ಸಂಶೋಧನೆ “ಕೈಂಡ್ಲಿ’ ಆ್ಯಪ್‌, ಸೈಬರ್‌ ನಿಂದನೆಯನ್ನು ತಡೆಯಲು ಸಹಕರಿಸುವುದೇ?
ಈ ಆ್ಯಪ್‌ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಆಧರಿಸಿ ಕೆಲಸ ಮಾಡುತ್ತದೆ. ಯಾವ ಪದಗಳು ನಿಂದನೀಯವಾಗಿರುತ್ತವೆ, ಅವಾಚ್ಯವಾಗಿರುತ್ತವೆ ಎನ್ನುವುದನ್ನೆಲ್ಲ ಸಂಗ್ರಹಿಸಿ ಕೋಡ್‌ ಮಾಡುತ್ತಾ ಹೋದೆ. ನೀವು ಸಂದೇಶ ಟೈಪ್‌ ಮಾಡುವಾಗ ಆ ಪದಗಳನ್ನು ಬಳಸಿದಿರಿ ಎಂದುಕೊಳ್ಳಿ. ಆಗ ಈ ಆ್ಯಪ್‌ ನೀವು ಬಳಸುವ ಪದ ಅವಾಚ್ಯವಾಗಿದೆಯೇ, ನಿಂದನೆ ಮಾಡುವಂತಿದೆಯೇ ಎನ್ನುವುದನ್ನು ತಿಳಿಸುತ್ತದೆ. ಸಾಮಾನ್ಯವಾಗಿ ಹದಿಹರೆಯದವರು ಸಿಟ್ಟಿನ ಭರದಲ್ಲಿ ಏನೇನೋ ಬರೆದುಬಿಡುತ್ತಾರೆ. ಈ ಆ್ಯಪ್‌ ಅವರಿಗೆ ಇನ್ನೊಮ್ಮೆ ಯೋಚಿಸುವಂತೆ ಸಲಹೆ ನೀಡುತ್ತದೆ.

 ಸಂಶೋಧನೆಯಲ್ಲಿ ಆಸಕ್ತಿಯಿರುವ ಮಕ್ಕಳಿಗಾಗಿ ಕಾರ್ಯಾಗಾರಗಳನ್ನೂ ನಡೆಸುತ್ತಿರುವೆ. ಈ ಬಗ್ಗೆ ಹೇಳು?
ಶಾಂಘೈ ಇಂಟರ್‌ನ್ಯಾಶನಲ್‌ ಸೈನ್ಸ್‌ ಗ್ರೂಪ್‌, ಲಂಡನ್‌ನ ರಾಯಲ್‌ ಅಕಾಡೆಮಿ ಆಫ್ ಎಂಜಿನಿಯರಿಂಗ್‌ ಸಹಭಾಗಿತ್ವದಲ್ಲಿ ಸಂಶೋಧನ ಕಾರ್ಯಾಗಾರಗಳನ್ನು ಏರ್ಪಡಿಸುತ್ತಿದ್ದೇನೆ. ಇದರಲ್ಲಿ ಇದುವರೆಗೂ 30 ಸಾವಿರ ಮಕ್ಕಳು ಭಾಗವಹಿಸಿದ್ದಾರೆ. ಅವರು ಅಲ್ಲಿ ತಮ್ಮ ಐಡಿಯಾಗಳನ್ನು ಹೇಳುತ್ತಾರೆ. ತಜ್ಞರು ಮಾರ್ಗದರ್ಶನ ನೀಡುತ್ತಾರೆ.

 ಈಗ ಮತ್ಯಾವ ಸಂಶೋಧನೆಯಲ್ಲಿ ತೊಡಗಿರುವೆ?
ನೀರಿನಲ್ಲಿನ ಜೈವಿಕ ಮಾಲಿನ್ಯಕಾರಕಗಳನ್ನು ಸುಲಭವಾಗಿ ಪತ್ತೆ ಹಚ್ಚುವ ಮಾರ್ಗವನ್ನು ಅನ್ವೇಷಿಸುತ್ತಿದ್ದೇನೆ. ತೃತೀಯ ರಾಷ್ಟ್ರಗಳು ತಮ್ಮ ನೀರಿನಲ್ಲಿ ಮಾಲಿನ್ಯಕಾರಕಗಳನ್ನು ಖಚಿತವಾಗಿ ಹಾಗೂ ಅತ್ಯಂತ ಕಡಿಮೆ ದರದಲ್ಲಿ ಪತ್ತೆಹಚ್ಚುವಂತಾಗಬೇಕು ಎನ್ನುವುದು ನನ್ನ ಆಸೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.