Watch; ಕೋವಿಡ್ ಭೀತಿ ನಡುವೆ; Pokಯಲ್ಲಿ ಪಾಕ್ ಕಳ್ಳಾಟ, ಉಗ್ರರ ಅಡಗುತಾಣ ಧ್ವಂಸಗೊಳಿಸಿದ ಸೇನೆ
ಪಾಕಿಸ್ತಾನ ಸೇನೆ ಐವರು ಉಗ್ರರನ್ನು ಅಕ್ರಮವಾಗಿ ಕೇರನ್ ಸೆಕ್ಟರ್ ನೊಳಗೆ ಏಪ್ರಿಲ್ 1ರಂದು ಕಳುಹಿಸಿತ್ತು.
Team Udayavani, Apr 11, 2020, 1:45 PM IST
ಶ್ರೀನಗರ್: ಕೋವಿಡ್ 19 ವೈರಸ್ ಅಟ್ಟಹಾಸ ಒಂದೆಡೆಯಾದರೆ, ಸದ್ದಿಲ್ಲದೆ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ದಾಳಿ ನಡೆಸಲು ಸಂಚು ನಡೆಸಿ ಠಿಕಾಣಿ ಹೂಡಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನಾಪಡೆ ಶುಕ್ರವಾರ ಕರಾರುವಕ್ಕಾಗಿ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಸೇನಾಪಡೆಯ ಕದನವಿರಾಮ ಉಲ್ಲಂಘನೆಗೆ ತಕ್ಕ ತಿರುಗೇಟು ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಸೇನಾ ಮೂಲಗಳು ನ್ಯೂಸ್ ಏಜೆನ್ಸಿ ಎಎನ್ ಐಗೆ ತಿಳಿಸಿರುವ ಪ್ರಕಾರ, ಪಾಕಿಸ್ತಾನ ಸೇನೆ ಐವರು ಉಗ್ರರನ್ನು ಅಕ್ರಮವಾಗಿ ಕೇರನ್ ಸೆಕ್ಟರ್ ನೊಳಗೆ ಏಪ್ರಿಲ್ 1ರಂದು ಕಳುಹಿಸಿತ್ತು. ಈ ಉಗ್ರರು ಗಡಿ ನಿಯಂತ್ರಣ ರೇಖೆಯಲ್ಲಿರುವ ಸೇನಾಪಡೆಯನ್ನು ಗುರಿಯಾಗಿರಿಸಿ ದಾಳಿ ನಡೆಸಲು ಸಿದ್ಧತೆ ನಡೆಸಿರುವುದಾಗಿ ವಿವರಿಸಿದೆ.
ಈ ಜಿದ್ದಾಜಿದ್ದಿಯ ಹೋರಾಟದಲ್ಲಿ ಸೇನೆಯ ವಿಶೇಷ ಪಡೆ ಐವರು ಉಗ್ರರನ್ನು ಹೊಡೆದುರುಳಿಸಿತ್ತು. ಆದರೆ ಈ ಕದನದಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಯ ಐದು ಯೋಧರು ಹುತಾತ್ಮರಾಗಿರುವುದಾಗಿ ಮೂಲಗಳು ತಿಳಿಸಿದೆ.
#WATCH: Amateur video emerges from PoK of Indian Army guns targeting terror launch pads in Keran Sector in PoK. (10.04.2020) pic.twitter.com/VwrRdoLYlk
— ANI (@ANI) April 11, 2020
ಭಾರತೀಯ ಸೇನಾಪಡೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿರುವುದನ್ನು ಡ್ರೋಣ್ ನಲ್ಲಿ ಸೆರೆಹಿಡಿಯಲಾಗಿದ್ದು, ಈ ವಿಡಿಯೋವನ್ನು ಎಎನ್ ಐ ಪೋಸ್ಟ್ ಮಾಡಿದೆ. ಈ ಪ್ರದೇಶದಲ್ಲಿ ಮತ್ತೊಂದು ಉಗ್ರರ ತಂಡ ಒಳನುಸುಳಲು ತಯಾರಾಗಿದೆ ಎಂದು ಸೇನಾ ಮೂಲಗಳು ತಿಳಿಸಿದೆ. ಭಾರತೀಯ ಸೇನೆ ಸ್ಫೋಟಕವನ್ನು ಎಸೆದ ಪರಿಣಾಮ ಪಾಕ್ ಸೇನೆಯ ಯೋಧರು ಸಾವನ್ನಪ್ಪಿರುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ